ಮಾಧ್ಯಮಗಳಿಗೂ ಆಯೋಗದ ನೀತಿ ಸಂಹಿತೆ

ನವದೆಹಲಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಚುನಾವಣಾ ಆಯೋಗದ ಉಪ ಕಾರ್ಯದರ್ಶಿ, ಪದ್ಮಾ ಆಂಗೋ ಚುನಾವಣೆಗೆ 48 ಗಂಟೆಗಳ ಮೊದಲು ಮುತದಾನ ಪೂರ್ವ ಸಮೀಕ್ಷೆ, ಮತ ಕೇಳುವ ಜಾಹೀರಾತು ಸೇರಿದಂತೆ ಚುನಾವಣೆ ಮೇಲೆ ಪ್ರಭಾವ ಬೀರುವ ಯಾವುದೇ ವರದಿಗಳನ್ನು ಪ್ರಸಾರ ಮಾಡಬಾರದು ಎಂದು ನಿರ್ಭಂದ ವಿಧಿಸಿದೆ.
ಈ ನಿಯಮವನ್ನು ಉಲ್ಲಂಘಿಸಿದವ ಮಾಧ್ಯಮದವರಿಗೆ ಎರಡು ವರ್ಷಗಳ ಜೈಲು ಮತ್ತು ದಂಡ ವಿಧಿಸುವ ಅಧಿಕಾರ ಕಾನೂನಿನಲ್ಲಿದ ಎಂದು ಹೇಳಿದರು. ಚುನಾವಣೆ ಪ್ರಚಾರದ ವರದಿಗಳ ಸಂದರ್ಭದಲ್ಲಿ ಉತ್ಪ್ರೇಕ್ಷೆಯ ವರದಿ ಮಾಡಬಾರದು ಎಂದು ಆಯೋಗ ಕಟ್ಟು ನಿಟ್ಟಿನ ಸೂಚನೆ ನೀಡಿದೆ.
ಮಾಧ್ಯಮಗಳಲ್ಲಿ ಒಬ್ಬ ಅಭ್ಯರ್ಥಿಗಳ ಪರವಾಗಿ ವರದಿ ಮಾಡಬಾರದು ಎಂದು ಆಯೋಗ ನಿಯಮ ರೂಪಿಸಿದೆ. ಒಬ್ಬ ವ್ಯಕ್ತಿಯ ಪರವಾಗಿ ವರದಿ ಮಾಡಿದರೆ, ಅನ್ಯ ಪಕ್ಷಗಳ ಅಭ್ಯರ್ಥಿಗಳ ಸ್ಪಷ್ಟೀಕರಣಕ್ಕೂ ಅವಕಾಶ ನೀಡಬೇಕು ಎಂದು ಸೂಚಿಸಲಾಗಿದೆ.
ಸರ್ಕಾರದ ಮೂಲಕ ಆಡಳಿತಾರೂಢ ಸರ್ಕಾರದ ಸಾಧನೆ ಬಿಂಬಿಸುವ ಜಾಹೀರಾತು, ಪಕ್ಷದ ಸಾಧನೆ ಬಿಂಬಿಸುವ ಜಾಹೀರಾತು ನೀಡಿದರೆ ಸ್ವೀಕರಿಸಬಾರದು ಮತ್ತು ಪ್ರಸಾರ ಮಾಡಬಾರದು ಎಂದು ಸೂಚಿಸಲಾಗಿದೆ.
ಒಂದು ದಿನ 68,000 ಅರ್ಜಿ : ಮತದಾರರ ಪಟ್ಟಿಗೆ ಹೆಸರು ಸೇರಿಸಲು ಏ.7ರಂದು ಕೊನೆಯ ದಿನವಾಗಿದೆ. ರಾಜ್ಯಾದ್ಯಂತ ಏ.3ರಂದು 68,000 ಹೊಸ ಅರ್ಜಿಗಳನ್ನು ಪಡೆದುಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು ಜನವರಿ 28ರಿಂದ 7.53 ಲಕ್ಷ ಹೊಸ ಅರ್ಜಿಗಳು ಬಂದಿವೆ. ಅವುಗಳಲ್ಲಿ 4.36 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಹೇಳಿದರು. ಬೆಂಗಳೂರು ನಗರದಲ್ಲಿ 3.4 ಲಕ್ಷ ಅರ್ಜಿ ಸ್ವೀಕರಿಸಲಾಗಿತ್ತು. ಅವುಗಳಲ್ಲಿ 2.89 ಲಕ್ಷ ಹೆಸರುಗಳನ್ನು ಸೇರಿಸಲಾಗಿದೆ ಎಂದರು.
ಏ.7ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶವಿದೆ. ಏ.7 ಭಾನುವಾರವಾದರೂ ನೂತನ ಅರ್ಜಿಗಳನ್ನು ಪಡೆದುಕೊಳ್ಳಲು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು. ಹೊಸದಾಗಿ ಅರ್ಜಿ ನೀಡಿದವರ ಹೆಸರುಗಳನ್ನು ಚುನಾವಣಾ ಆಯೋಗದ ವೆಬ್ ಸೈಟ್ www.ceokarnataka.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದರು. (ಮತದಾರರ ಪಟ್ಟಿಗೆ ಹೆಸರು ಸೇರಿಸುವುದು ಹೇಗೆ)
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications