ಯುವ ಕಾಂಗ್ರೆಸ್ ನಿಂದ ಟಿಕೆಟ್ ಗಾಗಿ ಹೋರಾಟ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯುವಕರಿಗೆ ಆದ್ಯತೆ ನೀಡಬೇಕು ಎಂದು ಆದೇಶ ನೀಡಿದ್ದರು. ಆದರೆ, ಕಾಂಗ್ರೆಸ್ ಪಟ್ಟಿ ತಯಾರಿಸುತ್ತಿರುವ ಹಿರಿಯ ನಾಯಕರು ಯುವಕರಿಗೆ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ ಎಂದು ತಿಳಿದ ಯುವ ಕಾಂಗ್ರೆಸಿಗರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಸುಮಾರು 12 ಕ್ಷೇತ್ರಗಳಲ್ಲಿ ಯುವ ಕಾಂಗ್ರೆಸ್ ಸದಸ್ಯರು ಟಿಕೆಟ್ ಬಯಸಿದ್ದಾರೆ. ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ಷಾನ್ ಸಹ ಮೂರು ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ಹಿರಿಯ ನಾಯಕರ ಧೋರಣೆಯಿಂದ ಟಿಕೆಟ್ ಕೈ ತಪ್ಪುವ ಸಂಭವ ಹೆಚ್ಚಾಗಿದೆ. ಆದ್ದರಿಂದ ರಾಜೀನಾಮೆ ತಂತ್ರದ ಮೂಲಕ ಟಿಕೆಟ್ ಪಡೆಯಲು ಯುವ ಕಾಂಗ್ರೆಸಿಗರು ಪ್ರಯತ್ನಿಸುತ್ತಿದ್ದಾರೆ.
ಮೈಸೂರಿನ ನರಸಿಂಹರಾಜನಗರ ಕ್ಷೇತ್ರದಿಂದ ಸ್ಪರ್ಧಿಸಲು ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಟಿಕೆಟ್ ಬಯಿಸಿದ್ದಾರೆ. ಈ ಕ್ಷೇತ್ರದಿಂದ ಹಾಲಿ ಶಾಸಕ ತನ್ವೀರ್ ಸೇಠ್ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಆದ್ದರಿಂದ ಟಿಕೆಟ್ ಕೈ ತಪ್ಪುವ ಭಯದಲ್ಲಿ ರಿಜ್ವಾನ್ ದೆಹಲಿಗೆ ತೆರಳಿದ್ದಾರೆ.
ಐವರಿಗೆ ಟಿಕೆಟ್ : ಕಾಂಗ್ರೆಸ್ ಹೈಕಮಾಂಡ್ ಐವರು ಯುವಕರಿಗೆ ಟಿಕೆಟ್ ನೀಡಲು ಈಗಾಗಲೇ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಹಾಲಿ ಶಾಸಕ ಪ್ರಿಯ ಕೃಷ್ಣ, ಪ್ರಿಯಾಂಕ ಖರ್ಗೆ, ಅಜಯ್ ಸಿಂಗ್ ಹೆಸರುಗಳು ಪ್ರಮುಖವಾಗಿದೆ. ಸ್ವತಃ ರಿಜ್ವಾನ್ ಅವರ ಹೆಸರು ಈ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ ಆದ್ದರಿಂದ ರಾಜೀನಾಮೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಕೆಜೆಪಿ ಗಾಳ : ರಿಜ್ವಾನ್ ಯುವ ಕಾಂಗ್ರೆಸ್ ತೊರೆದರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕೆಜೆಪಿ ಸಿದ್ಧವಾಗಿದೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ರಿಜ್ವಾನ್ ಮೊದಲಿನಿಂದಲೂ ಕೆಜೆಪಿ ಪದಾಧಿಕಾರಿಗಳೊಂದಿಗೆ ಒಡನಾಟವಿಟ್ಟುಕೊಂಡಿದ್ದರು.
ಒಂದು ವೇಳೆ ಕಾಂಗ್ರೆಸ್ ಟಿಕೆಟ್ ದೊರೆಯದಿದ್ದರೆ ಕೆಜೆಪಿ ಸೇರಲು ಅವರು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ರಿಜ್ವಾನ್ ಶೀಘ್ರದಲ್ಲೇ ಭೇಟಿ ಮಾಡಲಿದ್ದಾರೆ ಎಂದು ಕೆಜೆಪಿ ಮೂಲಗಳೂ ತಿಳಿಸಿವೆ.
ಈಗಾಗಲೇ ಕಾಂಗ್ರೆಸ್ ಟಿಕೆಟ್ ಹಂಚಿಕೆ ಗೊಂದಲದ ಗೂಡಾಗಿದೆ. ಮಹಿಳೆಯರಿಗೆ ಆದ್ಯತೆ ನೀಡಿ ಎಂದು ಸೋನಿಯಾ, ಯುವಕರಿಗೆ ಆದ್ಯತೆ ಎಂದು ರಾಹುಲ್ ಸೂಚನೆ ನೀಡಿದ್ದಾರೆ. ಎಲ್ಲಾ ಆದೇಶಗಳನ್ನು ಪಾಲಿಸಿ ಯಾರಿಗೆ ಟಿಕೆಟ್ ನೀಡಲಾಗುತ್ತದೆ ಎಂಬುದು ಇನ್ನೂ ಬಹಿರಂಗೊಂಡಿಲ್ಲ. ಶನಿವಾರ ನಡೆಯಲಿರುವ ಕಾಂಗ್ರೆಸ್ ಚುನಾವಣಾ ಸಮತಿ ಸಭೆಯಲ್ಲಿ ಟಿಕೆಟ್ ಕುರಿತು ಸ್ಪಷ್ಟ ಚಿತ್ರಣ ಹೊರಬೀಳುವ ಸಂಭವವಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications