ಸದಾ Vs ಕಮಿಷನ್ ಉದಾಸಿ:ಕಾಡುವ ಪಂಚ ಪ್ರಶ್ನೆಗಳು
ಬೆಂಗಳೂರು, ಮಾ 26: ಲೋಕೋಪಯೋಗಿ ಇಲಾಖೆಗೆ ಸಂಬಂಧಪಟ್ಟ ಕಡತ ವಿಲೇವಾರಿಗೆ ಮತ್ತು ಅಧಿಕಾರಿಗಳ ವರ್ಗಾವಣೆಗೆ ಸಚಿವರಾಗಿದ್ದ ಸಿ ಎಂ ಉದಾಸಿ ಇಂತಿಷ್ಟು ಶೇಕಡಾವಾರು ಕಮಿಷನ್ ಪಡೆಯುತ್ತಿದ್ದರು ಎನ್ನುವ ಮಾಜಿ ಸಿಎಂ ಸದಾನಂದ ಗೌಡರ ಹೇಳಿಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ಮತ್ತು ಚರ್ಚೆಸೆ ಗ್ರಾಸವಾಗಿದೆ.
ಚುನಾವಣೆಯ ಹೊಸ್ತಿಲಲ್ಲಿ ಸದಾನಂದ ಗೌಡರ ಹೇಳಿಕೆ ಐದು ವರ್ಷ ಅಧಿಕಾರ ನಡೆಸಿದ ಬಿಜೆಪಿಯ ಭ್ರಷ್ಟಾಚಾರಕ್ಕೆ ಮತ್ತೊಂದು ಕಪ್ಪು ಚುಕ್ಕೆಯಾಗಿದೆ. ತಾನು ಸಿಂ ಆಗಿದ್ದಾಗ ಸಂಪುಟ ದರ್ಜೆ ಸಚಿವರಾಗಿದ್ದ ಉದಾಸಿ ಮಾಡುತ್ತಿದ್ದ ಕಮೀಷನ್ ವ್ಯವಹಾರ ತಡೆಗಟ್ಟಿದ್ದೆ.
ಅದಕ್ಕಾಗಿ ತಮ್ಮ ವಿರುದ್ದ ಯಡಿಯೂರಪ್ಪನವರ ಬಳಿ ಇಲ್ಲಸಲ್ಲದ್ದನ್ನು ಹೇಳಿ ತಾವು ಅಧಿಕಾರದಿಂದ ಕೆಳಗಿಳಿಯುವಂತೆ ಮಾಡಿದರು ಎಂದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಹಾವೇರಿಯಲ್ಲಿ ಉದಾಸಿ ಮೇಲೆ ಗುರುತರ ಆರೋಪ ಮಾಡಿದ್ದರು.
ಸದಾನಂದ ಗೌಡರು ಹತಾಸರಾಗಿ ನನ್ನ ವಿರುದ್ದ ಬೇಜಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಉತ್ತರ ಕರ್ನಾಟಕದ ಭಾಗದ ಐದು ಜನ ಶಾಸಕರು ಅಂದು ಸದಾನಂದ ಗೌಡರಿಗೆ ಬೆಂಬಲ ಸೂಚಿಸಿದ್ದರಿಂದ ಅವರು ಮುಖ್ಯಮಂತ್ರಿಯಾದರು ಎನ್ನುವ ಸತ್ಯವನ್ನು ಅವರು ಮರೆಯದಿರಲಿ ಎಂದು ಉದಾಸಿ ತಿರುಗೇಟು ನೀಡಿದ್ದಾರೆ.
ಇವರಿಬ್ಬರ ಆರೋಪ, ಪ್ರತ್ಯಾರೋಪದ ನಡುವೆ ಸಾರ್ವಜನಿಕರಿಗೆ ಕಾಡುವ ಐದು ಪ್ರಶ್ನೆಗಳು

ಐದು ಪ್ರಶ್ನೆಗಳು
ಗೌಡರೇ, ನೀವು ಸಿಎಂ ಆಗಿದ್ದಾಗ ಉದಾಸಿ ಕಮಿಷನ್ ಪಡೆಯುತ್ತಿದ್ದಾರೆ ಎನ್ನುವ ಸತ್ಯ ನಿಮಗೆ ತಿಳಿದಿದ್ದರೂ ಅವರನ್ನು ಸಂಪುಟದಿಂದ ಯಾಕೆ ಕೈಬಿಡಲಿಲ್ಲ?

ಐದು ಪ್ರಶ್ನೆಗಳು
ಗೌಡರೇ, ಭ್ರಷ್ಟಾಚಾರ ನಿಮ್ಮ ಕಣ್ಣು ಮುಂದೆ ನಡೆಯುತ್ತಿದ್ದರೂ ನೀವು ಅವರ ವಿರುದ್ದ ಕ್ರಮ ಕೈಗೊಳ್ಳದಿರುವುದು ಮುಖ್ಯಮಂತ್ರಿ ಸೀಟಿನಲ್ಲಿ ಇನ್ನೂ ಸ್ವಲ್ಪ ದಿನ ಮುಂದುವರಿಯುವ ದುರಾಸೆಯೇ?

ಐದು ಪ್ರಶ್ನೆಗಳು
ಉದಾಸಿಯವರೇ, ನಿಮ್ಮ ಭಾಗದ ಐದು ಮಂದಿ ಶಾಸಕರಿಂದ ಗೌಡರು ಸಿಎಂ ಆದರು, ಇಲ್ಲಾಂದ್ರೆ ಆಗುತ್ತಿರಲಿಲ್ಲ ಎನ್ನುವ ಹೇಳಿಕೆಯ ಹಿಂದಿನ ರಹಸ್ಯವೇನು? ನೀವು ಒಂದು ವೇಳೆ ಕಮಿಷನ್ ಪಡೆಯುವ ಗೌಡರ ಹೇಳಿಕೆ ನಿಜವಾಗಿದ್ದಲ್ಲಿ ಅದನ್ನು ನೋಡಿಯೂ ನೋಡದಂತೆ ಸದಾನಂದ ಗೌಡರು ಸುಮ್ಮನಿರಬೇಕಿತ್ತೇ?

ಐದು ಪ್ರಶ್ನೆಗಳು
ಗೌಡರೇ, ಉದಾಸಿ ಬಿಜೆಪಿ ತೊರೆದ ನಂತರ ನೀವು ಅವರ ಮೇಲೆ ಈ ಆರೋಪ ಮಾಡುತ್ತಿದ್ದೀರಿ. ಒಂದು ವೇಳೆ ಅವರು ಬಿಜೆಪಿಯಲ್ಲಿ ಮುಂದುವರಿದಿದ್ದರೆ ಈ ಕಮಿಷನ್ ಅವ್ಯವಹಾರದ ಬಗೆಗಿನ ನಿಮ್ಮ ಹೇಳಿಕೆ ಸಾರ್ವಜನಿಕ ವಾಗುತ್ತಿರಲಿಲ್ಲ. ಹೌದಲ್ಲವೇ?

ಐದು ಪ್ರಶ್ನೆಗಳು
ನೀವು ಅಧಿಕಾರ ನಡೆಸುತ್ತಿರುವುದು ಸಾರ್ವಜನಿಕರ ತೆರಿಗೆಯ ದುಡ್ಡಿನಲ್ಲಿ. ನಿಮ್ಮ ನಿಮ್ಮ ರಾಜಕೀಯ ಮೇಲಾಟಕ್ಕೆ ಸಾರ್ವಜನಿಕರ ದುಡ್ಡನ್ನು ಯಾಕೆ ಪೋಲು ಮಾಡುತ್ತೀರಾ? ಅವ್ಯವಹಾರ ನಡೆದರೂ ಅದನ್ನು ತಡೆಗಟ್ಟಲಾಗದಿದ್ದಾರೆ ನಿಮ್ಮಂತ: ಸರಕಾರ ಇದ್ದರೆಷ್ಟು ಬಿಟ್ಟರೆಷ್ಟು?
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications