ಮತಪಟ್ಟಿಗೆ ಹೆಸರು ನೋಂದಾವಣೆ ಹೇಗೆ ಗೊತ್ತಾ?

ಓದು, ಉದ್ಯೋಗ ಎಂದು ನೀವು ಸ್ವಂತ ತವರೂರು ತೊರೆದು ನಗರಗಳಿಗೆ ವಲಸೆ ಬಂದವರಗಿದ್ದರೆ, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಕೆಲವು ಮಾಹಿತಿಗಳು ಇಲ್ಲಿವೆ. ನಿಮ್ಮ ವಾಸಿಸುತ್ತಿರುವ ನಗರ ಮತ್ತು ಮಹಾನಗರ ಪಾಲಿಕೆ ಅಥವ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಕಚೇರಿಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತದೆ.
ಮತದಾರರ ಪಟ್ಟಿ ಪರಿಷ್ಕರಣೆಗೆ ಮೊದಲು ಕೇಂದ್ರ ಚುನಾವಣಾ ಆಯೋಗ ಪ್ರತಿಕೆ, ಟಿವಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಹೀರಾತು ಪ್ರಕಟಿಸುತ್ತದೆ. ಅದನ್ನು ನೀವು ಗಮನಿಸಿದ್ದರೆ, ನಿಮ್ಮ ಹತ್ತಿರದ ಕೇಂದ್ರಕ್ಕೆ ತೆರಳಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಸಬಹುದು.
ಹದಿನೆಂಟು ವರ್ಷ ತುಂಬಿದ ಪ್ರಜೆಯು ಚುನಾವಣಾ ಆಯೋಗ ಸೂಚಿಸಿದ ಸ್ಥಳಗಳಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು. ಬೆಂಗಳೂರಿನಲ್ಲಿ ಬಿಬಿಎಂಪಿ ಕೇಂದ್ರ ಕಚೇರಿ ಮತ್ತು ವಾರ್ಡ್ ಕಚೇರಿಗಳಿಗೆ ತೆರಳಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಮತ ಪಟ್ಟಿಯಲ್ಲಿ ಹೆಸರು ನೋಂದಾಯಿಸಬಹುದು. ಆಲ್ ಲೈನ್ ಮೂಲಕವು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಚುನಾವಣಾ ಆಯೋಗ ವ್ಯವಸ್ಥೆ ಮಾಡಿದೆ. www.voterreg.kar.nic.in ತಾಣದಲ್ಲಿ ಅರ್ಜಿ ನಮೂನೆಗಳು ಲಭ್ಯವಿದೆ.
ಅರ್ಜಿಗಳು ಎಲ್ಲಿ ಲಭ್ಯ : ಮುಖ್ಯ ಚುನಾವಣಾ ಆಯುಕ್ತರ ಕಚೇರಿ ಸಿಇಒ ಅಥವ ಸಮೀಪದ ಸಹಾಯಕ ಚುನಾವಣಾ ನೋಂದಣಿ ಕೇಂದ್ರದಲ್ಲಿ (ಎಐಆರ್ಒ) ಕೇಂದ್ರದಿಂದ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಹೆಸರು ನೋಂದಾಯಿಸಬಹುದು. ಅಥವ http://ceokarnataka.kar.nic.in ನಲ್ಲಿ ಪಡೆದುಕೊಳ್ಳಿ.
ಯಾವ ಅರ್ಜಿ ಪಡೆಯಬೇಕು : ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಫಾರಂ 6, ಫಾರಂ 7, ಫಾರಂ 8, ಫಾರಂ 8ಎ ಎಂಬ ನಾಲ್ಕು ರೀತಿಯ ಅರ್ಜಿಗಳಿವೆ. ಹೊಸದಾಗಿ ಹೆಸರು ನೊಂದಾಯಿಸಲು, ಹೆಸರು ಬದಲಾವಣೆ ಮಾಡಿಸಲು, ಸ್ಥಳ ಬದಲಾವಣೆ ಮಾಡಿದ ನಂತರ ಹೆಸರು ನೋಂದಣಿ ಮಾಡಿಸಲು ನಿಮಗೆ ಅಗತ್ಯವಿರುವ ಅರ್ಜಿಗಳನ್ನು ಬಳಸಬಹುದಾಗಿದೆ.
ಮತದಾರರ ಪಟ್ಟಿಯಲ್ಲಿ ನೂತನವಾಗಿ ಹೆಸರು ಸೇರಿಸಲು, ಸ್ಥಳ ಬದಲಾವಣೆ ಬಗ್ಗೆ ಮಾಹಿತಿ ನೀಡಲು ಮತ್ತು ಹೆಸರು ಕಣ್ಮರೆ ಆಗಿದ್ದರೆ ಪುನಃ ಸೇರಿಸಲು ಫಾರಂ6 ಅನ್ನು ಬಳಸಬಹದು. ಫಾರಂ 7 ಮುಖಾಂತರ ನಿಮ್ಮ ಹೆಸರನ್ನು ರದ್ದು ಪಡಿಸಬಹುದು, ಮರಣ ಹೊಂದಿದ ವ್ಯಕ್ತಿಯ ಹೆಸರು ತೆಗೆಸಬಹುದಾಗಿದೆ.
ಮತದಾರರ ಪಟ್ಟಿಯಲ್ಲಿನ ನಿಮ್ಮ ವಿವರಗಳಲ್ಲಿ ತಪ್ಪುಗಳಿದ್ದರೆ ಫಾರಂ 8 ಮುಖಾಂತರ ಅರ್ಜಿ ಸಲ್ಲಿಸಿ ಸರಿಪಡಿಸಿಕೊಳ್ಳಬಹುದು. ಒಂದೇ ಚುನವಣಾ ಕ್ಷೇತ್ರದಲ್ಲಿ ಮತದಾರರ ಹೆಸರನ್ನು ಇನ್ನೊಂದು ಜಾಗಕ್ಕೆ ಸ್ಥಳಾಂತರಿಸಲು ಅಂದರೆ ನಿಮ್ಮ ವಿಳಾಸ ಬದಲಾಗಿದ್ದರೆ ಫಾರಂ 8ಎ ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ.
ನೀವು ಅರ್ಜಿಯನ್ನು ಪಡೆದುಕೊಂಡ ಕಚೇರಿಯಲ್ಲಿಯೇ ಮರಳಿ ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸಬೇಕು. ಮತದಾರರ ನೋಂದಣಿ ವರ್ಷಪೂರ್ತಿ ನಡೆಯುತ್ತದೆ. ಆದರೆ, ಚುನಾವಣೆ ನಡೆಯುವ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಿರುವವರೆಗೆ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿರುತ್ತದೆ.
ಯಾವ ದಾಖಲೆ ಬೇಕು : ಎಸ್ಎಸ್ಎಲ್ ಸಿ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ವಿವಾಹ ನೋಂದಣಿ ಪತ್ರ, ರೇಷನ್ ಕಾರ್ಡ್ ಮುಂತಾದ ವಯೋಮಿತಿ ತಿಳಿಸುವ ದಾಖಲೆಗಳು ಹೆಸರು ನೋಂದಣಿ ಮಾಡಿಸಲು ಸಾಕು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications