ಸ್ವತಂತ್ರ ಗೂಳಿಹಟ್ಟಿ ಯಾವುದೇ ಪಕ್ಷಕ್ಕೂ ಹೋಗೊಲ್ಲ

ಮತ್ತೆ ಪಕ್ಷೇತರನಾಗಿಯೇ ಈಗಿರುವ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವೆ. ಯಾವುದೇ ಪಕ್ಷದ ಸಹವಾಸ ಮಾಡುವುದಿಲ್ಲ ಎಂದು ತಾಲೂಕಿನ ಕಸಬಾ ಹೋಬಳಿ ಬುರುಡೆಕಟ್ಟೆ ಗ್ರಾಮದಲ್ಲಿ ಶ್ರೀ ಲಕ್ಷೀ ರಂಗನಾಥಸ್ವಾಮಿ ದೇವರ ದರ್ಶನ ಪಡೆದು ನಂತರ ಸುದ್ದಿಗಾರರಿಗೆ ಶಾಸಕ ಗೂಳಿಹಟ್ಟಿ ಶೇಖರ್ ತಿಳಿಸಿದರು.
ಹಲವು ಪಕ್ಷಗಳ ಮುಖಂಡರು ನನ್ನನ್ನು ಸಂಪರ್ಕಿಸಿ, ತಮ್ಮ ಪಕ್ಷದ ವತಿಯಿಂದ ಸ್ಪರ್ಧಿಸುವಂತೆ ಆಯಾ ಪಕ್ಷದ ಮುಖಂಡರು ಕೋರಿರುವುದು ನಿಜ. ಆದರೂ ನಾನು ಪಕ್ಷೇತರನಾಗಿ ಸ್ಪರ್ಧಿಸಬೇಕೆಂಬ ಎಲ್ಲರ ಒಮ್ಮತದ ಅಭಿಪ್ರಾಯದ ಮೇಲೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿದರು.
ನನ್ನ ಬೆಂಬಲಿಗರು ಮತ್ತು ಕಾರ್ಯಕರ್ತರ ಜತೆ ಸುದೀರ್ಘವಾಗಿ ಚರ್ಚಿಸಿರುವೆ. ಅವರೆಲ್ಲ ಪಕ್ಷೇತರನಾಗಿಯೇ ಚುನಾವಣೆ ಎದುರಿಸುವಂತೆ ಅಪೇಕ್ಷೆ ಪಟ್ಟಿದ್ದಾರೆ. ಹೀಗಾಗಿ ಜನಾಭಿಪ್ರಾಯಕ್ಕೆ ಬೆಲೆ ಕೊಟ್ಟು ಪಕ್ಷೇತರನಾಗಿಯೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಶೇಖರ್ ಸ್ಪಷ್ಟಪಡಿಸಿದ್ದಾರೆ.
ಹಿಂದಿನ ಚುನಾವಣೆಯಲ್ಲಿ ಕ್ಷೇತ್ರದ ಜನ ಪಕ್ಷೇತರ ಅಭ್ಯರ್ಥಿಯಾದ ನನ್ನನ್ನು ಶಾಸಕನ್ನಾಗಿ ಆರಿಸಿ ಕಳುಹಿಸಿದ್ದರು. ಪಕ್ಷೇತರ ಶಾಸಕನೊಬ್ಬ ಸರಕಾರ ರಚಿಸುವಷ್ಟರ ಮಟ್ಟಿಗೆ ಅವಕಾಶ ಕಲ್ಪಿಸಿಕೊಟ್ಟಿದ್ದರು. ಪಕ್ಷೇತರನಾಗಿ ಗೆದ್ದು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿ ಮೊದಲ ಬಾರಿಗೆ ಮಂತ್ರಿಯಾಗುವ ಸುಯೋಗವನ್ನೂ ಕ್ಷೇತ್ರದ ಮತದಾರರು ನನಗೆ ನೀಡಿದ್ದಾರೆ.
ಈ ಬಾರಿಯೂ ಪಕ್ಷೇತರನಾಗಿಯೇ ಸ್ಪರ್ಧಿಸಿ ಮತ್ತೆ ಮಂತ್ರಿಯಾಗುವ ಯೋಗ ದೊರಕಿದರೆ ಕ್ಷೇತ್ರಕ್ಕೆ ಮತ್ತಷ್ಟು ಲಾಭವಾಗಬಹುದು ಎಂಬುದು ಜನರ ನಿರೀಕ್ಷೆ. ಹಾಗಾಗಿ ಯಾವ ಪಕ್ಷದೊಂದಿಗೂ ಗುರುತಿಸಿಕೊಳ್ಳದಂತೆ ಬೆಂಬಲಿಗರು ಹೇಳಿದ್ದಾರೆ ಎಂದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications