ಲಂಚ : ಜಯಲಕ್ಷ್ಮೀ ದೇವಿಗೆ ನಾಲ್ಕು ವರ್ಷ ಜೈಲು

ಮಂಗಳವಾರ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎನ್.ಕೆ.ಸುಧೀಂದ್ರರಾವ್, ಜಯಲಕ್ಷ್ಮೀ ಅವರ ಪುತ್ರ ಅಲೋಕ್ ವಸಿಷ್ಠ ಅವರನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದು, ಜಯಲಕ್ಷ್ಮೀ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅವರಿಗೆ ನಾಲ್ಕು ವರ್ಷಗಳ ಸಜೆ ಮತ್ತು 1 ಲಕ್ಷ 35 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದರು.
ಏನಿದು ಪ್ರಕರಣ : 2009ರಲ್ಲಿ ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯೆಯಾಗಿದ್ದ ಜಯಲಕ್ಷ್ಮೀ ದೇವಿ ವಿವಿ ವ್ಯಾಪ್ತಿಯ ಖಾಸಗಿ ಕಾಲೇಜುಗಳ ಮೂಲಭೂತ ಸೌಲಭ್ಯ ಮತ್ತು ಶೈಕ್ಷಣಿಕ ವಾತಾವರಣ ಪರಿಶೀಲನೆ ನಡೆಸುವ ಸ್ಥಳೀಯ ತಪಾಸಣಾ ಸಮಿತಿ (ಎಲ್ಇಸಿ) ಅಧ್ಯಕ್ಷರಾಗಿದ್ದರು.
ಆಗ ಜಿಂದಾಲ್ ಗ್ರೂಪ್ ನ ಶೈಕ್ಷಣಿಕ ಸಂಸ್ಥೆಗಳಿಗೆ ಭೇಟಿ ನೀಡಿದ್ದ ಇವರು, ಸಂಸ್ಥೆಯ ಪರವಾಗಿ ವರದಿ ನೀಡಲು 2 ಲಕ್ಷ ರೂ.ಗಳ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಳು.
ತಮ್ಮ ಪುತ್ರ ಅಲೋಕ್ ವಸಿಷ್ಠನ ಮುಖಾಂತರ ಲಂಚದ ಹಣ ತರಲು ಪ್ರಯತ್ನಿಸಿದ್ದಳು. ಲೋಕಾಯುಕ್ತ ದಾಳಿ ನಡೆದಾಗ ಅಲೋಕ್ ಸಹ ಬಂಧಿತನಾಗಿದ್ದ. ಲೋಕಾಯುಕ್ತ ಪೊಲೀಸರು ಅಲೋಕ್ ಪ್ರಕರಣದಲ್ಲಿ ಎರಡನೇ ಆರೋಪಿ ಎಂದು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಅಧ್ಯಕ್ಷ ಹುದ್ದೆ ವಿವಾದ : ಕೇವಲ ಪ್ರಾಧ್ಯಪಕರು ಎಲ್ಇಸಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಬಹುದಿತ್ತು. ಆದರೆ, ಸಿಂಡಿಕೇಟ್ ಸದಸ್ಯೆಯಾಗಿದ್ದ ಜಯಲಕ್ಷ್ಮೀ ದೇವಿ ತಮ್ಮ ಪ್ರಭಾವ ಬಳಸಿಕೊಂಡು ಸಿಂಡಿಕೇಟ್ ಸಭೆಯ ಒಪ್ಪಿಗೆ ಪಡೆದು ಎಲ್ಐಸಿ ಅಧ್ಯಕ್ಷ ಹುದ್ದೆ ಏರಿ ವಿವಾದಕ್ಕೆ ಸಿಲುಕಿದ್ದರು.
ಸಮಿತಿಯ ಅಧ್ಯಕ್ಷರಾದ ನಂತರ ಬೆಂಗಳೂರು ವಿವಿ ವ್ಯಾಪ್ತಿಯ ಖಾಸಗಿ ಕಾಲೇಜುಗಳಿಗೆ ಭೇಟಿ ನೀಡಿ, ಆಯಾ ಶಿಕ್ಷಣ ಸಂಸ್ಥೆಗಳ ಪರವಾಗಿ ವರದಿ ನೀಡಲು ಲಂಚ ಪಡೆಯುತ್ತಾರೆ ಎಂಬ ಆರೋಪಗಳು ಇವರ ಮೇಲಿತ್ತು. ಹೀಗೆ ಜಿಂದಾಲ್ ಗ್ರೂಪ್ ನಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ಜಯಲಕ್ಷ್ಮೀ ಅವರನ್ನು ಬಂಧಿಸಿದ್ದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications