ಬೆಸ್ಕಾಂ ಎಂಡಿ ಮಣಿವಣ್ಣನ್ ಗೆ ನಮ್ಮ ಬೆಂಗಳೂರು ಪ್ರಶಸ್ತಿ
ಬೆಂಗಳೂರು, ಮಾ.20: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ನಾಗರಿಕರನ್ನು ಗೌರವಿಸುವ 'ನಮ್ಮ ಬೆಂಗಳೂರು ಪ್ರಶಸ್ತಿ-2012' ಸಮಾರಂಭ ವರ್ಣರಂಜಿತವಾಗಿ ಆಯೋಜನೆಗೊಂಡಿತ್ತು. 2012ರ ಸಾಲಿನ ವರ್ಷದ ಬೆಂಗಳೂರಿಗ ಪ್ರಶಸ್ತಿ ಬೆಸ್ಕಾಂ ಎಂಡಿ ಪಿ ಮಣಿವಣ್ಣನ್ ಅವರಿಗೆ ಸಂದಿದೆ.
ಹೆಡ್ ಕಾನ್ಸ್ ಟೇಬಲ್ ಮಹದೇವ್ ಸಂಬರಗಿ, ಜಯನಗರ ಕ್ಷೇತ್ರದ ಶಾಸಕ ಬಿ.ಎನ್ ವಿಜಯ್ ಕುಮಾರ್, ಜಾರ್ಜ್ ಕನ್ನಂತ್ ನಮ್ ಅವರು ಪ್ರಶಸ್ತಿಗಳಿಸಿದ ಪ್ರಮುಖರು. 2012ನೇ ಸಾಲಿನ ಪ್ರಶಸ್ತಿ ಆಯ್ಕೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು ಸುಮಾರು 61,000 ನಾಮಾಂಕಣ ಬಂದಿತ್ತು ಎಂದು ನಮ್ಮ ಬೆಂಗಳೂರು ಫೌಂಡೇಶನ್ ನ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

8 ವಿಭಾಗಗಳಲ್ಲಿ ಅಂತಿಮವಾಗಿ 52 ಜನರನ್ನು ಆಯ್ಕೆ ಮಾಡಲಾಯಿತು. ಕಲೆ, ಸಂಸ್ಕೃತಿ, ಸಮಾಜ ಸೇವೆ, ಸಂಗೀತ, ಸಾಹಿತ್ಯ, ಕಾನೂನು, ಮಾಧ್ಯಮ, ಪರಿಸರ ಹೀಗೆ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗೌರವಿಸಲಾಯಿತು. ಮಲ್ಲೇಶ್ವರ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡದ ಹಿರಿಯ ಭಾಷಾ ವಿದ್ವಾಂಸ ಜಿ ವೆಂಕಟ ಸುಬ್ಬಯ್ಯ, ಪ್ರೊ ಜಿಎಸ್ ಸಿದ್ದಲಿಂಗಯ್ಯ ಅವರು ಪಾಲ್ಗೊಂಡಿದ್ದರು.
ಪ್ರಶಸ್ತಿ ವಿಜೇತರ ಪಟ್ಟಿ ಇಂತಿದೆ:
* ವರ್ಷದ ಬೆಂಗಳೂರಿಗ ಪ್ರಶಸ್ತಿ: ಪಿ ಮಣಿವಣ್ಣನ್, ಬೆಸ್ಕಾಂ ಎಂಡಿ
* ಉತ್ತಮ ನಾಗರಿಕ ಪ್ರಶಸ್ತಿ: ಫಾದರ್ ಜಾರ್ಜ್ ಕನ್ನಂತ್ನಮ್, ಫೌಂಡರ್ ಸುಮನಹಳ್ಳಿ ಸೊಸೈಟಿ
* ಉತ್ತಮ ಯುವ ನಾಗರಿಕ: ಕುಲದೀಪ್ ದಾಂಟೆವಾಡಿಯಾ
* ನಾಗರಿಕರ ಸಮೂಹ: ಪುಟ್ಟೇನಹಳ್ಳಿ ನಾಗರಿಕರ ಕೆರೆ ಅಭಿವೃದ್ಧಿ ಟ್ರಸ್ಟ್ (PNLIT)
* ಸರ್ಕಾರಿ ಅಧಿಕಾರಿ: ಬಿ.ಜಿ. ಚೆಂಗಪ್ಪ, ರಾಜ್ಯ ಅಗ್ನಿಶಾಮಕದಳ ಹಾಗೂ ತುರ್ತು ಸೇವೆ ನಿರ್ದೇಶಕ
* ಸರ್ಕಾರಿ ಉದ್ಯೋಗಿ: ಮಹದೇವ ರಾಜಪ್ಪ ಸಂಬರಗಿ, ಪೊಲೀಸ್ ಹೆಡ್ ಕಾನ್ಸ್ ಟೇಬಲ್
* ಸರ್ಕಾರಿ ಸಂಸ್ಥೆ: ಬೆಂಗಳೂರು ಟ್ರಾಫಿಕ್ ಪೊಲೀಸ್
* ಸಮಾಜ ಸೇವೆ: ವೈಎಸ್ ಪವಿತ್ರ
* ಚುನಾಯಿತ ಪ್ರತಿನಿಧಿ : ವಿಜಯಕುಮಾರ್, ಶಾಸಕ, ಜಯನಗರ
* Britannia, ಘನ ತ್ಯಾಜ್ಯ ವಿಲೇವಾರಿ ನಿರ್ವಹಣೆ
* ಮಾಧ್ಯಮ: ಸೀತಾಲಕ್ಷ್ಮಿ, ಮೆಟ್ರೋ ಸಂಪಾದಕಿ, ಟೈಮ್ಸ್ ಆಫ್ ಇಂಡಿಯಾ
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications