ಕೇಂದ್ರ ಸರ್ಕಾರದ ಜಾಹೀರಾತುಗಳಿಗೂ ಕತ್ತರಿ

ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ. ಕೇಂದ್ರ ಸರ್ಕಾರ ತನ್ನ ಸಾಧನೆ ಬಿಂಬಿಸುವ ಅನೇಕ ಜಾಹೀರಾತುಗಳನ್ನು ರಾಜ್ಯದ ಆಕಾಶವಾಣಿ ಮತ್ತು ಟಿವಿ ಚಾನೆಲ್ ಗಳಲ್ಲಿ ನೀಡುತ್ತಿದೆ.
ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಜಾಹೀರಾತು ನೀಡುವುದು ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಜಾಹೀರಾತುಗಳ ಪ್ರಸಾರಕ್ಕೆ ತಡೆಯೊಡ್ಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮದ್ಯ ವಹಿವಾಟಿಗೆ ತಡೆ : ಮತದಾರರಿಗೆ ಆಮಿಷವೊಡ್ಡಲು ವಿವಿಧ ಪಕ್ಷಗಳು ಮದ್ಯ ಹಂಚುತ್ತವೆ. ಇದನ್ನು ತಡೆಯಲು ಅಬಕಾರಿ ಮತ್ತು ಪಾನೀಯ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ. ಅಕ್ರಮ ಮದ್ಯ ಖರೀದಿ, ಸಾಗಣಿಕೆ, ಶೇಖರಣೆ ಮುಂತಾದ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು
ಖಾಸಗಿ ಕಂಪನಿಗಳಿಗೆ ರಜೆ :ಮತದಾನದ ದಿನದಂದು ಖಾಸಗಿ ಕಂಪನಿಗಳ ಕಚೇರಿಗಳಿಗೆ ರಜೆ ಘೋಷಿಸಲು ಆದೇಶ ನೀಡಲಾಗಿದೆ. ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಇಲಾಖೆ ಮುಖಾಂತರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಮಯ ನಿಗದಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ರಾಜಕೀಯ ಪಕ್ಷಗಳು ಆಕಾಶವಾಣಿ ಮತ್ತು ಟಿವಿ ಚಾನೆಲ್ ಗಳಲ್ಲಿ ಜಾಹೀರಾತು ನೀಡಲು ಸಮಯ ನಿಗದಿಗೊಳಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಕಾಂಗ್ರೆಸ್ ಗೆ 166 ನಿಮಿಷ, ಬಿಜೆಪಿಗೆ 163 ಮತ್ತು 111 ನಿಮಿಷಗಳ ಕಾಲಾವಕಾಶ ನಿಗದಿಗೊಳಿಸಲಾಗಿದೆ. ಎಲ್ಲಾ ನೋಂದಾಯಿತ ರಾಜಕೀಯ ಪಕ್ಷಗಳಿಗೆ 45 ನಿಮಿಷಗಳ ಸಮಯಾವಕಾಶ ನೀಡಲಾಗುತ್ತದೆ. ಉಳಿದಂತೆ ಹಿಂದಿನ ಚುನಾವಣೆಯಲ್ಲಿ ಪಕ್ಷಗಳ ಸಾಧನೆ ಪರಿಗಣಿಸಿ ಹೆಚ್ಚುವರಿ ಸಮಯ ನಿರ್ಣಯಿಸಲಾಗುತ್ತದೆ.
ಭಾಷಣಗಳಿಗೆ ಸಮಯ : ದೂರದರ್ಶನ ಮತ್ತು ಆಕಾಶವಾಣಿಗಳಲ್ಲಿ ಪ್ರತಿ ಪಕ್ಷಗಳು 5 ನಿಮಿಷ ಭಾಷಣ ಮಾಡಬಹುದು ಎಂದು ಸಮಯಾವಕಾಶ ನಿರ್ಧರಿಸಲಾಗಿದೆ. ಇದರ ಅನ್ವಯ ಕಾಂಗ್ರೆಸ್ 33, ಬಿಜೆಪಿ 32, ಜೆಡಿಎಸ್ ಗೆ 22 ಮತ್ತು ಇತರೆ ಪಕ್ಷಗಳಿಗೆ 9 ಬಾರಿ ಭಾಷಣ ಮಾಡಲು ಅವಕಾಶ ದೊರೆಯಲಿದೆ.
ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರಿಸುವವರಿಗೆ ಏ.7ಕೊನೆಯದಿನವಾಗಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ಒಂದು ವೇಳೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನೊಂದಾಯಿಸಿಕೊಳ್ಳುವ ಬಗೆ ಇಲ್ಲಿ ವಿವರಿಸಲಾಗಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications