1993ರ ಮುಂಬೈ ಸ್ಫೋಟ 2 ದಶಕದ ನಂತರ ತೀರ್ಪು
ಮುಂಬೈ, ಮಾ.21: 1993ರ ಮುಂಬೈ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಗೆ ಶಿಕ್ಷೆ ಪ್ರಕಟಿಸಲಾಗಿದೆ. ಇದೇ ವೇಳೆ 10 ಜನರ ಶಿಕ್ಷೆ ಪ್ರಮಾಣ ಇಳಿಕೆಯಾಗಿರುವುದು ಸಿಬಿಐಗೆ ಹಿನ್ನೆಡೆಯಾಗಿದೆ.
ಅಶ್ರಫುರ್ ರೆಹಮಾನ್ ಅಜಿಮುಲ್ಲಾ ಹಾಗೂ ಇಮ್ತಿಯಾಜ್ ಘಾವ್ಟೆ ಶಿಕ್ಷೆ ಪ್ರಮಾಣ ತಗ್ಗಿಸಲಾಗಿದೆ. ಅಶ್ರಫುರ್ ಜೀವಾವಧಿ ಶಿಕ್ಷೆಯನ್ನು 10 ವರ್ಷಕ್ಕೆ ತಗ್ಗಿಸಲಾಗಿದೆ.
ಟೈಗರ್ ಮೆಮೊನ್ ಸೋದರ ಯಾಕೂಬ್ ಮೆಮೊನ್ ಜೀವಾವಧಿ ಶಿಕ್ಷೆ ಸೇರಿದಂತೆ 17 ಜನರ ಜೀವಾವಧಿ ಶಿಕ್ಷೆಯನ್ನು ಎತ್ತಿ ಹಿಡಿಯಲಾಗಿದೆ. 1994ರಲ್ಲಿ ಶರಣಾಗಿದ್ದ ಯಾಕೂಬ್ ಮೆಮೊನ್ ಗೆ ಮರಣದಂಡನೆ ಬದಲಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ.

ಮುಂಬೈ ಸರಣಿ ಸ್ಫೋಟದ ಹಿನ್ನೋಟ ಇಲ್ಲಿದೆ:
ಮಾರ್ಚ್ 1993 : ಬಾಬ್ರಿ ಮಸೀದಿ ಕೆಡವಿದ ನಂತರ ಗಲಭೆಯಾದ ನಂತರ ಮುಂಬೈನಲ್ಲಿ ಸುಮಾರು 13 ಸರಣಿ ಸ್ಫೋಟಗಳು ಸಂಭವಿಸಿತ್ತು.
ನವೆಂಬರ್ 4, 1993: 10,000 ಪುಟಗಳ ಪ್ರಾಥಮಿಕ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಸಂಜಯ್ ದತ್ ಸೇರಿದಂತೆ 189 ಮಂದಿಯನ್ನು ಆರೋಪಿಯನ್ನಾಗಿಸಲಾಯಿತು.
ನವೆಂಬರ್ 19, 1993: ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಕೇಷನ್ (ಸಿಬಿಐ) ಕೈಗೆ ಸಂಪೂರ್ಣ ಕೇಸ್ ತನಿಖೆ ವಹಿಸಲಾಯಿತು.
ಏಪ್ರಿಲ್ 19, 1995 : ಪ್ರಕರಣದ ಕುರಿತು ಕೋರ್ಟಿನಲ್ಲಿ ವಿಚಾರಣೆ ಆರಂಭ.
ಏಪ್ರಿಲ್- ಜೂನ್ 1995 : ಆರೋಪಿಗಳ ಮೇಲಿನ ದೋಷರೋಪಣೆ ಸಾಬೀತು
ಅಕ್ಟೋಬರ್ 2000 : 684ಕ್ಕೂ ಅಧಿಕ ಸಾಕ್ಷಿಗಳ ವಿಚಾರಣೆ ಮುಕ್ತಾಯ
ಅಕ್ಟೋಬರ್ 2001 : ಸರ್ಕಾರಿ ವಕೀಲರ ವಾದ ಪ್ರತಿವಾದಗಳು ಮುಕ್ತಾಯ
ಆಗಸ್ಟ್ 2002 : ವಿಚಾರಣೆ ಮುಂದಕ್ಕೆ ಎಳೆದಾಡಿದ ಡಿಫೆನ್ಸ್ ಲಾಯರ್ ಗಳು ಕೊನೆಗೂ ವಾದ ಮುಗಿಸಿದರು
ಸೆಪ್ಟೆಂಬರ್ 2003 : ಎರಡು ಕಡೆ ವಾದ ಮುಕ್ತಾಯ, ಅಂತಿಮ ಆದೇಶಕ್ಕೆ ಕಾತುರ
ಸೆಪ್ಟೆಂಬರ್ 2006 : ಟೈಗರ್ ಮೆಮೊನ್ ಕುಟುಂಬದ ನಾಲ್ವರಿಗೆ ಶಿಕ್ಷೆ ಪ್ರಮಾಣ ಪ್ರಕಟ
ನವೆಂಬರ್ 2006 : ಕಾಂಗ್ರೆಸ್ ಸಂಸದ ನಟ ದಿವಂಗತ ಸುನೀಲ್ ದತ್ ಅವರ ಪುತ್ರ ಸಂಜಯ್ ದತ್ ಅವರು ಅಕ್ರಮವಾಗಿ 9mm ಪಿಸ್ತೊಲ್ ಹಾಗೂ ಎಕೆ 47 ರೈಫಲ್ ಹೊಂದಿದ್ದ ಆರೋಪದ ಮೇಲೆ ಟಾಡಾ ಕಾಯ್ದೆಯಂತೆ ಬಂಧನ
* ಸಂಜಯ್ ದತ್ 18 ತಿಂಗಳು ತಿಹಾರ್ ಜೈಲಿನಲ್ಲಿ ಕಳೆದರು.
* ಮಾರ್ಚ್ 12, 1993ರಲ್ಲಿ ಸ್ಫೋಟವಾದ ಸ್ಥಳಗಳು: ಬಾಂಬೆ ಸ್ಟಾಕ್ ಎಕ್ಸ್ ಚೇಂಜ್ ಕಟ್ಟಡ, ನಾರಿಮನ್ ಪಾಯಿಂಟ್ ನ ಏರ್ ಇಂಡಿಯಾ ಕಟ್ಟಡ, ವೊರ್ಲಿಯ ಸೆಂಚುತಿ ಬಜಾರ್, ಹೋಟೆಲ್ ಸೀ ರಾಕ್ ಹಾಗೂ ಜುಹೂನ ಸೆಂಟ್ಯೂರ್
* ದಾವೂದ್ ಇಬ್ರಾಹಿಂ, ಟೈಗರ್ ಮೆಮೊನ್ ಹಾಗೂ ಅಯೂಬ್ ಮೆಮೊನ್ ಇಡೀ ಸ್ಫೋಟದ ರುವಾರಿಗಳು ಹಾಗೂ ಪ್ರಮುಖ ಅಪರಾಧಿಗಳಾಗಿದ್ದಾರೆ.
* ಎಲ್ಲೆಡೆ ಆರ್ ಡಿಎಕ್ಸ್ ಸ್ಫೋಟಕ ಬಳಸಲಾಗಿತ್ತು 28 ಕೋಟಿ ಗೂ ಅಧಿಕ ಆಸ್ತಿ ಪಾಸ್ತಿ ನಷ್ಟವಾಗಿತ್ತು. 257ಕ್ಕೂ ಅಧಿಕ ಜನ ಸಾವನ್ನಪ್ಪಿದ್ದರೆ, 713ಕ್ಕೂ ಅಧಿಕ ಜನ ಗಾಯಗೊಂಡಿದ್ದರು.
* ಒಟ್ಟಾರೆ 100 ಜನರನ್ನು ಅಪರಾಧಿಗಳು ಎಂದು ಘೋಷಿಸಲಾಯಿತು. 12 ಜನರಿಗೆ ಮರಣದಂಡನೆ ಹಾಗೂ 20 ಜನರಿಗೆ ಜೀವಾವಧಿ ಶಿಕ್ಷೆಯನ್ನು ಟಾಡಾ ಕೋರ್ಟ್ ಪ್ರಕಟಿಸಿತ್ತು.
* ಅಪರಾಧಿಗಳ ಪೈಕಿ ಮರಣದಂಡನೆ ಶಿಕ್ಷೆ ಪಡೆದಿದ್ದ ಮಹಮ್ಮದ್ ಇಕ್ಬಾಲ್ ಹಾಗೂ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕಸ್ಟಮ್ ಅಧಿಕಾರಿಯಾಗಿದ್ದ ಎಸ್ ಎನ್ ಥಾಪಾ ಅವರು ಶಿಕ್ಷೆ ಅವಧಿ ಮುಗಿಯುವ ಮುನ್ನವೇ ಮೃತಪಟ್ಟಿದ್ದಾರೆ.
* ಜೀವಾವಧಿ ಶಿಕ್ಷೆ ಪಡೆದ 20 ಜನರಲ್ಲಿ ಒಬ್ಬ ಮೃತಪಟ್ಟಿದ್ದರೆ ಇಬ್ಬರಿಗೆ ಜಾಮೀನು ಮಂಜೂರಾಗಿದೆ. ಈಗ 17 ಜನ ಜೀವಾವಧಿ ಶಿಕ್ಷೆ ಹಾಗೂ 11 ಜನ ಮರಣದಂಡನೆ ಶಿಕ್ಷೆ ಅನುಭವಿಸುತ್ತಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications