ನಾಡಿನ ನಂಜು ತೊಲಗಿಸಲು ಕೆಜೆಪಿ ಸ್ಥಾಪನೆ: ಬಿಎಸ್ ವೈ
ನಂಜನಗೂಡು, ಮಾ.24: ಅತ್ತ ದಕ್ಷಿಣ ಭಾರತದ ದೊಡ್ಡ ಜಾತ್ರೆ ನಡೆಯುತ್ತಿದ್ದರೆ ಇತ್ತ ಕೆಜೆಪಿಯಲ್ಲಿ ಜನಜಾತ್ರೆ ಕಂಡು ಬಂದಿತ್ತು. ಹಕೀಂ ನಂಜುಂಡಸ್ವಾಮಿ ಎಲ್ಲಾ ಬಗೆಯ ರೋಗಗಳನ್ನು ತೊಲಗಿಸುವಂತೆ ನಾಡಿನ ಕಷ್ಟ ಕಾರ್ಪಣ್ಯಗಳನ್ನು ತೊಲಗಿಸಲು ಕೆಜೆಪಿ ಸ್ಥಾಪಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಾರಿದ್ದಾರೆ.
ಕೆಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ ಮೇಲೆ ನಿಗದಿಯಂತೆ ನಂಜನಗೂಡಿನಲ್ಲಿ ಕೆಜೆಪಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ನಾನು ಪ್ರಾದೇಶಿಕ ಪಕ್ಷ ಸ್ಥಾಪಿಸಿರುವುದು ಮತ್ತೆ ಮುಖ್ಯ ಮಂತ್ರಿಯಾಗಬೇಕೆಂಬ ಉದ್ದೇಶದಿಂದಲ್ಲ. ರಾಜ್ಯದ ನೆಲ-ಜಲ, ಭಾಷೆ, ಸಂಪತ್ತು ರಕ್ಷಣೆ ಹಾಗೂ ಯುವ ಪೀಳಿಗೆಯ ಭವಿಷ್ಯದ ದೃಷ್ಟಿಯಿಂದ ಕೆಜೆಪಿ ಪಕ್ಷ ಸ್ಥಾಪಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.,

ಇದಕ್ಕೂ ಮುನ್ನ ಶನಿವಾರ(ಮಾ.23)ಹುಲ್ಲಹಳ್ಳಿ ರಸ್ತೆಯಲ್ಲಿರುವ ಮಹದೇಶ್ವರ ಲೇಔಟ್ನಲ್ಲಿ ಹಮ್ಮಿಕೊಂಡಿದ್ದ ಕೆಜೆಪಿ ಪಕ್ಷದ ಕಾರ್ಯಕರ್ತರ ಹಾಗೂ ಚುನಾವಣಾ ಸಿದ್ಧತಾ ಸಭೆಯನ್ನು ಯಡಿಯೂರಪ್ಪ ಉದ್ಘಾಟಿಸಿದರು.
ನಂಜನಗೂಡು ಪುಣ್ಯ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದೇನೆ. ಪಕ್ಷಕ್ಕೆ ಅಭೂತಪೂರ್ವ ಗೆಲುವು ಸಿಗುವ ವಿಶ್ವಾಸವಿದೆ ಎಂದರು. 1999ರಲ್ಲಿ ಸಂಕಲ್ಪ ಯಾತ್ರೆಯನ್ನು ಇಲ್ಲಿಂದಲೇ ಪ್ರಾರಂಭಿಸಿದ್ದೆ. 2008ರ ವಿಧಾನಸಭಾ ಚುನಾವಣೆಯಲ್ಲಿ ಶ್ರೀ ಕಂಠೇಶ್ವರನಿಗೆ ಪೂಜೆ ಸಲ್ಲಿಸುವ ಮೂಲಕ ಪ್ರಚಾರ ಆರಂಭಿಸಿದ್ದೆ. ಇದರಿಂದಲೇ 110 ಸ್ಥಾನಗಳನ್ನು ಪಡೆಯಲು ಸಾಧ್ಯವಾಗಿತ್ತು.
2013 ರ ಚುನಾವಣೆಗೂ ಮುನ್ನ ಇಂದು ಶ್ರೀ ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ರಣರಂಗಕ್ಕೆ ಇಳಿಯುತ್ತಿದ್ದೇನೆ. ನಂಜನಗೂಡು ಕ್ಷೇತ್ರದ ಈಗಿನ ಕೆಜೆಪಿ ಅಭ್ಯರ್ಥಿ ಎಸ್. ಮಹದೇವಯ್ಯ ಕಳೆದ ಬಾರಿ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋತಿದ್ದಾರೆ. ಈ ಬಾರಿ ಅವರು ಭಾರಿ ಮತಗಳ ಅಂತರದಿಂದ ಗೆಲ್ಲಲೇಬೇಕು ಎಂದು ಯಡಿಯೂರಪ್ಪ ಹೇಳಿದರು.
ವರುಣಾ ಕ್ಷೇತ್ರದ ಅಭ್ಯರ್ಥಿ ಕಾ.ಪು. ಸಿದ್ದಲಿಂಗಸ್ವಾಮಿ ಮತ್ತು ನಂಜನಗೂಡು ಕ್ಷೇತ್ರದ ಅಭ್ಯರ್ಥಿ ಎಸ್. ಮಹದೇವಯ್ಯ ಕಣದಲ್ಲಿದ್ದರೂ ಈ ಕ್ಷೇತ್ರದಲ್ಲಿ ಬಿ.ಎಸ್.ಯಡಿಯೂರಪ್ಪನವರೇ ಸ್ಪರ್ಧಿಸಿದ್ದಾರೆ ಎಂದು ಭಾವಿಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ಅಸಮಾಧಾನದ ಹೊಗೆ: ನಂಜನಗೂಡು ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಎಸ್. ಮಹದೇವಯ್ಯರವರನ್ನು ಈ ಕ್ಷೇತ್ರದ ಅಭ್ಯರ್ಥಿಯೆಂದು ಘೋಷಣೆ ಮಾಡುತ್ತಿದ್ದಂತೆ ಮಾದಿಗ ಜನಾಂಗದ ರಾಜ್ಯ ಮುಖಂಡ ಹಾಗೂ ರಾಜ್ಯ ಕೆಜೆಪಿ ಉಪಾಧ್ಯಕ್ಷ ಡಾ.ಡಿ.ತಿಮ್ಮಯ್ಯರವರಿಗೆ ಟಿಕೆಟ್ ನೀಡದೇ ಇರುವುದಕ್ಕೆ ಎಡಗೈ ಜನಾಂಗದ ಪ್ರಮುಖರು ತೀವ್ರ ಅಸಮಾಧಾನ ಗೊಂಡಿದ್ದಾರೆ. ಪುರಸಭಾ ಮಾಜಿ ಸದಸ್ಯ ಅಶೋಕ್ ಪುರಂ ಸ್ವಾಮಿ, ಮಾದಿಗ ಜನಾಂಗದ ರಾಜ್ಯಾಧ್ಯಕ್ಷ ಎಡತೊರೆ ಲಿಂಗರಾಜು, ಉಪಾಧ್ಯಕ್ಷ ನಿಟ್ರೆ ಮಹದೇವು, ವಿ.ಕೆ.ಪಾಪಣ್ಣ, ಮಾಸ್ಟರ್ ಕಾಳಯ್ಯ ಸೇರಿದಂತೆ ಹಲವರು ಪಕ್ಷದಲ್ಲಿ ಎಡಗೈ ಸಮುದಾಯಕ್ಕೆ ನ್ಯಾಯ ಸಿಗುವ ನಿರೀಕ್ಷೆ ಹುಸಿಯಾಗಿದೆ ಎಂದಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications