ಬಂದಿದೆ ಜಾತಿಗಳ ಆಧಾರದಲ್ಲಿ ಪ್ರತ್ಯೇಕ ಬಡಾವಣೆ

ಆದರೂ ಈ ರಾಜಧಾನಿ ಬೆಂಗಳೂರಿನಿಂದ ಕೇವಲ 100 ಕಿಮೀ ದೂರದಲ್ಲಿ ಜಾತ್ಯಾತೀತ ವ್ಯವಸ್ಥೆಯನ್ನೇ ಅವಹೇಳನ ಮಾಡುವಂತೆ ಎರಡು ಬಡಾವಣೆಗಳು ತಲೆಯೆತ್ತುತ್ತಿವೆ. ಅವು ಬ್ರಾಹ್ಮಣ ಮತ್ತು ಲಿಂಗಾಯತರಿಗಾಗಿ ನಿರ್ಮಾಣವಾಗುತ್ತಿರುವ ಪ್ರತ್ಯೇಕ ಬಡಾವಣೆಗಳು.
ಖಾಸಗಿ ಸಂಸ್ಥೆಯೊಂದು ಇಂತಹ ದುಸ್ಸಾಹಸಕ್ಕೆ ಕೈಹಾಕಿದ್ದು, ಅದಕ್ಕೆ ಕೊಕ್ಕೆ ಹಾಕಿ Bangalore Metropolitan Region Development Authority ಜಾತಿ ಆಧಾರದಲ್ಲಿ ಬಡಾವಣೆ ನಿರ್ಮಿಸುವುದು ಸರ್ವತಾಸಾಧುವಲ್ಲ. ತಕ್ಷಣ ಈ ನಿರ್ಮಾಣ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಬೇಕು ಎಂದು ಸರಕಾರಕ್ಕೆ ಸಲಹೆ ನೀಡಿದೆ.
ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವ್ಯಾಪ್ತಿ ಪ್ರದೇಶಕ್ಕೆ ಅಂಟಿಕೊಂಡಿರುವಂತೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಿಂದ 10 ಕಿಮೀ ದೂರದಲ್ಲಿ ಈ ಯೋಜನೆಗಳು ಕಾರ್ಯಗತವಾಗುತ್ತಿವೆ. ಈ ಟೌನ್ ಷಿಪ್ ಗಳ ಪ್ರಮೋಟರ್ಸ್ ಜಾತಿ ಆಧಾರಿತ ಬಡಾವಣೆಯನ್ನು ನಿರ್ಮಿಸುತ್ತಿರುವುದಾಗಿಯೂ ಅದಕ್ಕೆ ಆಯಾ ಜಾತಿಗಳವರು ಮಾತ್ರವೇ ಅರ್ಜಿ ಹಾಕಬೇಕು ಎಂದು ಮಾಧ್ಯಮಗಳಲ್ಲಿ ಜಾಹೀರಾತು ಹೊರಡಿಸಿದ್ದಾರೆ.
ಬೆಂಗಳೂರಿನ Sanathan Dharma Parirakshana Trust ಶಂಕರ ಅಗ್ರಹಾರ ಹೆಸರಿನಲ್ಲಿ ಬಡಾವಣೆ ನಿರ್ಮಿಸುತ್ತಿದೆ. ಕುತೂಹಲಕಾರಿ ಸಂಗತಿಯೆಂದರೆ ನಿವೃತ್ತ ಐಎಎಸ್ ಅಧಿಕಾರಿಗಳೂ ಸೇರಿದಂತೆ ಸರಕಾರದ ಆಯಕಟ್ಟಿನ ಸ್ಥಳಗಳಲ್ಲಿ ಸೇವೆ ಸಲ್ಲಿಸಿದ ಉನ್ನತಾಧಿಕಾರಿಗಳು ಈ ಟ್ರಸ್ಟಿನ ಆಡಳಿತ ಮಂಡಳಿಯಲ್ಲಿದ್ದಾರೆ.
ಶರಣಾರ್ಥಿ ಸಂಗಮ: Shri Renuka Basaveshwara Divya Dhama ಈ ಬಡಾವಣೆಯನ್ನು ನಿರ್ಮಿಸಿಕೊಡುತ್ತಿದೆ. ಮಾಜಿ ಮುಖ್ಯ ಕಾರ್ಯದರ್ಶಿ ಬಿಆರ್ ಪ್ರಭಾಕರ ಅವರು ಈ ಜಾಹೀರಾತುಗಳನ್ನು ಕಂಡು ಹೌಹಾರಿದ್ದಾರೆ. ತಕ್ಷಣ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ, ಯೋಜನೆ ಸ್ಥಗಿತಗೊಳಿಸುವಂತೆ ಆದೇಶಿಸಿ ಎಂದು ದುಂಬಾಲು ಬಿದ್ದಿದ್ದಾರೆ. Department of Town and Country Planning ಈ ಯೋಜನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. (ಕೃಪೆ: Bangalore Mirror)
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications