ಡೆಲ್ ಉದ್ಯೋಗಿ ಪಾಯಲ್ ಹತ್ಯೆ ಸಿಬಿಐ ತನಿಖೆಗೆ

ಯುವತಿ ತಂದೆ ದೀನದಯಾಳ್ ಸುರೇಖಾ ಮತ್ತು ಆರೋಪಿ ಜೇಮ್ಸ ಕುಮಾರ್ ರೇ ಸಲ್ಲಿಸಿದ ಎರಡು ಪ್ರತ್ಯೇಕ ಮೇಲ್ಮನವಿಗಳ ವಿಚಾರಣೆ ನಡೆಸಿದ ನ್ಯಾ. ಕೆ.ಎಸ್.ರಾಧಾಕೃಷ್ಣನ್ ಹಾಗೂ ನ್ಯಾ. ದೀಪಕ್ ಮಿಶ್ರ ಅವರಿದ್ದ ನ್ಯಾಯಪೀಠ ಸಿಬಿಐ ತನಿಖೆಗೆ ನಿರ್ದೇಶಿಸಿತು.
ಡೆಲ್ ಬಿಪಿಒ ಉದ್ಯೋಗಿ, ಜೆಪಿನಗರ ಏಳನೇ ಹಂತದ ನಿವಾಸಿ ಪಾಯಲ್ ಸುರೇಖಾ(29) ಅಮಾನುಷ ಕೊಲೆ ಕೇಸ್ ಕ್ಲೋಸ್ ಆಗಿದೆ. ಈ ಪ್ರಕರಣ ತನಿಖೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಷರಾ ಹಾಕಿ ಸಿಬಿಐ ತನ್ನ ಅಫಿಡವಿಟ್ ಅನ್ನು ಗುರುವಾರ(ಏ.19) ಹೈಕೋರ್ಟ್ ಗೆ ಸಲ್ಲಿಸಿದೆ.
ಸಿಬಿಐ ಸಲ್ಲಿಸಿದ ಅಫಿಡವಿಟ್ ಪರಿಶೀಲಿಸಿದ ನ್ಯಾ ಆನಂದ್ ಅವರು ಎಸಿಪಿ ಜಿತೇಂದ್ರನಾಥ್ ಅವರಿಗೆ ನಿರ್ದೇಶನ ನೀಡಿ ಡಿಸಿಪಿ ಮಟ್ಟದ ಅಧಿಕಾರಿಗಳಿಂದ ತನಿಖೆ ಮುಂದುವರೆಸುವಂತೆ ಸೂಚಿಸಲಾಗಿತ್ತು.
ಅಸ್ಸಾಂ ಮೂಲದ ಪಾಯಲ್ (29) ಅವರನ್ನು ಡಿ.17,2010ರಂದು ಜೆಪಿ ನಗರದ ತಮ್ಮ ಅಪಾರ್ಟ್ಮೆಂಟ್ ನಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸಿಸಿಬಿ ಪೊಲೀಸರು ಜೇಮ್ಸ ಕುಮಾರ್ ರೇ ಅವರನ್ನು ನಾಲ್ಕು ದಿನದ ನಂತರ ಬಂಧಿಸಿದ್ದರು. ಅನಂತರ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದ ರೇ ಸಿಬಿಐ ತನಿಖೆ ನಡೆಸುವಂತೆ ಮನವಿ ಮಾಡಿದ್ದರು.
ಸಿಬಿಐ ನಿರ್ಣಯಕ್ಕೆ ಕಾರಣ? : ಕೆಳ ಹಂತದ ನ್ಯಾಯಾಲಯ ಸಿಬಿಐಗೆ ನಿರ್ದೇಶನ ನೀಡುವ ಅಧಿಕಾರ ಇಲ್ಲ ಎನ್ನುವ ಸಣ್ಣ ಕಾರಣ ಹಿಡಿದುಕೊಂಡು ತನಿಖೆ ವಿಳಂಬಗೊಳಿಸಿದ ಸಿಬಿಐ, ಈಗ ಕೇಸ್ ನಿಂದ ಕೈತೊಳೆದುಕೊಂಡಿದೆ.
ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಮಾತ್ರ ತನಿಖೆ ಆದೇಶಿಸಿದರೆ ಪ್ರಕರಣ ಕೈಗೆತ್ತಿಕೊಳ್ಳಬೇಕು ಎಂಬ ಅಲಿಖಿತ ನಿಯಮವನ್ನು ಪಾಲಿಸುತ್ತಾ ಬಂದಿರುವ ಸಿಬಿಐ ಸೂಪಿರಿಯಾರಿಟಿ ಕಾಂಪ್ಲೆಕ್ಸ್ ಗೆ ಒಳಗಾದಂತೆ ನಡೆದುಕೊಳ್ಳುತ್ತಿದೆ.
ಪೊಲೀಸ್ ಫೈಲ್ ಕ್ಲೋಸ್ ಆಗಿದೆ: ಪಾಯಲ್ ಸುರೇಖಾ ಕೊಲೆ ಕೇಸಿಗೆ ಮುಕ್ತಾಯ ಹಾಡಿರುವ ಜೆಪಿ ನಗರ ಪೊಲೀಸರು, ಪಾಯಲ್ ಪತಿ ಅನಂತ್ ನಾರಾಯಣ ಮಿಶ್ರಾ ಹೇಳಿಕೆ ಪಡೆದು ಆತನ ಬಿಸಿನೆಸ್ ಪಾರ್ಟ್ನರ್ ಜೇಮ್ಸ್ ಕುಮಾರ್ ರಾಯ್ ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದರು.
ಆದರೆ, ಪಾಯಲ್ ತಂದೆ ಮಾತ್ರ 'ನನ್ನ ಮಗಳ ಅತ್ತೆ ಮನೆಯರ ಕೈವಾಡ ಇದೆ ಎಂದು ಶಂಕೆ ವ್ಯಕ್ತಪಡಿಸಿ ಸಿಬಿಐ ತನಿಖೆಗೆ ಆಗ್ರಹಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಸಿಬಿಐ ಸಂಸ್ಥೆಯ ಬದಲಿಗೆ ಪೊಲೀಸರ ಕೈಗೆ ಕೇಸ್ ಒಪ್ಪಿಸಿತ್ತು.
ಮಹಿಳೆ ಪತಿ ಕಟಕ್ನ ಅನಂತ ನಾರಾಯಣ ಮಿಶ್ರ ಅವರನ್ನು ವಿಚಾರಣೆಗೆ ಒಳಪಡಿಸಿಲ್ಲ ಸುಪ್ರೀಂ ಕೋರ್ಟ್ ಗೆ ಪಾಯಲ್ ತಂದೆ ಮೇಲ್ಮನವಿ ಸಲ್ಲಿಸಿದ್ದರು. ಒರಿಸ್ಸಾದಲ್ಲಿ ಡಿವೈಎಸ್ಪಿ ಆಗಿ ಕೆಲಸ ಮಾಡುತ್ತಿರುವ ಅನಂತ ನಾರಾಯಣ ಮಿಶ್ರ ಅವರ ತಂದೆತಾಯಿ ಬೆಂಗಳೂರು ಪೊಲೀಸರ ಮೇಲೆ ಪ್ರಭಾವ ಬೀರಿ ತನಿಖೆ ದಿಕ್ಕು ತಪ್ಪಿಸಿದ್ದಾರೆ ಎಂದು ತ್ರಿಪಾಠಿ ದೂರಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications