ಪರ್ವೇಜ್ ಮುಷರ್ರಫ್ ಮೇಲೆ ಪಾದರಕ್ಷೆ ಎಸೆತ

ಅವರ ವಿರುದ್ಧ ಹೂಡಲಾಗಿರುವ ಕೇಸುಗಳ ವಿಚಾರಣೆಗೆಂದು ಸಿಂಧ್ ಹೈಕೋರ್ಟಿಗೆ ಹಾಜರಾಗಿ ಮರಳುತ್ತಿದ್ದಾಗ 69 ವರ್ಷದ ಮುಷರ್ರಫ್ ಮೇಲೆ ಅಪರಿಚಿತ ವ್ಯಕ್ತಿ ಶೂ ಎಸೆದಿದ್ದಾನೆ. ಮುಷರ್ರಫ್ ಅವರು ಭದ್ರತಾ ಸಿಬ್ಬಂದಿ ಮತ್ತು ಮಾಧ್ಯಮದವರಿಂದ ಸುತ್ತುವರಿದಿದ್ದರಿಂದ ಪಾದರಕ್ಷೆ ಅವರಿಗೆ ಬೀಳದೆ ಕೆಲವು ಅಡಿ ದೂರದಲ್ಲಿ ಬಿದ್ದಿದೆ.
ನಾಲ್ಕು ವರ್ಷಗಳ ಕಾಲ ದೇಶದಿಂದ ಹೊರಗಿದ್ದ ಮುಷರ್ರಫ್ ಕೆಲ ದಿನಗಳ ಹಿಂದೆ ಪಾಕಿಸ್ತಾನಕ್ಕೆ ಮರಳಿದ್ದರು. ಅವರ ವಿರುದ್ಧ ಹೂಡಲಾಗಿರುವ ಪ್ರಕರಣಗಳಲ್ಲಿ 15 ದಿನಗಳ ಜಾಮೀನಿ ವಿಸ್ತರಣೆ ಪಡೆದು ಹೊರಬರುತ್ತಿದ್ದಾಗ ಈ ಘಟನೆ ನಡೆದಿದೆ.
ಈ ಸಂದರ್ಭದಲ್ಲಿ ಕೆಲ ವಕೀಲರು ಮುಷರ್ರಫ್ ಮೇಲೆ ಧಿಕ್ಕಾರ ಕೂಗಲು ಆರಂಭಿಸಿದ್ದಾರೆ. ಆಗ ಮುಷರ್ರಫ್ ಬೆಂಬಲಿಗರು ಮತ್ತು ವಕೀಲರ ನಡುವೆ ಬಿಸಿಬಿಸಿ ವಾಗ್ಯುದ್ಧ ನಡೆದಿದೆ. ಭದ್ರತಾ ಸಿಬ್ಬಂದಿ ಮುಷರ್ರಫ್ರನ್ನು ಸುತ್ತುವರಿದು ಕೋರ್ಟಿಂದ ಹೊರಗೆ ಸುರಕ್ಷಿತವಾಗಿ ಕರೆದುಕೊಂಡು ಹೋದರು.
ಪರ್ವೇಜ್ ಮುಷರ್ರಫ್ ಮೇಲೆ ಚಪ್ಪಲಿ ಎಸೆತವಾಗಿದ್ದು ಇದು ಮೊದಲೇನಲ್ಲ. 2011ರಲ್ಲಿ ಬ್ರಿಟನ್ನಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಸಭೆಯಲ್ಲಿದ್ದ ವ್ಯಕ್ತಿಯೊಬ್ಬ ಚಪ್ಪಲಿ ಎಸೆಯಲು ಯತ್ನಿಸಿದ್ದ.
ಪಾದರಕ್ಷೆ ಎಸೆತ ಕಂಡ ಗಣ್ಯಾತಿಗಣ್ಯರ ಪಾಲಿಗೆ ಮುಷರ್ರಫ್ ಕೂಡ ಸೇರ್ಪಡೆಯಾದಂತಾಗಿದೆ. ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಬುಷ್, ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿ, ಕಾಂಗ್ರೆಸ್ ಧುರೀಣ ಪಿ ಚಿದಂಬರಂ, ಪ್ರಧಾನಿ ಮನಮೋಹನ ಸಿಂಗ್, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಸತಿ ಸಚಿವ ವಿ ಸೋಮಣ್ಣ, ಉದ್ಯಮಿ ನವೀನ್ ಜಿಂದಾಲ್, ಕಾಮನ್ವೆಲ್ತ್ ಹಗರಣದ ಆರೋಪಿ ಸುರೇಶ್ ಕಲ್ಮಾಡಿ, ಅರವಿಂದ್ ಕೇಜ್ಲಿವಾಲ್, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಯುಕೆ ಮಾಜಿ ಪ್ರಧಾನಿ ಟೋನಿ ಬ್ಲೇರ್ ಮೇಲೂ ಚಪ್ಪಲಿ ಎಸೆಯಲಾಗಿದೆ.
ತಮಾಷೆಯ ಸಂಗತಿಯೆಂದರೆ, 2009 ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಚಪ್ಪಲಿ ಎಸೆತ ಕಂಡ ಎಲ್ಲ ರಾಜಕಾರಣಿಗಳು ವಿಜೇತರಾಗಿದ್ದರು. ಇಂಥವರ ಮೇಲೆಲ್ಲ ಎಸೆಯಲಾಗಿರುವ ಚಪ್ಪಲಿಗಳನ್ನೆಲ್ಲ ಸಂಗ್ರಹಿಸಿ ಒಂದು ಮ್ಯೂಸಿಯಂ ಮಾಡಿದರೆ ಹೇಗೆ ಎಂಬ ತಮಾಷೆಯ ಮಾತು ಕೂಡ ಆ ಸಂದರ್ಭದಲ್ಲಿ ಕೇಳಿಬಂದಿತ್ತು. ಹಾಗಿದ್ರೆ, ಮುಂದಿನ ಚುನಾವಣೆಯಲ್ಲಿ ಪರ್ವೇಜ್ ಮುಷರ್ರಫ್ ಕೂಡ ವಿಜೇತರಾಗ್ತಾರಾ?
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications