ಪಟ್ಟಿ ಹಿಡಿದು ಅಜ್ಮೀರ್ ದರ್ಗಾಕ್ಕೆ ಹೊರಟ ಕುಮಾರಣ್ಣ
ಬೆಂಗಳೂರು, ಮಾ.25: ನಂಬಿಕೆಗಳು, ಮೂಢನಂಬಿಕೆಗಳು ಅವರವರದೇ ಸ್ವತ್ತು ಎಂದು ಮೊನ್ನೆಯಷ್ಟೇ ಬಾಲಿವುಡ್ ಸೆಲೆಬ್ರೆಟಿಗಳ ಬಗ್ಗೆ ಬರೆದಾಗ ಹೇಳಲಾಗಿತ್ತು. ಕತ್ರಿನಾ ಕೈಫ್ ಎಂಬ ಆಮದು ನಟಿಗೆ ಅಜ್ಮೀರ್ ದರ್ಗಾಕ್ಕೆ ಹೋಗಿಬಂದರೆ ಅದೃಷ್ಟ ಖುಲಾಯಿಸುತ್ತಂತೆ.
ಅಜ್ಮೀರ್ ದರ್ಗಾ ಕ್ಷೇತ್ರ ಮಹಿಮೆ: ಬರೀ ಒಬ್ಬ ಕತ್ರಿನಾ ಏಕೆ. ಅಜ್ಮೀರ್ ದರ್ಗಾಕ್ಕೆ ಎಲ್ಲೆಂಲ್ಲಿಂದಲೋ ಬಂದು ತಮ್ಮ ಇಷ್ಟಾರ್ಥಗಳು ಸಿದ್ಧಿಸಲಿ ಎಂದು ಮುಡಿ ಅರ್ಪಿಸುತ್ತಾರೆ. ಆ ಕ್ಷೇತ್ರ ಮಹಿಮೆಯೇ ಅಂತಹುದು.

ಈಗ ರಾಜ್ಯದಲ್ಲಿ ಚುನಾವಣೆ ಕಾಲ. ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ ಎಂಬುದು ಪಕ್ಷದ ನಾಯಕರ ಆಶಯವಾಗಿರುತ್ತದೆ. ಹಾಗೆಂದೇ, ಭಾವಿ ಮುಖ್ಯಮಂತ್ರಿ ಎಂದೇ ಬಿಂಬಿತರಾದ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರೂ ತಮ್ಮ ಇಷ್ಟಾರ್ಥ ನೆರವೇರಲಿ ಎಂದು ಪ್ರಾರ್ಥಿಸಲು ದೂರದ ದರ್ಗಾಕ್ಕೆ ಇಂದು ಹೊರಟಿದ್ದಾರೆ.
ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿದ್ದು, ಆ ಪಟ್ಟಿಯನ್ನು ದರ್ಗಾದಲ್ಲಿಟ್ಟು, ಅವರನ್ನೆಲ್ಲ ಗೆಲ್ಲಿಸು ತಂದೆ ಎಂದು ಪ್ರಾರ್ಥಿಸುವುದಾಗಿ ಕುಮಾರಣ್ಣ ಹೇಳಿದ್ದಾರೆ. ದರ್ಗಾದಲ್ಲಿ ಆಶೀರ್ವಾದ ಪಡೆದುಬಂದ ನಂತರ ಗುರುವಾರ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸುವುದಾಗಿಯೂ ಕುಮಾರಸ್ವಾಮಿ ತಿಳಿಸಿದ್ದಾರೆ.
ಕಾಂಗ್ರೆಸ್ಸಿನ ಸಿದ್ದರಾಮಯ್ಯನವರನ್ನು ಇಬ್ರಾಹಿಂ ಅವರು ಕರೆದೊಯ್ಯುವ ಪರಿಪಾಠವಿದ್ದರೆ ಕುಮಾರಸ್ವಾಮಿಯನ್ನು ಭೈಯ್ಯಾ ಜಮೀರ್ ಪಾಷಾ ಕರೆದುಕೊಂಡು ಹೋಗುತ್ತಿದ್ದಾರೆ. ಅಂದಹಾಗೆ ಟಿಕೆಟ್ ಪಟ್ಟಿಯಲ್ಲಿ ಜಮೀರ್ ಜತೆಗೆ ಅವರ ಸೋದರನ ಹೆಸರೂ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಕುಮಾರಸ್ವಾಮಿ ಅವರು ಮುಸ್ಲಿಮರ ಅತ್ಯಂತ ಪವಿತ್ರ ಸ್ಥಳವಾದ ಅಜ್ಮೀರ್ ದರ್ಗಾಕ್ಕೆ ಹೋಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಚಾದರ ಅರ್ಪಿಸಿ ಬಂದಿದ್ದಾರೆ. ಕ್ರಿಸ್ತ ಶಕ 1142ರಲ್ಲಿ ಇರಾರಿನಲ್ಲಿ ಜನಿಸಿದ ಸೂಫಿ ಸಂತ ಹಜ್ರತ್ ಖ್ವಾಜಾ ಮೊಯಿನುದ್ದೀನ್ ಹಸನ್ ಛಿಸ್ತಿ ಅಜ್ಮೇರಿ ಇಲ್ಲಿನ ಧಾರ್ಮಿಕ ಗುರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications