ಬಿಜೆಪಿ ಚುನಾವಣಾ ಸಮಿತಿ ಸಭೆ : ಟಿಕೆಟ್ ಯಾರಿಗೆ ?

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಸರಳ ಸಮಾರಂಭದಲ್ಲಿ ಮೊದಲು ನೂತನ ಅಧ್ಯಕ್ಷ ಪ್ರಹ್ಲಾದ್ ಜೋಪಿ, ಮಾಜಿ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರಿಂದ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಮಧ್ಯಾಹ್ನ ಚುನಾವಣಾ ಸಮತಿ ಸಭೆ ನಡೆಯುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಷಿ, ಉಪ ಮುಖ್ಯಮಂತ್ರಿಗಳಾದ ಈಶ್ವರಪ್ಪ, ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ಮತ್ತು ಆರ್ಎಸ್ಎಸ್ ಪ್ರಮುಖ ಸಂತೋಷ ಜಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಚುನಾವಣಾ ಸಮಿತಿ ಸಭೆಯಲ್ಲಿ ಅನಂತ ಕುಮಾರ್ ಭಾಗವಹಿಸುವ ಕುರಿತು ಈಶ್ವರಪ್ಪ ಆಕ್ಷೇಪ ವ್ಯಕ್ತಪಡಿಸಿರುವುದರಿಂದ, ಈಶ್ವರಪ್ಪ ಅಥವ ಅನಂತ ಕುಮಾರ್ ಸಭೆಯುಂದ ಹೊರಗುಳಿಯುವ ಸಂಭವವಿದೆ. ಹಾಲಿ ಶಾಸಕರಿಗೆ ಟಿಕೆಟ್ ನೀಡಿಕೆ, ಹೊಸ ಅಭ್ಯರ್ಥಿಗಳ ಹುಡುಕಾಟ ಮುಂತಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
150 ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಜೆಪಿ ಅಂತಿಮಗೊಳಿಸಿದೆ. ಜೊತೆಗೆ ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು ಖಚಿತವಾಗಿದೆ. ಇಂದಿನ ಸಭೆಯಲ್ಲಿ 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ತಲುಪಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ವಲಸಿಗರದ್ದೇ ಸಮಸ್ಯೆ : ಬಿಜೆಪಿ ತೊರೆದು ಕೆಜೆಪಿ ಸೇರಿದಂತೆ ವಿವಿಧ ಪಕ್ಷ ತೊರೆಯಲು ತುದಿಗಾಲಲ್ಲಿ ನಿಂತಿರುವ ಶಾಸಕರ ಕ್ಷೇತ್ರಗಳಿಗೆ ನೂತನ ಅಭ್ಯರ್ಥಿಗಳನ್ನು ಹುಡುಕುವುದೇ ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ. ಕೆಲವು ಶಾಸಕರು ಪಕ್ಷ ತೊರೆಯುತ್ತಾರೋ? ಇಲ್ಲವೋ ಎಂಬುದು ಇನ್ನು ಖಚಿತವಾಗಿಲ್ಲ.
ಇಂತಹ ಕ್ಷೇತ್ರಗಳಲ್ಲಿ ಇವರ ಬೆಂಬಲಿಗರಿಗೆ ಟಿಕೆಟ್ ನೀಡಿದರೆ ಅವರು ಪಕ್ಷ ತೊರೆಯುವ ಭೀತಿ ಎದುರಾಗಿದೆ. ಆದ್ದರಿಂದ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ವಲಸೆ ಹೋಗುವ ಅಭ್ಯರ್ಥಿಗಳ ಅಂತಿಮ ನಿರ್ಧಾರದ ನಂತರ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications