ಮೋಟಮ್ಮ ಅವರಿಗೆ ಸಕಲೇಶಪುರ ಬೇಡಂತೆ!

ಸ್ಕ್ರೀನಿಂಗ್ ಕಮಿಟಿ ದೆಹಲಿಯಲ್ಲಿ ಆರಂಭಿಕ ಹಂತದಲ್ಲಿ ಸಿದ್ಧಪಡಿಸಿದ್ದ ಸಂಭಾವ್ಯರ ಪಟ್ಟಿಯಲ್ಲಿ ಮೋಟಮ್ಮ ಸ್ಥಾನ ವಂಚಿತರಾಗಿದ್ದರು. ಆದರೆ, ಮಹಿಳೆಯರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಸೋನಿಯಾಗಾಂಧಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ವಿಪಕ್ಷ ನಾಯಕ ಸಿದ್ಧರಾಮಯ್ಯರನ್ನು ತರಾಟೆಗೆ ತೆಗೆದುಕೊಂಡ ಬಳಿಕ 16 ಮಹಿಳೆಯರು ಇರುವ ಪಟ್ಟಿಯೊಂದನ್ನು ಕೆಪಿಸಿಸಿ ಹೈಕಮಾಂಡ್ ಮುಂದಿಟ್ಟಿತ್ತು. ಗೊಂದಲದ ನಡುವೆ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಮೋಟಮ್ಮ ಅವರಿಗೆ ಸಕಲೇಶಪುರ ಕ್ಷೇತ್ರದಲ್ಲಿ ಅವಕಾಶ ನೀಡಲು ನಿರ್ಧರಿಸಲಾಗಿತ್ತು.
ಲಭ್ಯವಾಗಿರುವ ಖಚಿತ ಮಾಹಿತಿಯ ಪ್ರಕಾರ, ಮೋಟಮ್ಮ ಸಕಲೇಶಪುರ ಕ್ಷೇತ್ರದ ಬಗ್ಗೆ ಸಮಗ್ರ ವಿವರ ತರಿಸಿಕೊಂಡಿದ್ದಾರೆ. ಟಿಕೆಟ್ ಬೇಕೆಂದರೆ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಒತ್ತಾಯವಿದ್ದರೂ ಫಲಿತಾಂಶದವರೆಗೆ ಕಾದು ನೋಡಲು ಚಿಂತಿಸಿದ್ದ ಮೋಟಮ್ಮರ ವಿರುದ್ಧ ಕೆಪಿಸಿಸಿ ವಲಯದಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದ್ದವು. ಮಲ್ಲಿಕಾರ್ಜುನ ಖರ್ಗೆ, ಬಿ.ಎಲ್.ಶಂಕರ್, ಉಮಾಶ್ರೀ ಸಹಿತ ಅನೇಕ ನಾಯಕರು ಮೋಟಮ್ಮ ನಿಲುವಿನ ಬಗ್ಗೆ ಅಪಸ್ವರ ಎತ್ತಿದ್ದು ಬಹಿರಂಗವಾಗಿತ್ತು.
ಹಿರಿಯ ಕಾಂಗ್ರೆಸ್ ನಾಯಕ ರಂಗನಾಥ್ ಅವರು 'ತಾಲೂಕು ನಾಯಕರು ಹಾಗೂ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಮೋಟಮ್ಮ ಅವರಿಗೆ ಟಿಕೆಟ್ ನೀಡಿದರೆ ಮಾತ್ರ ಹಾಸನ ಜಿಲ್ಲೆ ಸ್ಥಾನ ಉಳಿಸಿಕೊಳ್ಳಲು ಸಾಧ್ಯ. ಮಾಜಿ ಎಂಎಲ್ ಎ ಬೇಲೂರಿನ ಡಿ ಮಲ್ಲೇಶ್ ಅವರಿಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ನಾಯಕರು ಪಕ್ಷ ತೊರೆಯಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದರು.
ಒಬ್ಬರಿಗೆ ಒಂದು ಹುದ್ದೆ ಎನ್ನುವ ಹೈಕಮಾಂಡ್ ನಿಯಮವನ್ನು ಮೋಟಮ್ಮ ಉಲ್ಲಂಘಿಸುವ ಸಿದ್ಧತೆ ಯಲ್ಲಿದ್ದರು. ಈ ಹಂತದಲ್ಲಿ ಹೇಮ ಶೇಖರ್, ಬಿ.ಎಸ್.ಜಯರಾಂ, ಎಂ.ಎಂ.ಲಕ್ಷಣಗೌಡ, ಅನಂತ್, ವಿನಯ ಕುಮಾರ್ರು ಸಭೆ ನಡೆಸಿ ಸಕಲೇಶಪುರ ಕ್ಷೇತ್ರ ಕಾಂಗ್ರೆಸ್ಗೆ ಲಾಭದಾಯಕವಲ್ಲ ಎನ್ನುವ ಬಗ್ಗೆ ಮೋಟಮ್ಮರವರಿಗೆ ಮನವರಿಕೆ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಸೋಲುಂಟಾದರೆ ತಮ್ಮ ಮುಂದಿನ ರಾಜಕೀಯ ನಡೆಗಳಿಗೆ ಅಡ್ಡಿಯಾಗುವ ಭೀತಿಯಿಂದ ಅವರು ಚುನಾವಣೆಯಲ್ಲಿ ಸ್ಪಧಿಸದಿರಲು ನಿರ್ಧರಿಸುವ ಮಾಹಿತಿ ಲಭ್ಯವಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications