ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದ ಶೆಟ್ಟರು

ಬಿಜೆಪಿ ಶುಕ್ರವಾರ ಪ್ರಕಟಿಸಿದ್ದ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೃಷ್ಣಯ್ಯ ಶೆಟ್ಟಿ ಅವರ ಹೆಸರು ಇರಲಿಲ್ಲ. ಇದರಿಂದ ನೊಂದು ಶೆಟ್ಟರು ತಾವು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ಸಮಾಜ ಸೇವೆಯೇ ನನ್ನ ಗುರಿ. ಶಾಸಕನಾಗಿರದಿದ್ದರೂ ಸಮಾಜ ಸೇವೆ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದರು.
ಶೆಟ್ಟರ ನಿರ್ಧಾರದಿಂದ ಕೆರಳಿದ ಅವರ ಬೆಂಬಲಿಗರು ಬಿಜೆಪಿ ಟಿಕೆಟ್ ಅವರಿಗೆ ನೀಡಬೇಕು. ಇಲ್ಲದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಅಖಾಡಕ್ಕೆ ಇಳಿಸಿ ಗೆಲ್ಲಿಸುವುದಾಗಿ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು.
ಕಣ್ಣೀರಿಟ್ಟ ಶೆಟ್ಟರು : ಸೋಮವಾರ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕೃಷ್ಣಯ್ಯ ಶೆಟ್ಟಿ, ತಮ್ಮ ರಾಜಕೀಯ ನಿವೃತ್ತಿ ನಿರ್ಧಾರವನ್ನು ಕಾರ್ಯಕರ್ತರ ಒತ್ತಡಕ್ಕೆ ಮಣಿದು ಹಿಂಪಡೆಯುತ್ತಿದ್ದೇನೆ. ಬಿಜೆಪಿ ಅಭ್ಯರ್ಥಿಯಾಗಿ ಮಾಲೂರು ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ತಿಳಿಸಿದರು.
ಬಿಜೆಪಿ ಪಕ್ಷಕ್ಕೆ ಸಾಕಷ್ಟು ಸಹಾಯ ಮಾಡಿದ್ದೇನೆ. ಸಮಾವೇಶಗಳಿಗೆ ಕಾರ್ಯಕರ್ತರನ್ನು ಕರೆಂದಿದ್ದೇನೆ. ಆದರೆ, ನನ್ನಂತ ನಿಷ್ಟಾವಂತರಿಗೆ ಪಕ್ಷ ಟಿಕೆಟ್ ನೀಡದೆ ಸತಾಯಿಸುತ್ತಿದೆ ಎಂದು ಕೃಷ್ಣಯ್ಯ ಶೆಟ್ಟಿ ಗಳಗಳನೆ ಅತ್ತರು. ಅಂತೂ ಎರಡು ದಿನಗಳ ಬೃಹನ್ನಾಟಕ ಕೊನೆಗೊಂಡಿದ್ದು, ಶೆಟ್ಟರ ರಾಜಕೀಯ ನಿವೃತ್ತಿ ನಿರ್ಧಾರ ಬದಲಾಯಿಸಿಕೊಂಡಿದ್ದಾರೆ.
ಟಿಕೆಟ್ ಸಿಗುತ್ತಾ : ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪ ಸಾಬೀತಾಗಿ ಜೈಲಿಗೆ ಹೋಗಿ ಬಂದವರಿಗೆ ಟಿಕೆಟ್ ನೀಡಬಾರದು ಎಂಬುದು ಬಿಜೆಪಿಯ ನಿಯಮ. ಆದರೆ, ಕಟ್ಟಾ ಸುಬ್ರಮಣ್ಯ ನಾಯ್ಡ ಮತ್ತು ಕೃಷ್ಣಯ್ಯ ಶೆಟ್ಟಿ ಗೆಲ್ಲುವ ಅಭ್ಯರ್ಥಿಗಳೆಂದು ಅವರಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆದಿತ್ತು.
ಆದರೆ, ಪಕ್ಷದ ದೆಹಲಿ ಮೂಲಗಳ ಮಾಹಿತಿ ಪ್ರಕಾರ ಟಿಕೆಟ್ ಗಾಗಿ ರಾಜ್ಯ ನಾಯಕರು ಕಳುಹಿಸಿರುವ ಪಟ್ಟಿಯಲ್ಲಿ ಕೃಷ್ಣಯ್ಯ ಶೆಟ್ಟಿ ಮತ್ತು ಕಟ್ಟಾ ಹೆಸರು ಕಾಣೆಯಾಗಿದೆ. ಆದ್ದರಿಂದ ಉಭಯ ಮಾಜಿ ಸಚಿವರಿಗೂ ಟಿಕೆಟ್ ದೊರೆಯುವುದು ಖಚಿತವಾಗಿಲ್ಲ.
ರಾಜನಾಥ್ ಸಿಂಗ್ ಸ್ಪಷ್ಟನೆ : ರಾಜ್ಯ ನಾಯಕರು ಕಳುಹಿಸಿದ ಅಭ್ಯರ್ಥಿಗಳ ಶಿಫಾರಸ್ಸಿನ ಪಟ್ಟಿಯಲ್ಲಿ ಕಟ್ಟಾ ಮತ್ತು ಕೃಷ್ಣಯ್ಯ ಶೆಟ್ಟಿ ಹೆಸರು ಇರಲಿಲ್ಲ ಎಂದು ಸೋಮವಾರ ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಹೇಳಿದ್ದಾರೆ. ಇದರಿಂದ ರಾಜ್ಯ ನಾಯಕರು ಈ ಇಬ್ಬರು ಶಾಸಕರಿಗೆ ಟಿಕೆಟ್ ನೀಡಲು ನಿರ್ಧರಿಸಿಲ್ಲ ಎಂಬುದು ಸ್ಪಷ್ಟವಾಗಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications