'ಗುಂಡುಗಲಿ' ಸಿಸಿ ಪಾಟೀಲ್ ಬಿಜೆಪಿ ಬಿಡೋಲ್ಲ
ಕುತೂಹಲದ ಸಂಗತಿಯೆಂದರೆ ಯಡಿಯೂರಪ್ಪನವರ ಆಪ್ತ, ಗದಗ ಜಿಲ್ಲೆಯ ನರಗುಂದ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಸಿಸಿ ಪಾಟೀಲ ಅವರು ಕೆಜೆಪಿ ಸೇರುತ್ತಾರೆ ಎಂದು ಭಾರಿ ಗಾಳಿ ಸುದ್ದಿ ಹಬ್ಬಿತ್ತು. ಇದೇ ವೇಳೆ ಬಿಜೆಪಿ ರಾಜ್ಯಸಭೆ ಸದಸ್ಯ ಪ್ರಭಾಕರ್ ಕೋರೆ ಅವರೂ ಪಾಟೀಲರನ್ನು ಕೆಜೆಪಿಗೆ ಕರೆತರುವ ಪ್ರಯತ್ನದಲ್ಲಿದ್ದಾರೆ ಎಂದು ಬಿಂಬಿಸಲಾಗಿತ್ತು.
ಆದರೆ ಇದಕ್ಕೆಲ್ಲ ತೆರೆ ಎಳೆದಿರುವ ಸಿಸಿ ಪಾಟೀಲರು ಬಿಜೆಪಿಯಿಂದಲೇ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಖಚಿತವಾಗಿದೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿರುವ ಸಿಸಿ ಪಾಟೀಲರ ಸೋದರ ಅಣ್ಣಪ್ಪಗೌಡ ಪಾಟೀಲ ಅವರು ಶಾಸಕರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಕ್ಷೇತ್ರದ ಜನರ ಕೋರಿಕೆಯ ಮೇರೆಗೆ ಬಿಜೆಪಿಯಿಂದಲೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಕೆಲ ಮಾಧ್ಯಮಗಳಲ್ಲಿ ಶಾಸಕ ಪಾಟೀಲ ಅವರು ಕೆಜೆಪಿ ಸೇರುತ್ತಾರೆ ಎಂದು ಬಿಂಬಿಸಲಾಗುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾಗಿದೆ. ಈ ಬಗ್ಗೆ ಜನತೆಗೆ ಯಾವುದೇ ಸಂದೇಹ ಬೇಡ ಎಂದು ಅಣ್ಣಪ್ಪಗೌಡ ಪಾಟೀಲ ಅವರು ಸ್ಪಷ್ಟಪಡಿಸಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ