ಮಾಧ್ಯಮಗಳಿಗೂ ಆಯೋಗದ ನೀತಿ ಸಂಹಿತೆ

ನವದೆಹಲಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಚುನಾವಣಾ ಆಯೋಗದ ಉಪ ಕಾರ್ಯದರ್ಶಿ, ಪದ್ಮಾ ಆಂಗೋ ಚುನಾವಣೆಗೆ 48 ಗಂಟೆಗಳ ಮೊದಲು ಮುತದಾನ ಪೂರ್ವ ಸಮೀಕ್ಷೆ, ಮತ ಕೇಳುವ ಜಾಹೀರಾತು ಸೇರಿದಂತೆ ಚುನಾವಣೆ ಮೇಲೆ ಪ್ರಭಾವ ಬೀರುವ ಯಾವುದೇ ವರದಿಗಳನ್ನು ಪ್ರಸಾರ ಮಾಡಬಾರದು ಎಂದು ನಿರ್ಭಂದ ವಿಧಿಸಿದೆ.
ಈ ನಿಯಮವನ್ನು ಉಲ್ಲಂಘಿಸಿದವ ಮಾಧ್ಯಮದವರಿಗೆ ಎರಡು ವರ್ಷಗಳ ಜೈಲು ಮತ್ತು ದಂಡ ವಿಧಿಸುವ ಅಧಿಕಾರ ಕಾನೂನಿನಲ್ಲಿದ ಎಂದು ಹೇಳಿದರು. ಚುನಾವಣೆ ಪ್ರಚಾರದ ವರದಿಗಳ ಸಂದರ್ಭದಲ್ಲಿ ಉತ್ಪ್ರೇಕ್ಷೆಯ ವರದಿ ಮಾಡಬಾರದು ಎಂದು ಆಯೋಗ ಕಟ್ಟು ನಿಟ್ಟಿನ ಸೂಚನೆ ನೀಡಿದೆ.
ಮಾಧ್ಯಮಗಳಲ್ಲಿ ಒಬ್ಬ ಅಭ್ಯರ್ಥಿಗಳ ಪರವಾಗಿ ವರದಿ ಮಾಡಬಾರದು ಎಂದು ಆಯೋಗ ನಿಯಮ ರೂಪಿಸಿದೆ. ಒಬ್ಬ ವ್ಯಕ್ತಿಯ ಪರವಾಗಿ ವರದಿ ಮಾಡಿದರೆ, ಅನ್ಯ ಪಕ್ಷಗಳ ಅಭ್ಯರ್ಥಿಗಳ ಸ್ಪಷ್ಟೀಕರಣಕ್ಕೂ ಅವಕಾಶ ನೀಡಬೇಕು ಎಂದು ಸೂಚಿಸಲಾಗಿದೆ.
ಸರ್ಕಾರದ ಮೂಲಕ ಆಡಳಿತಾರೂಢ ಸರ್ಕಾರದ ಸಾಧನೆ ಬಿಂಬಿಸುವ ಜಾಹೀರಾತು, ಪಕ್ಷದ ಸಾಧನೆ ಬಿಂಬಿಸುವ ಜಾಹೀರಾತು ನೀಡಿದರೆ ಸ್ವೀಕರಿಸಬಾರದು ಮತ್ತು ಪ್ರಸಾರ ಮಾಡಬಾರದು ಎಂದು ಸೂಚಿಸಲಾಗಿದೆ.
ಒಂದು ದಿನ 68,000 ಅರ್ಜಿ : ಮತದಾರರ ಪಟ್ಟಿಗೆ ಹೆಸರು ಸೇರಿಸಲು ಏ.7ರಂದು ಕೊನೆಯ ದಿನವಾಗಿದೆ. ರಾಜ್ಯಾದ್ಯಂತ ಏ.3ರಂದು 68,000 ಹೊಸ ಅರ್ಜಿಗಳನ್ನು ಪಡೆದುಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು ಜನವರಿ 28ರಿಂದ 7.53 ಲಕ್ಷ ಹೊಸ ಅರ್ಜಿಗಳು ಬಂದಿವೆ. ಅವುಗಳಲ್ಲಿ 4.36 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಹೇಳಿದರು. ಬೆಂಗಳೂರು ನಗರದಲ್ಲಿ 3.4 ಲಕ್ಷ ಅರ್ಜಿ ಸ್ವೀಕರಿಸಲಾಗಿತ್ತು. ಅವುಗಳಲ್ಲಿ 2.89 ಲಕ್ಷ ಹೆಸರುಗಳನ್ನು ಸೇರಿಸಲಾಗಿದೆ ಎಂದರು.
ಏ.7ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶವಿದೆ. ಏ.7 ಭಾನುವಾರವಾದರೂ ನೂತನ ಅರ್ಜಿಗಳನ್ನು ಪಡೆದುಕೊಳ್ಳಲು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು. ಹೊಸದಾಗಿ ಅರ್ಜಿ ನೀಡಿದವರ ಹೆಸರುಗಳನ್ನು ಚುನಾವಣಾ ಆಯೋಗದ ವೆಬ್ ಸೈಟ್ www.ceokarnataka.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದರು. (ಮತದಾರರ ಪಟ್ಟಿಗೆ ಹೆಸರು ಸೇರಿಸುವುದು ಹೇಗೆ)
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications