ದ್ವಿತೀಯ ಪಿಯುಸಿ ಗಣಿತ ವಿಷಯಕ್ಕೆ 9 ಗ್ರೇಸ್ ಅಂಕ

ಗುರುವಾರ ಪಿಯುಸಿ ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ಐದು ಪ್ರಶ್ನೆಗಳನ್ನು ತಪ್ಪಾಗಿ ಮುದ್ರಿಸಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಹೈಕೋರ್ಟ್ ತರಾಟಟೆಗೆ ತೆಗೆದುಕೊಂಡಿತ್ತು. ಎಚ್.ಎಂ.ಕೌಶಿಕ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಇಲಾಖೆಗೆ ನೋಟೀಸ್ ಜಾರಿಗೊಳಿಸಿತ್ತು.
ಗಣಿತ ಪರೀಕ್ಷೆ ನಡೆದ ದಿನದಿಂದ ಪ್ರಶ್ನೆಗಳನ್ನು ತಪ್ಪಾಗಿ ಮುದ್ರಿಸಿ ಪ್ರಶ್ನೆ ಪತ್ರಿಕೆಯನ್ನು ಕಠಿಣಗೊಳಿಸದ್ದ ಇಲಾಖೆಯ ಕ್ರಮದ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ಇದರಿಂದ ಮೌಲ್ಯಮಾಪನದ ಕುರಿತು ನಿರ್ಧಾರ ತೆಗೆದುಕೊಳ್ಳಲು ಸ್ಕೀಮ್ ಆಫ್ ವಾಲ್ಯುಯೇಷನ್ ಕಮಿಟಿ ರಚಿಸಲಾಗಿತ್ತು.
ಗುರುವಾರ ಪದವಿಪೂರ್ವ ಶಿಕ್ಷಣ ಇಲಾಖೆಗೆ ವರದಿ ನೀಡಿದ ಸಮಿತಿ, ಗಣಿತ ವಿಷಯದಲ್ಲಿ 9 ಗ್ರೇಸ್ ಅಂಕಗಳನ್ನು ಹೆಚ್ಚುವರಿಯಾಗಿ ನೀಡಬಹುದಾಗಿದೆ ಎಂದು ಸಲಹೆ ನೀಡಿದೆ. ಸಮಿತಿಯ ನಿರ್ದೇಶನದಂತೆ ಗ್ರೇಸ್ ಅಂಕ ನೀಡಲು ಇಲಾಖೆ ನಿರ್ಧರಿಸಿದ್ದು, ಅಧಿಕೃತ ಆದೇಶ ಹೊರಬಿದ್ದಿಲ್ಲ.
ಕಷ್ಟದ ಪತ್ರಿಕೆ : ಗಣಿತ ಪ್ರಶ್ನೆ ಪತ್ರಿಕೆ ಬಗ್ಗೆ ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದ ಶಿಕ್ಷಕರೊಬ್ಬರು ಪ್ರಶ್ನೆ ಪತ್ರಿಕೆ ಪಠ್ಯ ಪುಸ್ತಕದ ಮಿತಿಯಲ್ಲಿತ್ತು. ಆದರೆ, ಸರಾಸರಿ ಅಂಕಗಳಿಸಿ ಉತ್ತೀರ್ಣರಾಗುವ ಅಭ್ಯರ್ಥಿಗಳಿಗೆ ಕಠಿಣವಾಗಿತ್ತು ಎಂದು ಹೇಳಿದರು.
2 ಅಂಕಗಳ ಪ್ರಶ್ನೆಯನ್ನು ಒಂದು ಅಂಕಕ್ಕೆ, 3 ಅಂಕಗಳ ಪ್ರಶ್ನೆಯನ್ನು 2 ಅಂಕಗಳಿಗೆ ಕೇಳಲಾಗಿತ್ತು. ಐದು ಪ್ರಶ್ನೆಗಳು ತಪ್ಪಾಗಿ ಮುದ್ರಣಗೊಂಡಿದ್ದವು. ಇದರಿಂದ ಗೊಂದಲ ಉಂಟಾಗಿತ್ತು. ನನ್ನ ವೃತ್ತಿ ಜೀವನದಲ್ಲಿ ಇಂತಹ ಕ್ಲಿಷ್ಟ ಪತ್ರಿಕೆ ನೋಡಿರಲಿಲ್ಲ ಎಂದು ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದ್ದು, ಮೇ.3ರೊಳಗೆ ಫಲಿತಾಂಶ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಇಲಾಖೆಯ ನಿರ್ಧಾರದಿಂದ ಗಣಿತ ಪರೀಕ್ಷೆ ಬರೆದ ವಿದ್ಯಾರ್ಥಿಗಳು ನಿಟ್ಟುಸಿರು ಬಿಡಬಹುದಾಗಿದೆ. [ಹೈಕೋರ್ಟ್ ಆದೇಶ]
-
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications