1993ರ ಮುಂಬೈ ಸ್ಫೋಟ 2 ದಶಕದ ನಂತರ ತೀರ್ಪು
ಮುಂಬೈ, ಮಾ.21: 1993ರ ಮುಂಬೈ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಗೆ ಶಿಕ್ಷೆ ಪ್ರಕಟಿಸಲಾಗಿದೆ. ಇದೇ ವೇಳೆ 10 ಜನರ ಶಿಕ್ಷೆ ಪ್ರಮಾಣ ಇಳಿಕೆಯಾಗಿರುವುದು ಸಿಬಿಐಗೆ ಹಿನ್ನೆಡೆಯಾಗಿದೆ.
ಅಶ್ರಫುರ್ ರೆಹಮಾನ್ ಅಜಿಮುಲ್ಲಾ ಹಾಗೂ ಇಮ್ತಿಯಾಜ್ ಘಾವ್ಟೆ ಶಿಕ್ಷೆ ಪ್ರಮಾಣ ತಗ್ಗಿಸಲಾಗಿದೆ. ಅಶ್ರಫುರ್ ಜೀವಾವಧಿ ಶಿಕ್ಷೆಯನ್ನು 10 ವರ್ಷಕ್ಕೆ ತಗ್ಗಿಸಲಾಗಿದೆ.
ಟೈಗರ್ ಮೆಮೊನ್ ಸೋದರ ಯಾಕೂಬ್ ಮೆಮೊನ್ ಜೀವಾವಧಿ ಶಿಕ್ಷೆ ಸೇರಿದಂತೆ 17 ಜನರ ಜೀವಾವಧಿ ಶಿಕ್ಷೆಯನ್ನು ಎತ್ತಿ ಹಿಡಿಯಲಾಗಿದೆ. 1994ರಲ್ಲಿ ಶರಣಾಗಿದ್ದ ಯಾಕೂಬ್ ಮೆಮೊನ್ ಗೆ ಮರಣದಂಡನೆ ಬದಲಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ.

ಮುಂಬೈ ಸರಣಿ ಸ್ಫೋಟದ ಹಿನ್ನೋಟ ಇಲ್ಲಿದೆ:
ಮಾರ್ಚ್ 1993 : ಬಾಬ್ರಿ ಮಸೀದಿ ಕೆಡವಿದ ನಂತರ ಗಲಭೆಯಾದ ನಂತರ ಮುಂಬೈನಲ್ಲಿ ಸುಮಾರು 13 ಸರಣಿ ಸ್ಫೋಟಗಳು ಸಂಭವಿಸಿತ್ತು.
ನವೆಂಬರ್ 4, 1993: 10,000 ಪುಟಗಳ ಪ್ರಾಥಮಿಕ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಸಂಜಯ್ ದತ್ ಸೇರಿದಂತೆ 189 ಮಂದಿಯನ್ನು ಆರೋಪಿಯನ್ನಾಗಿಸಲಾಯಿತು.
ನವೆಂಬರ್ 19, 1993: ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಕೇಷನ್ (ಸಿಬಿಐ) ಕೈಗೆ ಸಂಪೂರ್ಣ ಕೇಸ್ ತನಿಖೆ ವಹಿಸಲಾಯಿತು.
ಏಪ್ರಿಲ್ 19, 1995 : ಪ್ರಕರಣದ ಕುರಿತು ಕೋರ್ಟಿನಲ್ಲಿ ವಿಚಾರಣೆ ಆರಂಭ.
ಏಪ್ರಿಲ್- ಜೂನ್ 1995 : ಆರೋಪಿಗಳ ಮೇಲಿನ ದೋಷರೋಪಣೆ ಸಾಬೀತು
ಅಕ್ಟೋಬರ್ 2000 : 684ಕ್ಕೂ ಅಧಿಕ ಸಾಕ್ಷಿಗಳ ವಿಚಾರಣೆ ಮುಕ್ತಾಯ
ಅಕ್ಟೋಬರ್ 2001 : ಸರ್ಕಾರಿ ವಕೀಲರ ವಾದ ಪ್ರತಿವಾದಗಳು ಮುಕ್ತಾಯ
ಆಗಸ್ಟ್ 2002 : ವಿಚಾರಣೆ ಮುಂದಕ್ಕೆ ಎಳೆದಾಡಿದ ಡಿಫೆನ್ಸ್ ಲಾಯರ್ ಗಳು ಕೊನೆಗೂ ವಾದ ಮುಗಿಸಿದರು
ಸೆಪ್ಟೆಂಬರ್ 2003 : ಎರಡು ಕಡೆ ವಾದ ಮುಕ್ತಾಯ, ಅಂತಿಮ ಆದೇಶಕ್ಕೆ ಕಾತುರ
ಸೆಪ್ಟೆಂಬರ್ 2006 : ಟೈಗರ್ ಮೆಮೊನ್ ಕುಟುಂಬದ ನಾಲ್ವರಿಗೆ ಶಿಕ್ಷೆ ಪ್ರಮಾಣ ಪ್ರಕಟ
ನವೆಂಬರ್ 2006 : ಕಾಂಗ್ರೆಸ್ ಸಂಸದ ನಟ ದಿವಂಗತ ಸುನೀಲ್ ದತ್ ಅವರ ಪುತ್ರ ಸಂಜಯ್ ದತ್ ಅವರು ಅಕ್ರಮವಾಗಿ 9mm ಪಿಸ್ತೊಲ್ ಹಾಗೂ ಎಕೆ 47 ರೈಫಲ್ ಹೊಂದಿದ್ದ ಆರೋಪದ ಮೇಲೆ ಟಾಡಾ ಕಾಯ್ದೆಯಂತೆ ಬಂಧನ
* ಸಂಜಯ್ ದತ್ 18 ತಿಂಗಳು ತಿಹಾರ್ ಜೈಲಿನಲ್ಲಿ ಕಳೆದರು.
* ಮಾರ್ಚ್ 12, 1993ರಲ್ಲಿ ಸ್ಫೋಟವಾದ ಸ್ಥಳಗಳು: ಬಾಂಬೆ ಸ್ಟಾಕ್ ಎಕ್ಸ್ ಚೇಂಜ್ ಕಟ್ಟಡ, ನಾರಿಮನ್ ಪಾಯಿಂಟ್ ನ ಏರ್ ಇಂಡಿಯಾ ಕಟ್ಟಡ, ವೊರ್ಲಿಯ ಸೆಂಚುತಿ ಬಜಾರ್, ಹೋಟೆಲ್ ಸೀ ರಾಕ್ ಹಾಗೂ ಜುಹೂನ ಸೆಂಟ್ಯೂರ್
* ದಾವೂದ್ ಇಬ್ರಾಹಿಂ, ಟೈಗರ್ ಮೆಮೊನ್ ಹಾಗೂ ಅಯೂಬ್ ಮೆಮೊನ್ ಇಡೀ ಸ್ಫೋಟದ ರುವಾರಿಗಳು ಹಾಗೂ ಪ್ರಮುಖ ಅಪರಾಧಿಗಳಾಗಿದ್ದಾರೆ.
* ಎಲ್ಲೆಡೆ ಆರ್ ಡಿಎಕ್ಸ್ ಸ್ಫೋಟಕ ಬಳಸಲಾಗಿತ್ತು 28 ಕೋಟಿ ಗೂ ಅಧಿಕ ಆಸ್ತಿ ಪಾಸ್ತಿ ನಷ್ಟವಾಗಿತ್ತು. 257ಕ್ಕೂ ಅಧಿಕ ಜನ ಸಾವನ್ನಪ್ಪಿದ್ದರೆ, 713ಕ್ಕೂ ಅಧಿಕ ಜನ ಗಾಯಗೊಂಡಿದ್ದರು.
* ಒಟ್ಟಾರೆ 100 ಜನರನ್ನು ಅಪರಾಧಿಗಳು ಎಂದು ಘೋಷಿಸಲಾಯಿತು. 12 ಜನರಿಗೆ ಮರಣದಂಡನೆ ಹಾಗೂ 20 ಜನರಿಗೆ ಜೀವಾವಧಿ ಶಿಕ್ಷೆಯನ್ನು ಟಾಡಾ ಕೋರ್ಟ್ ಪ್ರಕಟಿಸಿತ್ತು.
* ಅಪರಾಧಿಗಳ ಪೈಕಿ ಮರಣದಂಡನೆ ಶಿಕ್ಷೆ ಪಡೆದಿದ್ದ ಮಹಮ್ಮದ್ ಇಕ್ಬಾಲ್ ಹಾಗೂ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕಸ್ಟಮ್ ಅಧಿಕಾರಿಯಾಗಿದ್ದ ಎಸ್ ಎನ್ ಥಾಪಾ ಅವರು ಶಿಕ್ಷೆ ಅವಧಿ ಮುಗಿಯುವ ಮುನ್ನವೇ ಮೃತಪಟ್ಟಿದ್ದಾರೆ.
* ಜೀವಾವಧಿ ಶಿಕ್ಷೆ ಪಡೆದ 20 ಜನರಲ್ಲಿ ಒಬ್ಬ ಮೃತಪಟ್ಟಿದ್ದರೆ ಇಬ್ಬರಿಗೆ ಜಾಮೀನು ಮಂಜೂರಾಗಿದೆ. ಈಗ 17 ಜನ ಜೀವಾವಧಿ ಶಿಕ್ಷೆ ಹಾಗೂ 11 ಜನ ಮರಣದಂಡನೆ ಶಿಕ್ಷೆ ಅನುಭವಿಸುತ್ತಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications