ಕ್ರಿಕೆಟರ್ಸ್, ಸಿನಿ ತಾರೆಯರ ಮೇಲೆ ಚಾರ್ಜ್ ಶೀಟ್

ಇತ್ತೀಚಿನ ದಿನಗಳಲ್ಲಿ ಪುಣೆಯ ಸಂಸ್ಕೃತಿ ನುಚ್ಚು ನೂರಾಗುತ್ತಿದೆ. ಟಿವಿ ನಟಿಯರು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ ಪ್ರಕರಣ ಕಣ್ಮುಂದೆ ಇರುವಾಗಲೇ ರೇವ್ ಪಾರ್ಟಿಯೊಂದರಲ್ಲಿ ಮಜಾ ಉಡಾಯಿಸುತ್ತಿದ್ದ ನೂರಾರು ಮಂದಿಯನ್ನು ಪುಣೆ ಗ್ರಾಮಾಂತರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸೆರೆಸಿಕ್ಕ 300ಕ್ಕೂ ಅಧಿಕ ಜನರ ಪೈಕಿ ಉಗ್ರಗಾಮಿ ನಿಗ್ರಹ ದಳ(ATS) ಅಧಿಕಾರಿ ಹಾಗೂ ಆತನ ಪತ್ನಿ ಇರುವುದು ಪತ್ತೆಯಾಗಿತ್ತು.
ಕಿರುತೆರೆ ತಾರೆಯರಾದ ಅಪೂರ್ವ ಅಗ್ನಿಹೋತ್ರಿ, ಶಿಲ್ಪ ಅಗ್ನಿಹೋತ್ರಿ ಅವರ ಹೆಸರು ಚಾರ್ಜ್ ಶೀಟ್ ನಲ್ಲಿ ಕಂಡು ಬಂದಿದೆ. ಸುಮಾರು 1,200 ಪುಟಗಳ ಆರೋಪ ಪಟ್ಟಿಯಲ್ಲಿ 86 ಜನ ಆರೋಪಿಗಳನ್ನು ಹೆಸರಿಸಲಾಗಿದೆ. 36 ಜನ ವಿದೇಶಿಯರು ವಾಂಟೆಂಡ್ ಲಿಸ್ಟ್ ನಲ್ಲಿದ್ದಾರೆ. ಪುಣೆ ವಾರಿಯರ್ಸ್ ಪರ ಆಡುತ್ತಿದ್ದ ವಾಯ್ನ್ ಪಾರ್ನೆಲ್ ಮೇಲೆ ನಾಪತ್ತೆ ಪ್ರಕರಣ ದಾಖಲಾಗಿದ್ದು, ಸರ್ಚ್ ವಾರೆಂಟ್ ಹೊರಡಿಸಲಾಗಿದೆ ಎಂದು ಮುಂಬೈ ಪೊಲೀಸರು ಸೋಮವಾರ(ಮಾ.25) ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಜುಹೂ ಪ್ರದೇಶ ಹೋಟೆಲ್ ನ ಮಾಲೀಕ ವಿಷಯ್ ಹಂಡಾ, ಡಿಜೆ ದೀಪೇಶ್ ಶರ್ಮ ಹಾಗೂ ರಾಕೇಶ್ ಶರ್ಮ, ಅಗ್ನಿಹೋತ್ರಿಗಳು, ರಾಹುಲ್ ಶರ್ಮ ಪ್ರಮುಖ ಆರೋಪಿಗಳಾಗಿದ್ದಾರೆ.
ಓಕ್ ವುಡ್ ಪ್ರಿಮಿಯರ್ ಹೋಟೆಲ್ ನಲ್ಲಿದ್ದುದು ನಿಜ. ಆದರೆ ಬೇರೆಯದೇ ಪಾರ್ಟಿಗಾಗಿ ಅಲ್ಲಿಗೆ ತೆರಳಿದ್ದೆ ಎಂದು ಅವರು ಹೇಳಿಕೆ ನೀಡಿದ್ದಾರೆ. 'ಜುಹೂನಲ್ಲಿರುವ ಓಕ್ ವುಡ್ ಪ್ರಿಮಿಯರ್ ಹೋಟೆಲಿನಲ್ಲಿ ಆಯೋಜಿಸಲಾಗಿದ್ದ ಬರ್ತ್ ಡೇ ಪಾರ್ಟಿಗೆ ಹೋಗಿದ್ದೆ. ನಾನು ಅಲ್ಲಿಗೆ ಹೋಗುವ ವೇಳೆಗೆ ಯಾರೂ ಅಲ್ಲಿರಲಿಲ್ಲ' ಎಂದು ರಾಹುಲ್ ಹೇಳಿಕೆ ನೀಡಿದ್ದರು.
ಓಕ್ ವುಡ್ ಹೋಟೆಲ್ ರೇವ್ ಪಾರ್ಟಿಯಲ್ಲಿ ಸೆರೆ ಸಿಕ್ಕವರಲ್ಲಿ 38 ಯುವತಿಯರು, 58 ಯುವಕರು, 19 ವಿದೇಶಿಯರು ಇದ್ದರು. ಬಂಧಿತರಲ್ಲಿ ಸಮಾಜದ ಗಣ್ಯವ್ಯಕ್ತಿಗಳು, ಉದ್ಯಮ, ಚಿತ್ರರಂಗ, ಕ್ರೀಡೆ, ರಾಜಕೀಯ ವಲಯದ ಮುಖಂಡರ ಕುಟುಂಬಕ್ಕೆ ಸೇರಿದವರಾಗಿದ್ದರು. ಎಲ್ಲರ ಮೇಲೂ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆ 54 A ಪ್ರಕಾರ ಪಾಸಿಟಿವ್ ಎಂದು ವರದಿ ಮಾಡಲಾಗಿದೆ.
ಮಾದಕ ವ್ಯಸನದಿಂದ ಹೊರ ಬರಲು ವ್ಯಸನ ನಿಯಂತ್ರಣ ಕೇಂದ್ರಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಬಹುದಾಗಿದೆ. ಓಕ್ ವುಡ್ ಹೋಟೆಲ್ ಎಂಡಿ ಹುಸೇನ್ ತಾನು ಸರ್ಕಾರಿ ಸ್ವಾಮ್ಯದ ಕೇಂದ್ರಕ್ಕೆ ಹೋಗಿ ಚಟ ಬಿಡಿಸುವ ಔಷಧಿ ತೆಗೆದುಕೊಂಡಿರುವುದಾಗಿ ಹೇಳಿಕೆ ನೀಡಿದ್ದಾನೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications