ರಾಜ್ಯಕ್ಕೆ ಇಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು

ಸೋಮವಾರ ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ಆಗಮಿಸುವ ಮುಖ್ಯ ಚುನಾವಣಾ ಆಯುಕ್ತ ವಿ.ಎಸ್.ಸಂಪತ್, ಸಂಜೆ 4 ಗಂಟೆಗೆ ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಲಿದ್ದಾರೆ. ಏ.9ರ ಮಂಗಳವಾರ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಡಿಜಿಪಿ, ಐಜಿಪಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸಂಪತ್ ಅವರ ಜೊತೆ ಆಯುಕ್ತರಾದ ಎಚ್.ಎಸ್.ಬ್ರಹ್ಮ, ಡಾ.ಸೈಯದ್ ಅಹಮದ್ ಮುಂತಾದವರು ಆಗಮಿಸಲಿದ್ದಾರೆ. ರಾಜ್ಯ ಚುನಾವಣಾ ಆಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸುವ ಮುಖ್ಯ ಚುನಾವಣಾ ಆಯುಕ್ತರು, ವಿಧಾನಸಭೆ ಚುನಾವಣೆ ಸಿದ್ಧತೆಗಳ ಕುರಿತು ವಿವರವಾದ ಚರ್ಚೆ ನಡೆಸಲಿದ್ದಾರೆ.
ಮತದಾನದ ಸಮಯ ನಿಗದಿ : ಹಿಂದಿನ ಚುನಾವಣೆಗಳಲ್ಲಿ ಮತದಾನ ಬೆ.7ಕ್ಕೆ ಆರಂಭವಾಗುತ್ತಿತ್ತು. 5 ಕ್ಕೆ ಮುಗಿಯುತ್ತಿತ್ತು. ಈ ಬಾರಿ ಕೇಂದ್ರ ಚುನಾವಣಾ ಆಯೋಗ ಬೆ.8ಕ್ಕೆ ಮತದಾನ ಪ್ರಾರಂಭಿಸುವುದಾಗಿ ಘೋಷಿಸಿದೆ. ಆಯೋಗದ ಕ್ರಮ ರಾಜಕೀಯ ಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತಂತೆ ಇಂದು ಅಂತಿಮ ನಿರ್ಧಾರ ಹೊರಬೀಳುವ ಸಂಭವವಿದೆ.
ಮತಪಟ್ಟಿಗೆ ಹೆಸರು ನೋಂದಾಯಿಸಲು ಭಾನುವಾರ ಕಡೆಯ ದಿನಾಂಕವಾಗಿತ್ತು. ರಾಜ್ಯದಲ್ಲಿ ಒಟ್ಟಾರೆ ಮತ ಪಟ್ಟಿಗೆ ಸೇರಿದವರ ಸಂಖ್ಯೆ, ಗುರುತಿನ ಪತ್ರ ವಿತರಣೆ ಮುಂತಾದ ವಿವರಗಳನ್ನು ಮುಖ್ಯ ಚುನಾವಣಾ ಆಯುಕ್ತರು ಪಡೆಯುವ ಸಾಧ್ಯತೆ ಇದೆ.
ಒಂದು ಲಕ್ಷ ಅರ್ಜಿ : ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಕಡೆಯ ದಿನವಾದ ಭಾನುವಾರ 1.17 ಲಕ್ಷ ಅರ್ಜಿಗಳನ್ನು ಸ್ವೀಕರಿಲಾಗಿದೆ ಎಂದು ವಿಶೇಷ ಚುನಾವಣಾಧಿಕಾರಿ ಡಾ.ವಿಶಾಲ್ ಹೇಳಿದ್ದಾರೆ. ಅರ್ಜಿಗಳ ಪರಿಶೀಲನೆ ನಡೆಸಿ ಏ.17ರಂದು ಅಂತಿಮ ಮತಾದರರ ಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications