ಯುದ್ಧಕ್ಕೆ ಮುಂಚೆಯೇ ಶಸ್ತ್ರತ್ಯಾಗ ಮಾಡಿದ ಶ್ರೀರಾಮುಲು

ಚುನಾವಣೆ ಘೋಷಣೆಯಾದ ದಿನದಂದೇ ಇಂತಹ ಬೆಳವಣಿಗೆ ನಡೆದಿದ್ದು, ಇನ್ನೆರಡು ತಿಂಗಳಲ್ಲಿ ಇನ್ನೂ ಏನೆಲ್ಲ ಬೆಳವಣಿಗೆಗಳಿಗೆ ಸಾಕ್ಷಿಯಾಗಬೇಕೋ ಎಂಬ ಆತಂಕ ಮಾತ್ರ ನಾಡಿನ ಜನತೆಯದ್ದಾಗಿದೆ.
ಸದ್ಯಕ್ಕೆ ಬಳ್ಳಾರಿ ಗ್ರಾಮಾಂತರದ ಸ್ವತಂತ್ರ ಶಾಸಕರಾಗಿರುವ ಬಿಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ ಬಿ ಶ್ರೀರಾಮುಲು ಅವರು ನಿನ್ನೆ ಎರಡು ಬಾರಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿದ್ದು ರಾಜಕೀಯವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.
ಬುಧವಾರ ಬೆಳಗ್ಗೆ ದೆಹಲಿಗೆ ತೆರಳುವ ಮೊದಲು ರಾಮುಲು ಶೆಟ್ಟರ್ ಅವರನ್ನು ಭೇಟಿ ಮಾಡಿದ್ದಾರೆ. ಮತ್ತೆ ಸಂಜೆ ವಾಪಸಾದ ನಂತರವೂ ಶೆಟ್ಟರ್ ಅವರನ್ನು ಕಂಡು ಸಮಾಲೋಚನೆ ನಡೆಸಿದ್ದಾರೆ. ಮಾತುಕತೆ ಯಾವ ದಿಕ್ಕಿನಲ್ಲಿ ಸಾಗಿತ್ತು ಎಂಬುದು ಬಹಿರಂಗವಾಗಿಲ್ಲ. ಆದರೆ ದೆಹಲಿಯಲ್ಲಿ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಮತ್ತೆ ರೆಡ್ಡಿ ಬ್ರದರ್ಸ್ ಗೆ ತಥಾಸ್ತು ಅಂದರಾ!?
ಆದರೆ ಇತ್ತೀಚಿಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಳ್ಳಾರಿಯಂತಹ ಬಳ್ಳಾರಿಯಲ್ಲೇ ಕಾಂಗ್ರೆಸ್ ಮತ್ತೆ ತನ್ನ ಅಧಿಪತ್ಯ ಸ್ಥಾಪಿಸುವ ಮೂಲಕ ಇನ್ನು ರೆಡ್ಡಿಗಳ ಆಟ/ಕಾಟ ನಡೆಯದು ಎಂಬ ಸ್ಪಷ್ಟ ಸಂದೇಶ ರವಾನೆಯಾಗಿತ್ತು. ಇದರಿಂದ ಕಂಗಾಲಾಗಿದ್ದು ರಾಮುಲುಗಿಂತ ಹೆಚ್ಚಾಗಿ ಜೈಲು ಆಫೀಸು. ಮತದಾರ ವಿಧಿಸಿದ ಈ ಶಿಕ್ಷೆ ಜನಾ ರೆಡ್ಡಿಗೆ ಸಿಬಿಐ ಶಿಕ್ಷೆಗಿಂತ ಘನಘೋರವಾಗಿ ಪರಿಣಮಿಸಿದೆ.
ಹಾಗಾಗಿ, ಮೊದಲು ಕೆಎಂಎಫ್ ಸೋಮಶೇಖರ ರೆಡ್ಡಿ ಮೂಲಕ ವರಾತ ತೆಗೆದ ಜನಾ ರೆಡ್ಡಿ, ಶತಮಾನದ ನಾಯಕ ಎಂದು ಬಿಂಬಿಸುತ್ತಿದ್ದ ಯುವಕನ ಕೈಯಲ್ಲಿ ಚುನಾವಣೆಗೆ ಹೋದರೆ ಬಳ್ಳಾರಿಯ ಗಣಿ ಪ್ರಪಾತಕ್ಕೆ ಬೀಳುವುದು ಗ್ಯಾರಂಟಿ ಎಂಬುದು ಮನದಟ್ಟು ಆಗುತ್ತಿದ್ದಂತೆ ಜನಾ ರೆಡ್ಡಿ ಅದೇ ರಾಮುಲು ಮೂಲಕ ಬಿಜೆಪಿ ಜತೆ ಸಂಧಾನ ಆಟ ಶುರುವಿಟ್ಟುಕೊಂಡಿದ್ದಾರೆ.
ಬಿಜೆಪಿಗೂ ಇದೇ ಬೇಕಾಗಿತ್ತು. ಹಾಗೆ ನೋಡಿದರೆ ಅವರೇ ಮೊದಲು ಚಂಚಲಗೂಡ ಜೈಲಿಗೆ ಎಂಟ್ರಿ ಕೊಟ್ಟು ರೆಡ್ಡಿ ಜತೆ ಸಂಧಾನಕ್ಕೆ ಮುಂದಾಗಿದ್ದು. ಸೋ, ಬಿಜೆಪಿ ಮತ್ತು ಬಿಎಸ್ಆರ್ ಕಾಂಗ್ರೆಸ್ ಜಂಟೀನಡೆ ಈಗ ಇಂಟರೆಸ್ಟಿಂಗ್ ಆಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications