ಬಿಬಿಎಂಪಿ ಸದಸ್ಯರಿಗೆ ಶಾಸಕರಾಗೋ ಉತ್ಸಾಹ

ಪ್ರಸ್ತುತ ಬಿಬಿಎಂಪಿಯ ಎರಡು ವರ್ಷಗಳ ಅಧಿಕಾರ ಬಾಕಿ ಇದೆ. ಆಗಲೇ ಸುಮಾರು 20ಕ್ಕೂ ಹೆಚ್ಚು ಬಿಬಿಎಂಪಿ ಸದಸ್ಯರು ಶಾಸಕರಾಗಲು ಬಯಸಿ ಟಿಕೆಟ್ ಗಾಗಿ ಪ್ರಯತ್ನ ನಡೆಸಿದ್ದಾರೆ. ಹಾಲಿ ಮೇಯರ್ ಡಿ.ವೆಂಕಟೇಶ್ ಮೂರ್ತಿ, ಉಪ ಮೇಯರ್ ಎಲ್ .ಶ್ರೀನಿವಾಸ್, ಮಾಜಿ ಮೇಯರ್ ಎಸ್.ಕೆ.ನಟರಾಜ್ ಸೇರಿದಂತೆ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನ ಪುರಪಿತೃಗಳು ಶಾಸಕರಾಗುವ ಉತ್ಸಾಹದಲ್ಲಿದ್ದಾರೆ.
ತಾವು ಪ್ರತಿನಿಧಿಸುವ ಕ್ಷೇತ್ರ ಅಥವ ಬೇರೆ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡುವಂತೆ ಬಿಬಿಎಂಪಿ ಸದಸ್ಯರು ಪಕ್ಷದ ನಾಯಕರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ಹಾಲಿ ಟಿಕೆಟ್ ಹಂಚಿಕೆ ಬಗ್ಗೆ ತಲೆ ಕೆಡಿಸಿಕೊಂಡಿರುವ ಪಕ್ಷಗಳಿಗೆ ಪುರಪಿತೃಗಳು ಹೊಸ ಸಮಸ್ಯೆಯಾಗಿ ಪರಿಣಮಿಸಿದ್ದಾರೆ.
ಹಾಲಿ ಮೇಯರ್ ವೆಂಕಟೇಶ್ ಮೂರ್ತಿ ಗೋವಿಂದರಾಜನಗರ ಕ್ಷೇತ್ರದಿಂದ, ಬಿಬಿಎಂಪಿ ಸದಸ್ಯ ಬಿ.ವಿ,ಗಣೇಶ್ ಚಾಮರಾಜಪೇಟೆ ಕ್ಷೇತ್ರದಿಂದ, ಎಸ್.ಕೆ.ನಟರಾಜ್ ಯಶವಂತಪುರ ಕ್ಷೇತ್ರದಿಂದ, ರವೀಂದ್ರ ವಿಜಯನಗರ ಕ್ಷೇತ್ರದಿಂದ ಟಿಕೆಟ್ ಬಯಸಿ ಪಕ್ಷದ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ.
ಇನ್ನು ಕಾಂಗ್ರೆಸ್ ನ ಎಂ.ನಾಗರಾಜು ಮಹಾಲಕ್ಷ್ಮೀ ಲೇಜೌಟ್ ನಿಂದ, ಕೆ.ಚಂದ್ರಶೇಖರ್ ಬಸವನಗುಡಿಯಿಂದ, ಸಂಪತ್ ರಾಜ್ ಪುಲಿಕೇಶಿ ನಗರದಿಂದ, ಬೈರತಿ ಸುರೇಶ್ ಕೆ.ಆರ್.ಪುರಂ ಕ್ಷೇತ್ರದಿಂದ, ಟಿ.ಮಲ್ಲೇಶ್ ಗಾಂಧಿನಗರ ಕ್ಷೇತ್ರದಿಂದ ಶಾಸಕರಾಗಲು ಕೋರಿ ನಾಯಕರಿಗೆ ಮನವಿ ಮಾಡಿದ್ದಾರೆ.
ಜೆಡಿಎಸ್ ನ ಪದ್ಮನಾಭ ರೆಡ್ಡಿ ಸರ್ವಜ್ಞನಗರದಿಂದ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಇವರಿಗೆ ಟಿಕೆಟ್ ಸಿಗುವುದು ಬಹುತೇಕ ಖಾತ್ರಿಯಾಗಿದೆ ಎಂಬ ಮಾತುಗಳು ಬಿಬಿಎಂಪಿ ವಲಯದಲ್ಲಿ ಕೇಳಿ ಬರುತ್ತಿವೆ. ಒಟ್ಟಾರೆ ವಿವಿಧ ಪಕ್ಷಗಳಿಂದ 20ಕ್ಕೂ ಹೆಚ್ಚು ಬಿಬಿಎಂಪಿ ಸದಸ್ಯರು ಶಾಸಕರಾಗಲು ತಯಾರಿ ನಡೆಸಿದ್ದು, ಯಾರಿಗೆ ಟಿಕೆಟ್ ದೊರೆಯಲಿದೆ ಎನ್ನುವುದು ಖಚಿತವಾಗಿಲ್ಲ.
ಬೆಂಗಳೂರಿನ ಹಾಲಿ ಮೇಯರ್ ಡಿ.ವೆಂಕಟೇಶಮೂರ್ತಿ ಮತ್ತು ಹಾಗೂ ಉಪಮೇಯರ್ ಎಲ್.ಶ್ರೀನಿವಾಸ್ ಅವರ ಒಂದು ವರ್ಷದ ಅವಧಿ ಏಪ್ರಿಲ್ 26ಕ್ಕೆ ಕೊನೆಗೊಳ್ಳಲಿದೆ. ನಂತರ ಇವರ ಸ್ಥಾನಗಳಿಗೆ ಹೊಸಬರು ಬರುವುದು ಖಂಡಿತ. ಆದ್ದರಿಂದ ಇವರು ಶಾಸಕರಾಗಲು ಬಯಸಿರಬಹುದು. ಆದರೆ, ಎರಡು ವರ್ಷದ ಅಧಿಕಾರ ಬಾಕಿ ಇರುವಾಗಲೇ ಬಿಬಿಎಂಪಿ ಸದಸ್ಯರಿಗೆ ಶಾಸಕರಾಗುವ ತರಾತುರಿ ಏನು ಎಂದು ತಿಳಿದಿಲ್ಲ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications