ರಸ್ತೆಯಲ್ಲೇ ಬಿಜೆಪಿ ಕಾರ್ಯದರ್ಶಿ ಮೇಲೆ ರೇಪ್ ಯತ್ನ

ವಸಂತ ವಿಹಾರದಲ್ಲಿ ಈ ಘಟನೆ ನಡೆದಿದ್ದು, ಬಿಜೆಪಿ ಕಾರ್ಯದರ್ಶಿ ವಾಣಿ ತ್ರಿಪಾಠಿ ಅವರ ಮೇಲೆ ಮಾನಭಂಗ ಯತ್ನ ನಡೆದಿದೆ. ಅದೂ ಜನನಿಬಿಡ ಮಾರುಕಟ್ಟೆ ರಸ್ತೆಯಲ್ಲಿ ಈ ಘಟನೆ ನಡೆದಿರುವುದು ಮಹಿಳೆಯರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.
'ಐದು ಮಂದಿ ಕುಡುಕರು ನನ್ನ ಕಾರಿನೊಳಕ್ಕೆ ನುಗ್ಗಲು ಯತ್ನಿಸಿದರು. ನಾನು ಒಳಗಿನಿಂದ ಲಾಕ್ ಮಾಡಿಕೊಂಡಾಗ ಆ ಕುಡುಕರು ಗಾಜುಗಳನ್ನು ಒಡೆಯಲಾರಂಭಿಸಿದರು' ಎಂದು ವಾಣಿ ತ್ರಿಪಾಠಿ ಟ್ವೀಟ್ ಮಾಡಿದ್ದಾರೆ.
'ಕೊನೆಗೆ ಆ ರಾಕ್ಷಸರಿಂದ ನನ್ನನ್ನು ಕಾಪಾಡಿದ್ದು ನನ್ನ ಕಾರಿನ ಚಾಲಕ. ನಾನು ತಕ್ಷಣ ಲಾಕ್ ಮಾಡಿಕೊಳ್ಳದಿದ್ದಿದ್ದರೆ... ನನ್ನನ್ನು ಸಾಯಿಸಿಬಿಡುತ್ತಿದ್ದರು. ನನ್ನ ಮೇಲೆ ರೇಪ್ ಸಹ ಆಗಬಹುದಿತ್ತು. ಇನ್ನೂ ಏನು ಬೇಕಾದರೂ ಆಗಬಹುದಿತ್ತು' ಎಂದು ವಾಣಿ ಹೇಳಿಕೊಂಡಿದ್ದಾರೆ.
ವಾಣಿ ಅವರ ಕಾರು ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದಾಗ ಈ ಘಟನೆ ನಡೆದಿದೆ. ದುರ್ದೈವವೆಂದರೆ ಸಾರ್ವಜನಿಕರು ಯಾರೂ ನನ್ನ ನೆರವಿಗೆ ಬರಲಿಲ್ಲ. ಇದು ನಿಜಕ್ಕೂ ನಾಚಿಕೆಗೇಡಿನ ಸಂಗತಿ' ಎಂದು ಮಾಜಿ ನಟಿಯೂ ಆದ ವಾಣಿ ಹೇಳಿಕೊಂಡಿದ್ದಾರೆ.
ಆದರೆ ಪೊಲೀಸರು ಘಟನಾ ಸ್ಥಳಕ್ಕೆ ಬರುವ ವೇಳೆಗೆ ಕುಡುಕರು ಪರಾರಿಯಾಗಿದ್ದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications