ರಾಘವೇಂದ್ರ, ಉದಾಸಿ ಪಕ್ಷದಿಂದ ಅಮಾನತು

ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಈ ಕುರಿತು ಅಂತಿಮ ಆದೇಶ ಹೊರಡಿಸಿದ್ದು, ಪಕ್ಷ ವಿರೋಧಿ ಚಟಿವಟಿಕೆಯಲ್ಲಿ ತೊಡಗಿಸಿಕೊಂಡಿದ್ದರಿಂದ ಇಬ್ಬರು ಸಂಸದರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಶಿವಮೊಗ್ಗ ಸಂಸದ ಯಡಿಯೂರಪ್ಪ ಪುತ್ರ ರಾಘವೇಂದ್ರ ಮತ್ತು ಹಾವೇರಿ ಸಂಸದ ಮಾಜಿ ಸಚಿವ ಸಿ.ಎಂ.ಉದಾಸಿ ಪುತ್ರ ಶಿವಕುಮಾರ್ ಉದಾಸಿ ಬಿಜೆಪಿಯಿಂದ ಅಮಾನತುಗೊಂಡ ಸಂಸದರು. ಈ ಇಬ್ಬರು ಕರ್ನಾಟಕ ಜನತಾ ಪಕ್ಷದ ಪ್ರಚಾರ ಕಾರ್ಯದಲ್ಲಿ ಬಹಿರಂಗವಾಗಿ ತೊಡಗಿಸಿಕೊಂಡಿದ್ದರು. ಆದ್ದರಿಂದ ಪಕ್ಷ ವಿರೋಧಿ ಚಟುವಟಿಕೆಯ ನಡೆಸುತ್ತಿದ್ದಾರೆ ಎಂದು ಅಮಾನತುಗೊಳಿಸಲಾಗಿದೆ.
ತಡವಾಗಿ ಎಚ್ಚೆತ್ತ ಬಿಜೆಪಿ : ಕೆಜೆಪಿಯೊಂದಿಗೆ ಇಬ್ಬರು ಸಂಸದರು ಬಹಿರಂಗವಾಗಿ ಗುರುತಿಸಿಕೊಂಡಿದ್ದರೂ ಬಿಜೆಪಿ ನಾಯಕರು ಸುದೀರ್ಘ ಮೌನಕ್ಕೆ ಶರಣಾಗಿದ್ದರು. ಸಂಸದರು ತಾವಾಗೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕಾದು ನೋಡುವ ತಂತ್ರ ಅನುಸರಿಸಿದ್ದರು. ಆದರೆ, ಯಡಿಯೂರಪ್ಪ ಅವರ ತಂತ್ರದ ಫಲವಾಗಿ ಅವರು ರಾಜೀನಾಮೆ ನೀಡದಂತೆ ತಡೆದಿದ್ದರು.
ರಾಜ್ಯ ಬಿಜೆಪಿ ನಾಯಕರು ಹಲವು ಬಾರಿ ಈ ಇಬ್ಬರು ಸಂಸದರು ಅಮಾನತಿಗೆ ಶಿಫಾರಸ್ಸು ಮಾಡಿದರೂ ಬಿಜೆಪಿ ವರಿಷ್ಠರು ಕ್ರಮ ಕೈಗೊಂಡಿರಲಿಲ್ಲ. ರಾಜ್ಯ ಬಿಜೆಪಿಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಪ್ರಹ್ಲಾದ್ ಜೋಶಿ ಸಹ ಮೊದಲು ಈ ಇಬ್ಬರ ಅಮಾನತಿಗೆ ಶಿಫಾರಸ್ಸು ಸಲ್ಲಿಸಿದ್ದರು.
ತಡವಾಗಿ ಧೃಡ ನಿರ್ಧಾರ ತೆಗೆದುಕೊಂಡಿರುವ ವರಿಷ್ಠರು ಇಬ್ಬರನ್ನು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಚುನಾವಣಾ ರಣ ಕಹಳೆ ಊದಿದಿ ದಿನವೇ ಈ ಆದೇಶ ಹೊರಬಿದ್ದಿರುವುದು ತೀವ್ರ ಕುತೂಹಲ ಮೂಡಿಸಿದೆ.
ಶಾಂತ ಕಥೆ ಏನು : ಕೆಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಇಬ್ಬರು ಸಂಸದರನ್ನು ಅಮಾನತುಗೊಳಿಸಿ ಬಿಜೆಪಿ ಆದೇಶ ಹೊರಡಿಸಿದೆ. ಆದರೆ, ಬಿಎಸ್ಆರ್ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಬಳ್ಳಾರಿ ಸಂಸದೆ ಜೆ.ಶಾಂತ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತದೆ ಎಂದು ಕಾದು ನೋಡಬೇಕು.
ಬಿಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ ಬಿ.ಶ್ರೀರಾಮುಲು ಅವರೊಂದಿಗೆ ಜೆ.ಶಾಂತ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಪಕ್ಷದ ಸಭೆಗಳಲ್ಲಿ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ವಿರುದ್ದ ಏಕೆ ಕ್ರಮ ಕೈಗೊಂಡಿಲ್ಲ ಎಂಬ ಪ್ರಶ್ನೆ ಕಾಡುತ್ತಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications