ಸದ್ಯಕ್ಕೆ ವಿದ್ಯುತ್ ದರ ಏರಿಕೆ ಬಿಸಿ ಇಲ್ಲ

ಕೆಪಿಟಿಸಿಎಲ್ಗೆ ನೀಡಬೇಕಾದ ವಿದ್ಯುತ್ ಸರಬರಾಜು ವೆಚ್ಚ ಸೇರಿದಂತೆ ಪ್ರತಿ ಯೂನಿಟ್ಗೆ 70 ಪೈಸೆ ಹೆಚ್ಚಿಸಬೇಕು ಎಂದು ರಾಜ್ಯದ ಐದು ಎಸ್ಕಾಂಗಳು ಕೆಇಆರ್ಸಿ ಮುಂದೆ ಪ್ರಸ್ತಾವ ನೀಡಿತ್ತು. ಆದರೆ, ಅಷ್ಟೊಂದು ಪ್ರಮಾಣದಲ್ಲಿ ದರ ಏರಿಕೆಗೆ ಕೆಇಆರ್ಸಿ ಒಪ್ಪಿಗೆ ನೀಡದೇ ಇದ್ದರೂ ಪ್ರತಿ ಯೂನಿಟ್ಗೆ 10ರಿಂದ 20 ಪೈಸೆಯಷ್ಟು ದರ ಹೆಚ್ಚಿಸಲು ಒಪ್ಪಿಗೆ ನೀಡುವ ಸಾಧ್ಯತೆ ಇತ್ತು.
ಕಳೆದ ವರ್ಷದ ಏ. 30ರಂದು ವಿದ್ಯುತ್ ದರ ಏರಿಕೆಯಾಗಿತ್ತು, ಪ್ರತಿ ಯೂನಿಟ್ ಗೃಹ ಬಳಕೆ ವಿದ್ಯುತ್ಗೆ 10 ಪೈಸೆ, ಕೈಗಾರಿಕೆ ಮತ್ತು ವಾಣಿಜ್ಯ ಬಳಕೆಗೆ 20 ಪೈಸೆಯಷ್ಟು ಏರಿಕೆ ಮಾಡಲಾಗಿತ್ತು.
ಕಳೆದ ನವೆಂಬರ್ನಲ್ಲಿ ಕೆಪಿಟಿಸಿಎಲ್ ಮತ್ತು ಎಸ್ಕಾಂಗಳು ವಿದ್ಯುತ್ ದರ ಏರಿಕೆ ಕುರಿತಂತೆ ಕೆಇಆರ್ಸಿ ಮುಂದೆ ಪ್ರಸ್ತಾವ ಸಲ್ಲಿಸಿದ್ದವು. ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಿಗೆ ಸೇರಿ ಪ್ರತಿ ಯೂನಿಟ್ಗೆ 70 ಪೈಸೆ ದರ ಹೆಚ್ಚಳ ಮಾಡಬೇಕು ಎಂಬ ಕೋರಿಕೆ ಮುಂದಿಟ್ಟಿದ್ದವು. ಈ ಕುರಿತಂತೆ ಸಾರ್ವಜನಿಕ ವಿಚಾರಣೆ ಪೂರ್ಣಗೊಳಿಸಿದ್ದ ಕೆಇಆರ್ಸಿ ತನ್ನ ಆದೇಶವನ್ನು ಕಾಯ್ದಿರಿಸಿತ್ತು,
ವಿದ್ಯುತ್ ಕೊರತೆ, ಪೂರೈಕೆ ವೆಚ್ಚ ಹೆಚ್ಚಳ ಸೇರಿದಂತೆ ಕಳೆದ ಮೂರೂವರೆ ವರ್ಷದಲ್ಲಿ ನಾಲ್ಕು ಬಾರಿ ದರ ಏರಿಕೆಯಾಗಿದೆ. ಆದರೆ, ಈ ಬಾರಿ ಬರಗಾಲ, ಚುನಾವಣೆ ಮುಂತಾದ ಕಾರಣಗಳಿಂದ ದರ ಏರಿಕೆ ಬಿಸಿಯಿಂದ ಗ್ರಾಹಕರು ಬಚಾವಾಗಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿ ಆಗಿರುವುದರಿಂದ ಸರ್ಕಾರ ಕೂಡಾ ಮಧ್ಯೆ ಪ್ರವೇಶಿಸುವಂತಿಲ್ಲ.
ಅಣುಸ್ಥಾವರ ಸ್ಥಾಪನೆ: ವಿವಾದಿತ ತಮಿಳುನಾಡಿನ ಕೂಡಂಕುಳಂ ಅಣುಸ್ಥಾವರದ ಮೊದಲ ಘಟಕ ಮುಂದಿನ ತಿಂಗಳು ಆರಂಭವಾಗಲಿದೆ. ಇದರಿಂದ ಕರ್ನಾಟಕಕ್ಕೆ ಎಷ್ಟರಮಟ್ಟಿಗೆ ಲಾಭವಾಗುವುದೋ ಕಾದು ನೋಡಬೇಕಿದೆ. ಅಣುಸ್ಥಾವರ ಆರಂಭದ ವಿಷಯವಾಗಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ಗೆ ಭರವಸೆ ನೀಡಿದ್ದಾರೆ. 'ಬ್ರಿಕ್' ರಾಷ್ಟ್ರಗಳ ಸಮಿತಿ ಸಭೆ ಬಳಿಕ ನಡೆದ ಭೇಟಿ ವೇಳೆ ಪ್ರಧಾನಿ ಈ ಭರವಸೆ ನೀಡಿದ್ದಾರೆ. ಬ್ರಿಕ್ ರಾಷ್ಟ್ರಗಳು ವಿಶ್ವಬ್ಯಾಂಕ್ ಗೆ ಪ್ರತಿಯಾಗಿ ಅದೇ ಮಾದರಿ ಬ್ಯಾಂಕ್ ಸ್ಥಾಪನೆ ಮಾಡುವುದಾಗಿ ಕೂಡಾ ಘೋಷಿಸಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications