ಕಾಂಗ್ರೆಸ್ ಸಭೆ ಅಂತ್ಯ : ಮೊದಲ ಪಟ್ಟಿ ಯಾವಾಗ?

ನವದೆಹಲಿಯಲ್ಲಿ ಗುರುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರೊಂದಿಗಿನ ಸಭೆಯ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಇಂದಿನ ಸಭೆಯಲ್ಲಿ ಕೇವಲ ಚುನಾವಣಾ ಕಾರ್ಯತಂತ್ರ ಮತ್ತು ಅಭ್ಯರ್ಥಿಗಳ ಆಯ್ಕೆಯ ಮಾನದಂಡಗಳ ಕುರಿತು ಮಾತ್ರ ಚರ್ಚೆ ನಡೆಸಲಾಗಿದೆ ಎಂದರು.
ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮಾ.30ರಂದು ಮತ್ತೊಮ್ಮೆ ಸಭೆ ಸೇರಲಾಗುವುದು ಎಂದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ತಮ್ಮ ನಡುವೆ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಭಿನ್ನಮತ ಉಂಟಾಗಿದೆ ಎಂಬ ಹೇಳಿಕೆಯನ್ನು ತಳ್ಳಿ ಹಾಕಿದ ಪರಮೇಶ್ವರ್,ಯಾವುದೇ ಭಿನ್ನಮತ ಉಂಟಾಗಿಲ್ಲ. ಇಬ್ಬರು ಸೇರಿ ಚರ್ಚಿಸಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ ಎಂದು ಹೇಳಿದರು.
ಸಭೆಯಲ್ಲಿ ಶ್ರವಣಬೆಳಗೊಳ ಕ್ಷೇತ್ರದ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಅವರಿಗೆ ಟಿಕೆಟ್ ನೀಡಲು ಅನುಮತಿ ದೊರತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮಾ.30ರ ಸಭೆಯಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಯಾಗುವ ಸಂಭವವಿದೆ. ಇಂದಿನ ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಧುಸೂಧನ್ ಮಿಸ್ತ್ರೀ ಮುಂತಾದವರು ಪಾಲ್ಗೊಂಡಿದ್ದರು.
ನಾಲ್ವರು ಪಕ್ಷೇತರ ಶಾಸಕರ ಸೇರ್ಪಡೆಗೂ ಇಂದಿನ ಸಭೆಯಲ್ಲಿ ಅಂತಿಮ ಒಪ್ಪಿಗೆ ನೀಡಲಾಗಿದೆ. ಆದರೆ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗೆ ಟಿಕೆಟ್ ನೀಡುವ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ತಿಳಿದು ಬಂದಿದೆ. ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಯಾವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಮಾನದದಂಡ ರೂಪಿಸಲಾಗಿದೆ. ಮಾನದಂಡಗಳು ಹೀಗಿವೆ.
* ಮೂರು ಬಾರಿ ಸೋತವರಿಗೆ ಟಿಕೆಟ್ ಇಲ್ಲ
* 25 ಸಾವಿರ ಮತಗಳ ಅಂತರಿಂದ ಸೋತವರಿಗೂ ಟಿಕೆಟ್ ಇಲ್ಲ
* ಐಪರೇಷನ್ ಕಮಲಕ್ಕೆ ಒಳಗಾದವರಿಗೆ ಟಿಕೆಟ್ ನೀಡಬಾರದು
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications