ತೆನೆ ಇಳಿಸಿ, ಕಮಲ ಪಕ್ಷ ಸೇರಿದ ದತ್ತಾತ್ರೇಯ

ಮಂಗಳವಾರ ಬೆಳಗ್ಗೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ, ದತ್ತಾತ್ತೇಯ ಪಾಟೀಲ್ ಗುಲ್ಬರ್ಗ ಮಹಾನಗರ ಪಾಲಿಕೆಯ 7 ಸದಸ್ಯರೊಂದಿಗೆ ಸಿಎಂ ಜಗದೀಶ್ ಶೆಟ್ಟರ್ ಮತ್ತು ಉಪ ಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.
ಗುಲ್ಬರ್ಗಾ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ದತ್ತಾತ್ರೇಯ ಪಾಟೀಲ್ ಅವರನ್ನು ತನ್ನ ಅಭ್ಯರ್ಥಿ ಎಂದು ಘೋಷಿಸುವ ಸಾಧ್ಯತೆ ಇದೆ. ಗುಲ್ಬರ್ಗಾ ದಕ್ಷಿಣ ಕ್ಷೇತ್ರದ ಹಾಲಿ ಶಾಸಕಿ ಅರುಣಾ ರೇವೂರ ಪಾಟೀಲ್ ಅವರ ಪುತ್ರರಾದ ದತ್ತಾತ್ರೇಯ ಪಾಟೀಲ್ ಜೆಡಿಎಸ್ ಅಭ್ಯರ್ಥಿ ಎಂದು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದರು.
ಆದರೆ, ಪಕ್ಷದ ಘೋಷಿತ ಅಭ್ಯರ್ಥಿ ಬಿಜೆಪಿ ಸೇರಿರುವುದು ಪಕ್ಷದ ನಾಯಕರಿಗೆ ತೀವ್ರ ಮುಜುಗರ ಉಂಟುಮಾಡಿದೆ. ಕ್ಷೇತ್ರದ ಹಾಲಿ ಜೆಡಿಎಸ್ ಶಾಸಕಿ ಅರುಣಾ ರೇವೂರು ಪಾಟೀಲ್ ಸಹ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳಿತ್ತು. ಆದರೆ, ಅವರು ಗುಲ್ಬರ್ಗಾದಲ್ಲಿ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಅವರ ಪುತ್ರ ದತ್ತಾತ್ರೇಯ ತಿಳಿಸಿದ್ದಾರೆ.
ಪಕ್ಷ ಸೇರ್ಪಡೆಗೆ ವಿರೋಧ : ಶ್ರೀಮತಿ ಅರುಣಾ ಪಾಟೀಲ್ ಮತ್ತು ಅವರ ಪುತ್ರ ದತ್ತಾತ್ರೇಯ ಸೇರ್ಪಡೆಗೆ ಸ್ಥಳೀಯ ಬಿಜೆಪಿ ಮುಖಂಡ ಶಶಿ ನಮೋಶಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರ ಚಿತ್ರಗಳಿಗೆ ಚಪ್ಪಲಿ ಹಾರ ಹಾಕಿದ್ದ ಇವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡಿರುವುದು ಸರಿಯಲ್ಲ ಎಂದು ರಾಜ್ಯ ನಾಯಕರ ವಿರುದ್ಧ ಗುಡುಗಿದ್ದಾರೆ.
ಶಶಿ ನಮೋಶಿ ಗುಲ್ಬರ್ಗಾ ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ದತ್ತಾತ್ರೇಯ ಅವರ ಸೇರ್ಪಡೆಯಿಂದ ಅವರಿಗೆ ತೀವ್ರ ಹಿನ್ನೆಡೆ ಉಂಟಾಗಿದೆ. ಗುಲ್ಬರ್ಗಾ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ 3,672 ಮತಗಳ ಅಂತರದಿಂದ ಬಿಜೆಪಿಯ ಶಶಿಲ್ ನಮೋಶಿ ಅವರನ್ನು ಸೋಲಿಸಿ ಅರುಣಾ ಪಾಟೀಲ್ ರೇವೂರ್ ಅವರು ಜೆಡಿಎಸ್ ಶಾಸಕರಾಗಿ ಆಯ್ಕೆಯಾಗಿದ್ದರು.
ದತ್ತಾತ್ರೇಯ ಮತ್ತು ಅರುಣಾ ಪಾಟೀಲ್ ಸೇರ್ಪಡೆಯಿಂದ ಬಿಜೆಪಿಯಲ್ಲಿ ಅಸಮಾಧಾನದ ಬುಗಿಲೇಳುವ ಸಾಧ್ಯತೆ ಇದೆ. ಇತ್ತ ದತ್ತಾತ್ರೇಯ ಅವರಿಗೆ ಟಿಕೆಟ್ ನೀಡುವುದೋ? ಅಥವ ಉಪ ಚುನಾವಣೆಯಲ್ಲಿ ಸೋತ ಶಶಿ ನಮೋಶಿಗೆ ಟಿಕೆಟ್ ನೀಡುವುದೋ ಎಂಬ ಗೊಂದಲಕ್ಕೆ ಬಿಜೆಪಿ ಸಿಲುಕಿದೆ.
ಚುಣಾವಣೆ ಅಧಿಸೂಚನೆ ಪ್ರಕಟಗೊಳ್ಳಲು ಒಂದು ದಿನ ಬಾಕಿ ಉಳಿದಿರುವಂತೆಯೇ ಹಲವಾರು ರಾಜಕೀಯ ಬದಲಾವಣೆಗಳು ನಡೆಯುತ್ತಿವೆ. ಬಿಜೆಪಿ ತೊರೆಯುವವರ ಸಂಖ್ಯೆಯೇ ಜಾಸ್ತಿಯಾಗಿರುವ ಹೊತ್ತಿನಲ್ಲಿ ಬಿಜೆಪಿಗೆ ಸೇರ್ಪಡೆ ಆಗುತ್ತಿರುವ ಆಕಾಂಕ್ಷಿಗಳನ್ನು ನೋಡಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications