ಮುಖ್ಯಮಂತ್ರಿ ಬೆಂಬಲ ಕಳೆದುಕೊಂಡ ಬಿಜೆಪಿ

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನಂತೆ ನೂರಾರು ಕಾರ್ಯಕರ್ತರು ನಿರ್ಲಕ್ಷಕ್ಕೆ ಒಳಗಾಗಿದ್ದಾರೆ. ನಾನು ಅವರ ಧ್ವನಿಯಾಗಿ ಮಾತನಾಡುತ್ತಿದ್ದೇನೆ. ಅಧಿಕಾರದ ಅಮಲನ್ನು ನೆತ್ತಿಗೇರಿಸಿಕೊಂಡು ದವಲತ್ತು, ಧಿಮಾಕಿನಿಂದ ಬೀಗುತ್ತಿರುವ ನಾಯಕರು ಈಗಲಾದರೂ ಎಚ್ಚೆತ್ತುಕೊಂಡು ನನ್ನಂತವರತ್ತ ಗಮನ ಹರಿಸಲಿ ಎಂದು ಖಾರವಾಗಿ ನುಡಿದರು.
ನನ್ನ ಆರೋಗ್ಯ ಸರಿ ಇಲ್ಲದಿರುವುದೂ ಪಕ್ಷ ರಾಜಕಾರಣದಿಂದ ದೂರ ಇರಲು ಕಾರಣ ಎಂದರು. ನನಗೆ ಅನ್ನ ಕೊಟ್ಟಿರುವುದು ಚಿತ್ರರಂಗ ರಾಜಕಾರಣದಿಂದಾಗಿ ಚಿತ್ರರಂಗದಿಂದ ದೂರವಾಗಿದ್ದೆ. ಇನ್ನು ಮುಂದೆ ನಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ ಎಂದು ಹೇಳಿದರು.
ನಾಳೆ ಬಿಜೆಪಿ ಏರ್ಪಡಿಸಿರುವ ವಿಜಯ ಸಂಕಲ್ಪ ಯಾತ್ರೆಗೆ ನನಗೆ ಆಹ್ವಾನ ಇಲ್ಲ. ಆದ್ದರಿಂದ ನಾನು ಅದರಲ್ಲಿ ಭಾಗವಿಸುವುದಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ತಿಳಿಸಿದರು.
1991ರಿಂದ ನಾನು ಬಿಜೆಪಿಯಲ್ಲಿ ಕಾರ್ಯಕರ್ತನಾಗಿದ್ದೇನೆ. ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಆದರೆ, ಏಳೆಂಟು ವರ್ಷಗಳಿಂದ ಉದ್ದೇಶಪೂರ್ವಕವಾಗಿ ನನ್ನನ್ನು ನಿರ್ಲಕ್ಷಿಸಲಾಗುತ್ತಿದೆ. ಪಕ್ಷದ ಯಾವುದೇ ವೇದಿಕೆಗಳಲ್ಲಿ ನನಗೆ ಸ್ಥಾನ ನೀಡಿಲ್ಲ.
ಈ ಬಗ್ಗೆ ಬಿಜೆಪಿಯ ನಾಯಕರುಗಳಾದ ಈಶ್ವರಪ್ಪ, ಆರ್.ಅಶೋಕ್, ಪ್ರಹ್ಲಾದ್ ಜೋಷಿ, ಸದಾನಂದಗೌಡ, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಂಸದ ಅನಂತಕುಮಾರ್ ಹಾಗೂ ರಾಷ್ಟ್ರೀಯ ನಾಯಕರ ಗಮನಕ್ಕೆ ತಂದಿದ್ದೇನೆ. ಹಲವು ಬಾರಿ ಪತ್ರವನ್ನೂ ಬರೆದಿದ್ದೇನೆ.
ನನಗೆ ಯಾರಿಂದಲೂ ಉತ್ತರ ಬಂದಿಲ್ಲ. ಕನಿಷ್ಠ ಕರೆದು ಚರ್ಚಿಸುವ ಸೌಜನ್ಯವನ್ನು ತೋರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನನಗೆ ಯಾವುದೇ ಪ್ರಭಾವಿ ನಾಯಕರ ಬೆಂಬಲವಿಲ್ಲ. ಹಣ, ಜಾತಿ ಬೆಂಬಲವಿಲ್ಲ. ಇಂದಿನ ರಾಜಕೀಯ ವ್ಯವಸ್ಥೆಗೆ ನನ್ನಂತಹವರು ಅಪ್ರಸ್ತುತ ಎಂದು ನಾಯಕರಿಗೆ ಅನಿಸಿರಬಹುದು. ಹಾಗಾಗಿ ನನ್ನನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ತಿನ ಅವಧಿ ಮುಗಿದ ನಂತರ ನನ್ನನ್ನು ಪುನರಾಯ್ಕೆ ಮಾಡುವಂತೆ ಮೂರು ಬಾರಿ ಮನವಿ ಮಾಡಿದ್ದೆ. ಅದಕ್ಕೆ ಮಾನ್ಯತೆ ಸಿಗಲಿಲ್ಲ. ನನಗೆ ಬಿಜೆಪಿ ಬಗ್ಗೆ ಯಾವುದೇ ದ್ವೇಷ, ಸಿಟ್ಟು, ಬೇಸರ ಇಲ್ಲ ಎಂದು ಮಾರ್ಮಿಕವಾಗಿ ಹೇಳಿದರು.
ರಾಜ್ಯ ನಾಯಕರುಗಳ ನಡವಳಿಕೆ ಬಗ್ಗೆ ಬೇಸರವಿದೆ. ಹಾಗೆಂದು ಬಿಜೆಪಿಯನ್ನು ಬಿಡುವುದಿಲ್ಲ. ಪಕ್ಷದಲ್ಲೇ ಇರುತ್ತೇನೆ. ಸದ್ಯಕ್ಕೆ 6 ತಿಂಗಳ ಕಾಲ ಚುನಾವಣೆ ಹಾಗೂ ಪಕ್ಷ ರಾಜಕೀಯದಿಂದ ದೂರು ಇರುತ್ತೇನೆ ಎಂದು ಚಂದ್ರು ಹೇಳಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications