ಕೈ ಹಿಡಿಯಲು ಐವರು ಸಜ್ಜು ಉಳಿದವರು ಅತಂತ್ರ

ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೈ ಕಮಾಂಡ್ ನಾಯಕರೊಂದಿಗೆ ನಿರಂತರ ಸಮಾಲೋಚನೆ ನಡೆಸಿ ಐವರು ವಲಸಿಗರನ್ನು ಸೇರ್ಪಡೆಗೊಳಿಸಿಕೊಳ್ಳಲು ಅನುಮತಿ ಪಡೆದಿದ್ದಾರೆ. ಈ ಐವರು ಮಾ. 28ರಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರಲಿದ್ದಾರೆ.
ಪಕ್ಷೇತರ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ವೆಂಕಟರಮಣಪ್ಪ, ಸುಧಾಕರ್, ಶಿವರಾಜ್ ತಂಗಡಗಿ ಮತ್ತು ಬಿಜೆಪಿ ತೊರೆದಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಮಾ.28ರಂದು ಕಾಂಗ್ರೆಸ್ ಸೇರಲಿದ್ದಾರೆ. ಈ ಐವರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸುವುದು ಖಚಿತವಾಗಿದೆ.
ರಾಜೂಗೌಡರಿಗೆ ಸ್ಥಳೀಯರ ವಿರೋಧ : ಐವರು ಸೇರ್ಪಡೆಗೆ ಮಾತ್ರ ಅನುಮತಿ ದೊರಕಿದ್ದು, ಉಳಿದ ವಲಸಿಗರ ಭವಿಷ್ಯ ಅತಂತ್ರವಾಗಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಜೂಗೌಡ ಸೇರ್ಪಡೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ಧರಮ್ ಸಿಂಗ್ ವಿರೋಧ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ರಾಜುಗೌಡಗೆ ಕಾಂಗ್ರೆಸ್ ಬಾಗಿಲು ಮುಚ್ಚಲಾಗಿದೆ.
ಆಸ್ನೋಟಿಕರ್ ಗೆ ದೇಶಪಾಂಡೆ ತಡೆ : ಆನಂದ್ ಆಸ್ನೋಟಿಕರ್ ಮತ್ತೊಮ್ಮೆ ಕೈ ಹಿಡಿಯಲು ಕೆಪಿಸಿಸಿ ಮಾಜಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಕ್ಕಾಗಿ ಪಕ್ಷ ತೊರೆದು ಹೋದ ಆಸ್ನೋಟಿಕರ್ ಮತ್ತೆ ಪಕ್ಷಕ್ಕೆ ಬರುವುದು ಬೇಡ ಎಂದು ದೇಶಪಾಂಡೆ ಕೇಂದ್ರ ನಾಯಕರಿಗೆ ಒತ್ತಡ ತಂದಿದ್ದಾರೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಟಿಕೆಟ್ ಪಡೆದು ಮುಂದಿನ ಚುನಾವಣೆ ಎದುರಿಸುವ ಉತ್ಸಾಹದಲ್ಲಿದ್ದ ಮುಸ್ಕಿ ಶಾಸಕ ಪ್ರತಾಪ ಗೌಡ ಪಾಟೀಲ, ಶ್ರವಣಬೆಳಗೊಳ ಶಾಸಕ ಸಿ.ಎಸ್.ಪುಟ್ಟೇಗೌಡ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಹೈ ಕಮಾಂಡ್ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದ್ದರಿಂದ ಈ ನಾಯಕರ ಮುಂದಿನ ನಡೆ ಕುತೂಹಲ ಮೂಡಿಸಿದೆ.
ವಿಧಾನಸಭೆ ಚುನಾವಣೆ ಗೆಲ್ಲುವ ರಣತಂತ್ರ ರೂಪಿಸಿರುವ ಕಾಂಗ್ರೆಸ್ ವಲಸಿಗರ ಸೇರ್ಪಡೆಯ ನಂತರದ ಲಾಭ-ನಷ್ಟಗಳ ಕುರಿತು ಲೆಕ್ಕಾಚಾರ ನಡೆಸಿದೆ. ಮೂಲ ಕಾಂಗ್ರೆಸಿಗರ ವಿರೋಧದಿಂದಾಗಿ ವಲಸಿಗರಿಗೆ ತೀವ್ರ ಹಿನ್ನಡೆ ಉಂಟಾಗುತ್ತಿದೆ. ಇವರು ಯಾವ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದು ಕಾದು ನೋಡಬೇಕು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications