ಮುಗಿದ 'ಆಪರೇಶನ್ ರೆಡ್ಡೀಸ್': ಲಕ್ಷ್ಮಿನಾರಾಯಣ ದಿಲ್ಲಿಯತ್ತ

ಇದರಿಂದ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜೈಲಿನಿಂದ ಹೊರಬಂದು ಶ್ರೀರಾಮುಲುವಿನ ಬಿಎಸ್ಆರ್ ಕಾಂಗ್ರೆಸ್ ಪರ ಬ್ಯಾಟಿಂಗ್ ಮಾಡಲು ಅಥವಾ ಕಾನೂನು ಸಮ್ಮತಿಸುವುದಾದರೆ ಚುನಾವಣಾ ಕಣಕ್ಕಿಳಿಯಲೂ ಮೌನ ಚಿಂತನೆಯಲ್ಲಿ ತೊಡಗಿರುವ ಜನಾರ್ದನ ರೆಡ್ಡಿಗೆ ಆನೆ ಬಲಬಂದಂತಾಗಿದೆ. ರೆಡ್ಡಿ ರೊಟ್ಟಿ, ತುಪ್ಪಕ್ಕೆ ಜಾರಿಬಿದ್ದಂತಾಗಿದೆ.
ರೆಡ್ಡಿ ಬಂಧನವಾಗಿ ಒಂದೂವರೆ ವರ್ಷವಾಗಿದ್ದು, ಇತ್ತೀಚೆಗೆ ರಾಜಕೀಯ ಸಮೀಕರಣಗಳು ಬದಲಾಗತೊಡಗಿವೆ. ಕಾಂಗ್ರೆಸ್ ಪಕ್ಷವು ರೆಡ್ಡಿ ಪಟಾಲಂ ವಿರುದ್ಧ ಮೃಧು ಧೋರಣೆ ತಾಳುತ್ತಿದೆ. ಇದಕ್ಕೆ ಜಗನ್ ಮೋಹನ್ ರೆಡ್ಡಿ ಸದ್ಯದಲ್ಲೇ ಮತ್ತೆ ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿದೆ. ಅಥವಾ ಇದೇ ಲಕ್ಷ್ಮಿನಾರಾಯಣರನ್ನು ಕಾಂಗ್ರೆಸ್ ಪಕ್ಷವು ದಾಳವಾಗಿ ಬಳಿಸಿಕೊಂಡ ಪರಿಣಾಮ ರೆಡ್ಡಿಗಳು ಅನಿವಾರ್ಯವಾಗಿ ಕಾಂಗ್ರೆಸಿನತ್ತ ಮೃಧು ಭಾವ ತಾಳುವಂತಾಗಿದೆ.
ಹಾಗಾಗಿ 'ಆಪರೇಶನ್ ರೆಡ್ಡೀಸ್' ಮುಗಿದ ಬೆನ್ನಲ್ಲೇ 7 ವರ್ಷಗಳಿಂದ ನಿಯೋಜನೆ ಮೇಲೆ ಆಂಧ ಪ್ರದೇಶದಲ್ಲಿ ಕಾರ್ಯನಿರ್ವಹಿಸಿದ್ದ ಆಂಧ್ರದವರೇ ಆದ high profile ಲಕ್ಷ್ಮಿನಾರಾಯಣ ದೆಹಲಿ ತಲುಪಿಕೊಂಡಿದ್ದಾರೆ.
ಖಡಕ್ ಅಧಿಕಾರಿ ಎಂದೇ ಹೆಸರಾಗಿದ್ದ ವಿವಿಎಲ್, ಒಎಂಸಿ ಅಕ್ರಮ ಗಣಿಗಾರಿಕೆ, ಜಗನ್ ಅಕ್ರಮ ಆಸ್ತಿ ಪ್ರಕರಣ, ಎಮ್ಮಾರ್ ಹಗರಣ, ಅದಕ್ಕೂ ಮೊದಲ ಭಾರತದ ಮಟ್ಟಿಗೆ ಅತಿ ದೊಡ್ಡ ಹಗರಣವಾದ ಸತ್ಯಂ ಕಂಪ್ಯೂಟರ್ಸ್ ಹಗರಣ ಸೇರಿದಂತೆ ಹಲವಾರು ಪ್ರಕರಣಗಳನ್ನು ಯಶಸ್ವಿಯಾಗಿ ತನಿಖೆ ನಡೆಸಿ, ಹಲವು ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಸಿಂಹಸ್ವಪ್ನರಾಗಿದ್ದರು.
ರೆಡ್ಡಿಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಲಕ್ಷ್ಮಿನಾರಾಯಣ ತಾವಿರುವವರಗೂ ಖಡಕ್ಕಾಗಿ ವಿಚಾರಣೆ ನಡೆಸಿದ್ದರು. ಇನ್ಮುಂದೆ ಪ್ರಕರಣಗಳ ತನಿಖೆಯಲ್ಲಿ ರಾಜಕೀಯ ಒತ್ತಡಗಳು ಸುಳಿಯಲಿದ್ದು, ಅದಕ್ಕೆಲ್ಲ ಮಣೆ ಹಾಕುವ ಜಾಯಮಾನ ಲಕ್ಷ್ಮಿನಾರಾಯಣ ಅವರದ್ದಲ್ಲ. ಅದಕ್ಕೆಲ್ಲ un-fit ಆಗಿರುವ ಲಕ್ಷ್ಮಿನಾರಾಯಣ ಉತ್ತರಾಭಿಮುಖವಾಗಿ ಸೀದಾ ಸಿಬಿಐ ಕೇಂದ್ರ ಕಚೇರಿ ತಲುಪಿಕೊಂಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications