ಬೆಳಗಾವಿ ಉತ್ತರ: ಬಿಜೆಪಿ ಅಭ್ಯರ್ಥಿಯಾಗಿ ಮುತಾಲಿಕ್!

Karnataka Assembly Election - Sri Ram Sena Pramod Muthalik may join BJP
ಬೆಳಗಾವಿ‌, ಮಾರ್ಚ್ 22: ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ 'ಹಿಂದುತ್ವದ ಫೈರ್ ಬ್ರ್ಯಾಂಡ್' ಪ್ರಮೋದ್ ಮುತಾಲಿಕ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ಹಿರಿಯ ನಾಯಕರು ಹಾಗೂ ಆರ್ ಎಸ್ಎಸ್ ಪ್ರಮುಖರ ಜತೆ ಮಾತುಕತೆ ನಡೆದಿದೆ. ಬೆಳಗಾವಿ ಉತ್ತರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಆಲೋಚನೆ ಇರುವುದು ನಿಜ ಎಂದು ಸ್ವತಃ ಮುತಾಲಿಕ್ ಅವರೇ ತಿಳಿಸಿದ್ದಾರೆ.

ಇದರೊಂದಿಗೆ ದಕ್ಷಿಣ ರಾಜ್ಯಗಳ ಭಜರಂಗದಳದ ಮಾಜಿ ಸಂಚಾಲಕ, ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಬಿಜೆಪಿ ಮೂಲಕ RSS ತೆಕ್ಕೆಗೆ ಮರಳಲು ವೇದಿಕೆ ಸಿದ್ಧವಾದಂತಿದೆ.

ರಾಜ್ಯದ 58 ಕ್ಷೇತ್ರಗಳಲ್ಲಿ ಶ್ರೀರಾಮ ಸೇನೆ ಸಂಘಟನೆ ಬಲಿಷ್ಠವಾಗಿದೆ. ಇದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ. ಇದಕ್ಕೆ ಉಡುಪಿ ಕೃಷ್ಣ ಮಠದ ಪೇಜಾವರ ಶ್ರೀ ಮತ್ತು ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಮಧ್ಯಸ್ಥಿಕೆ ವಹಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬೆಳಗಾವಿ, ಬಿಜಾಪುರ, ಗುಲ್ಬರ್ಗಾ, ಧಾರವಾಡ, ಚಿಕ್ಕಮಗಳೂರು, ಕಾರವಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶ್ರೀರಾಮ ಸೇನೆ ಸಂಘಟನೆ ಸಕ್ರಿಯವಾಗಿದ್ದು, ಮುತಾಲಿಕ್ ಅವರನ್ನು ಪಕ್ಷದ ತೆಕ್ಕೆಗೆ ತೆಗೆದುಕೊಂಡರೆ ಬಿಜೆಪಿಗೆ ಅನುಕೂಲವಾಗಲಿದೆ ಎಂದು ದೆಹಲಿ ಮಟ್ಟದಲ್ಲಿ ವರಿಷ್ಠರು ಆಲೋಚಿಸಿದ್ದಾರೆ ಎನ್ನಲಾಗಿದೆ.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+