ಮೊದಲೇ ಅಭ್ಯರ್ಥಿ ಪ್ರಕಟಿಸದಿರಲು 3 ಕಾರಣಗಳು

ಕಾರಣ 1 : ಅಭ್ಯರ್ಥಿಯ ಹೆಸರನ್ನು ಸಾಕಷ್ಟು ಮೊದಲೇ ಪ್ರಕಟಿಸಿದರೆ, ಅಭ್ಯರ್ಥಿಯ ಪೂರ್ವಾಪರ ತಿಳಿದುಕೊಳ್ಳಲು ಮತದಾರರಿಗೆ ಸಾಕಷ್ಟು ಸಮಯ ಸಿಕ್ಕಂತಾಗುತ್ತದೆ. ಅಂಥವರಿಗೆ ಮತ ಹಾಕಲು ಮತದಾರ ಹಿಂದೇಟು ಹಾಕಬಹುದು. ಆದ್ದರಿಂದ, ಅಂತಹ ಅಭ್ಯರ್ಥಿಯ ಮಹತ್ವವನ್ನು ತಗ್ಗಿಸಿ, ಪಕ್ಷದ ವರ್ಚಸ್ಸಿನ ಆಧಾರದ ಮೇಲೆ ಮತ ಕೇಳಲು ಪಕ್ಷಕ್ಕೆ ಅನುಕೂಲವಾಗುತ್ತದೆ.
ಕಾರಣ 2 : ಯಾವುದೇ ಕ್ಷೇತ್ರಕ್ಕೆ ಯಾವನೊಬ್ಬ ಅಭ್ಯರ್ಥಿ ಹೆಸರು ಪ್ರಕಟವಾಗುತ್ತಿದ್ದಂತೆ ಟಿಕೆಟ್ಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದವರು ತಮ್ಮನ್ನು ಕಡೆಗಣಿಸಿದ್ದೇಕೆ ಎಂದು ಮುನಿಸಿಕೊಳ್ಳಬಹುದು. ಟಿಕೆಟ್ ವಂಚಿತರು ಭುಗಿಲೆದ್ದು ಪಕ್ಷವಿರೋಧಿ ಚಟುವಟಿಕೆ ಶುರುಮಾಡಿಬಿಡುವ ಸಂಭವನೀಯತೆ ಇರುತ್ತದೆ. ಇಂಥ ರಗಳೆಯೇ ಬೇಡವೆಂದು ಕಡೆ ಘಳಿಗೆಯಲ್ಲಿ ಅಭ್ಯರ್ಥಿಯ ಹೆಸರು ಪ್ರಕಟಿಸುವ ಸಂಪ್ರದಾಯ ಪಕ್ಷಗಳು ಇಟ್ಟುಕೊಂಡಿವೆ.
ಕಾರಣ 3 : ಪ್ರಮುಖ ಕಾರಣವೇನೆಂದರೆ, ದೀರ್ಘ ಪ್ರಚಾರಕಾರ್ಯ ಕೈಗೊಂಡು, ಜನರ ಅಭಿಪ್ರಾಯಪಡೆದ ನಂತರ ಉತ್ತಮ ಮತ್ತು ಗೆಲ್ಲುವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಸಾಧ್ಯವಾಗುತ್ತದೆ. ಇಂಥ ಸಂದರ್ಭದಲ್ಲಿ ಕೆಟ್ಟೆ ರಾಜಕೀಯ ಮಾಡಿ ದುರ್ಲಾಭ ಪಡೆದವರಿಗೆ ಆ ಪಕ್ಷದ ಕದ ಮುಚ್ಚಿದಂತೆಯೇ ಸರಿ.
ಆದ್ದರಿಂದ, ಮೊದಲೇ ಸೂಕ್ತ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದರೆ, ಹೆಚ್ಚು ಸಮಯ ಕಾಲ ಪ್ರಚಾರ ಮಾಡುತ್ತ, ಮತದಾರರೊಂದಿಗೆ ನಿರಂತರವಾಗಿ ಸಂವಾದ ನಡೆಸುತ್ತ ಅವರ ಬೆಂಬಲ ಪಡೆಯಲು ಸಾಧ್ಯವಾಗುತ್ತದೆ. ಲೋಕಸಭೆ ಚುನಾವಣೆಗೆ 6ರಿಂದ 9 ತಿಂಗಳು, ವಿಧಾನಸಭೆಗೆ 4ರಿಂದ 6 ತಿಂಗಳು ಮತ್ತು ಪರಿಷತ್ ಚುನಾವಣೆಗೆ 3 ತಿಂಗಳು ಪ್ರಚಾರ ನಡೆಸುವುದು ಅಗತ್ಯ. ಆದರೆ, ಎಲ್ಲ ಕ್ಷೇತ್ರಗಳಿಗೆ ಸೂಕ್ತವಾದ ಅಭ್ಯರ್ಥಿಗಳನ್ನು ಹುಡುಕುವುದು ನಿಜಕ್ಕೂ ಒಂದು ಸವಾಲೇ ಸರಿ. ಹೆಚ್ಚು ಸಮಯ ಪ್ರಚಾರ ಮಾಡಿದವರಿಗೆ ಉತ್ತಮ ಭವಿಷ್ಯ ಕಟ್ಟಿಟ್ಟ ಬುತ್ತಿ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications