ಕೆಜೆಪಿ ತೆಂಗಿನಕಾಯಿ, ಬಿಎಸ್ಆರ್ ಫ್ಯಾನ್ ಚಿಹ್ನೆ ಕಾಯಂ

ಇದರಿಂದ ಕೆಜೆಪಿ ಮತ್ತು ಬಿಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಕಾಡುತ್ತಿದ್ದ ಆತಂಕ ದೂರವಾಗಿದ್ದು, ಈ ಚಿಹ್ನೆಗಳನ್ನು ಧಾರಾಳವಾಗಿ ಬಳಸಬಹುದಾಗಿದೆ. ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಕೇಂದ್ರ ಸ್ಥಾನವಾದ ಬಳ್ಳಾರಿಯಲ್ಲಿ ಬಿರುಬಿಸಿಲು ನೆತ್ತಿಗೇರಿರುವಾಗ ಚುನಾವಣೆ ಪ್ರಚಾರಕ್ಕಾಗಿ ಆ ಪಕ್ಷದ ಅಭ್ಯರ್ಥಿಗಳು ಫ್ಯಾನ್ ಚಿಹ್ನೆಯನ್ನು ಈ ಬೇಸಿಗೆಯಲ್ಲಿ ನಿರಂತರವಾಗಿ ತಿರುಗಿಸಬಹುದಾಗಿದೆ.
ಮತದಾನ ಅವಧಿ ವಿಸ್ತರಣೆಗೆ ಒಕ್ಕೊರಲ ಮೊರೆ:
ಮತದಾನದ ಅವಧಿಯನ್ನು ಒಂದು ಗಂಟೆ ಕಾಲ ಮೊಟಕುಗೊಳಿಸಿರುವುದರ ವಿರುದ್ಧ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳು ಗರಂ ಆಗಿದ್ದು, ರಾಜ್ಯದಲ್ಲಿ ಬೇಸಿಗೆ ಕಾಲವಿದೆ. ಹಾಗಾಗಿ ಮತದಾನಕ್ಕೆ ಹೆಚ್ಚಿನ ಕಾಲಾವಕಾಶ ಕಲ್ಪಿಸಿ, ಮತದಾನಕ್ಕೆ ಪ್ರೋತ್ಸಾಹಿಸುವ ಬದಲು ಅವಧಿಯನ್ನು ಮೊಟಕುಗೊಳಿಸಿ ಮತದಾರರನ್ನು ನಿರುತ್ಸಾಹಿಗಳನ್ನಾಗಿ ಮಾಡುತ್ತಿದೆ ಎಂದು ಅಲವತ್ತುಕೊಂಡಿವೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಚುನಾವಣೆಯ ಮತದಾನದ ಅವಧಿ ವಿಸ್ತರಿಸಲು ಚುನಾವಣಾ ಆಯೋಗಕ್ಕೆ ಒಕ್ಕೊರಲ ಮನವಿ ಮಾಡಿವೆ.
ರಾಜ್ಯದಲ್ಲಿ ಚುನಾವಣಾ ಪೂರ್ವಸಿದ್ಧತೆಗಳ ಪರಿಶೀಲನೆಗಾಗಿ ಆಗಮಿಸಿರುವ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ವಿಎಸ್ ಸಂಪತ್ ಅವರನ್ನು ಸೋಮವಾರ ಭೇಟಿ ಮಾಡಿದ ರಾಜಕೀಯ ಪಕ್ಷಗಳ ನಿಯೋಗವು, ಹೈದರಾಬಾದ್ ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ಸುಡು ಬಿಸಿಲು ಇರುವುರಿಂದ ಮತದಾರರು ಮತಗಟ್ಟೆಗಳತ್ತ ಬರುವುದು ಕಷ್ಟ. ಹೀಗಾಗಿ ಬೆಳಗ್ಗೆ ಮತ್ತು ಸಂಜೆ ಹೆಚ್ಚಿನ ಸಮಯ ಕೊಟ್ಟರೆ ಮತದಾನದಲ್ಲಿ ಪಾಲ್ಗೊಳ್ಳಲು ಜನರಿಗೆ ಅನುಕೂಲವಾಗುತ್ತದೆ. ಹೀಗಾಗಿ, ಬೆಳಗ್ಗೆ 6 ರಿಂದ ಸಂಜೆ 6 ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿದವು.
ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೆ ಸಲ್ಲಿಕೆಯಾಗಿರುವ ಅರ್ಜಿಗಳ ತ್ವರಿತ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಲೋಪ-ದೋಷ ಹಿನ್ನೆಲೆಯಲ್ಲಿ ತಿರಸ್ಕೃತವಾದರೆ ಯಾವ ಕಾರಣಕ್ಕೆ ತಿರಸ್ಕರಿಸಲಾಗಿದೆ ಎಂಬುದರ ಮಾಹಿತಿ ಅರ್ಜಿದಾರನಿಗೆ ನೀಡಬೇಕು. ಸಂಪೂರ್ಣ ವಿವರ ಆಯೋಗದ ವೆಬ್ ಸೈಟ್ ನಲ್ಲಿ ದೊರೆಯುವಂತಾಗಬೇಕು.
ಹಣ, ಮದ್ಯ, ಉಡುಗೊರೆ ಹಂಚಿಕೆ, ಸಾಮೂಹಿಕ ಭೋಜನದಂತಹ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು. ಈಗಾಗಲೇ ಕೆಲವು ಕ್ಷೇತ್ರಗಳಲ್ಲಿ ಭಯದ ವಾತಾವರಣ ಮೂಡಿದ್ದು ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜಕೀಯ ಪಕ್ಷಗಳು ಮನವಿ ಮಾಡಿದವು.
ಮಂಗಳವಾರ ಡಿಸಿ, ಎಸ್ಪಿ ಸಭೆ
ಸಿಇಸಿ ಸಂಪತ್ ಅವರು ಆಯುಕ್ತರಾದ ಎಚ್ಎಸ್ ಬ್ರಹ್ಮ, ಡಾ. ಸೈಯದ್ ಸಸೀಂ ಅಹಮದ್ ಜೈದಿ ತಂಡವು ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕ, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಗೃಹ, ಕಂದಾಯ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿ ಚುನಾವಣಾ ಪೂರ್ವ ಸಿದ್ಧತೆ ಬಗ್ಗೆ ಮಾಹಿತಿ ಪಡೆದು ಸೂಕ್ತ ಮಾರ್ಗದರ್ಶನ ನೀಡಲಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications