ಕಾಮಿ ಸ್ವಾಮಿ ಶಿವಸಾಯಿಬಾಬಾ ಬಂಧನ

ಚಿಕ್ಕಬಳ್ಳಾಪುರ ಮೂಲದ ಶಿವ ಸಾಯಿಬಾಬಾರನ್ನು ಆಂಧ್ರದ ಪೆನುಗೊಂಡ ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ. ಆಂಧ್ರದಲ್ಲಿ ಅನಂತಪುರ ಜಿಲ್ಲೆಯ ಪೆನಗೊಂಡದಲ್ಲಿ ಮಂಗಳವಾರ ಎಲ್ಲೆಡೆ ನಾಕಾ ಬಂದಿ ಹಾಕಲಾಗಿತ್ತು. ಎಂದಿನಂತೆ ಬಂದ್ ಆಚರಣೆ ಎಲ್ಲೆಡೆ ಜಾರಿಯಲ್ಲಿತ್ತು. ಈ ಸಮಯದಲ್ಲಿ ಚೆಕ್ ಪೋಸ್ಟ್ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಶಿವಸಾಯಿಬಾಬಾನನ್ನು ವಶಕ್ಕೆ ತೆಗೆದುಕೊಂಡ ಆಂಧ್ರ ಪೊಲೀಸರಿಗೆ ಈತನ ಹಿನ್ನೆಲೆ ಬಗ್ಗೆ ಸಂಶಯ ಬಂದಿದೆ.
ತಕ್ಷಣವೇ ಚಿಕ್ಕಬಳ್ಳಾಪುರ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸೆರೆ ಸಿಕ್ಕವನ್ನು ಕಾಮಿ ಸ್ವಾಮಿ ಎಂಬುದು ದೃಢಪಟ್ಟಿದೆ. ನಂತರ ಆತನನ್ನು ಸಂಜೆ ಚಿಕ್ಕಬಳ್ಳಾಪುರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ವಿದ್ಯುತ್ ಬಿಲ್ ದರ, ನೀರಿನ ಬಿಲ್ ದರ ಏರಿಕೆ ವಿರೋಧಿಸಿ ಮಂಗಳವಾರ ಆಂಧ್ರಪ್ರದೇಶದಲ್ಲಿ ಬಂದ್ ನಡೆಸಲಾಗಿದೆ. ಹೀಗಾಗಿ ಹಲವೆಡೆ ಕಟ್ಟೆಚ್ಚರ ವಹಿಸಿರುವ ಪೊಲೀಸರು ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ನಡೆಸುವ ವೇಳೆ ಸಾಯಿಬಾಬಾ ಸಿಕ್ಕಿ ಬಿದ್ದಿದ್ದಾನೆ.
ಚಿಕ್ಕಬಳ್ಳಾಪುರದ ಆಶ್ರಮದಲ್ಲಿ ಅಕ್ರಮ ಚಟುವಟಿಕೆ, ಭಕ್ತಾದಿಗಳಿಗೆ ಮಂಕುಬೂದಿ ಎರಚಿದ ಆರೋಪ ಕೇಳಿ ಬಂದ ನಂತರ ಸ್ವಾಮೀಜಿ ಎರಡು ವಾರಗಳಿಂದ ನಾಪತ್ತೆಯಾಗಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications