ಶೆಟ್ಟರ್ ವಿರುದ್ಧ ಸ್ಪರ್ಧಿಸಲು ಬೆದರುವುದಿಲ್ಲ : ಬಿದರಿ

ಮಾಧ್ಯಮ ವರದಿಗಳನ್ನು ಅಲ್ಲಗಳೆಯದಿದ್ದರೂ ಶೆಟ್ಟರ್ ವಿರುದ್ಧ ತಮ್ಮನ್ನು ಕಣಕ್ಕಿಳಿಸುವ ಬಗ್ಗೆ ಯಾರೂ ತಮ್ಮೊಂದಿಗೆ ಚರ್ಚಿಸಿಲ್ಲ. ಆದರೆ ಪಕ್ಷ ತೀರ್ಮಾನಿಸಿದರೆ, ಶೆಟ್ಟರ್ ವಿರುದ್ಧ ಸ್ಪರ್ಧಿಸಲು ಸಿದ್ಧ ಎಂದು ಶಂಕರ್ ಬಿದರಿ ಹೇಳಿದ್ದಾರೆ.
ತೇರದಾಳ ಕೈ ತಪ್ಪಿದ್ದು ಬೇಸರವಿದೆ ಎಂದ ಬಿದರಿ ಅವರು. ತಮ್ಮ ತವರೂರು ತೇರದಾಳದಿಂದ ನಟಿ ಉಮಾಶ್ರೀ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಬಿದರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಶಂಕರ್ ಬಿದರಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಟಿ ಉಮಾಶ್ರೀ ಅವರು, ಪಕ್ಷದಲ್ಲಿ ತಮಗೆ ಯಾರೂ ವಿರೋಧಿಗಳಿಲ್ಲ. ಶಂಕರ್ ಬಿದರಿ ಅವರು ಸಹ ನಮ್ಮ ಪಕ್ಷದವರೇ, ಅವರು ಸಹ ತಮ್ಮನ್ನು ಬೆಂಬಲಿಸುವ ವಿಶ್ವಾಸವಿದೆ ಎಂದಿದ್ದಾರೆ.
ಶೆಟ್ಟರ್ ಹಾಗೂ ಬಿದರಿ ಇಬ್ಬರೂ ಬಣಜಿಗ ಸಮುದಾಯಕ್ಕೆ ಸೇರಿದವರಾಗಿದ್ದು, ಜನಪ್ರಿಯತೆಯಲ್ಲಿ ಸಮವಾಗಿ ತೂಗುತ್ತಾರೆ. ಬಿದರಿ ಅವರಿಗೆ ಟಿಕೆಟ್ ಸಿಕ್ಕರೆ ಭರ್ಜರಿ ಹೋರಾಟಕ್ಕೆ ಕಣ ಸಿದ್ಧವಾಗಲಿದೆ.
ವೀರಪ್ಪನ್ ಕಾರ್ಯಚಾರಣೆ ವೇಳೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದ ಆರೋಪ ಹೊತ್ತಿದ್ದ ಬಿದರಿ ಅವರು ನಿರ್ದೋಷಿ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಆದೇಶ ಹೊರ ಬಿದ್ದ ದಿನ ಬಿದರಿಯಂಥ ಸೂಪರ್ ಕಾಪ್ ಕೂಡಾ ಕೆಮೆರಾ ಮುಂದೆ ಅಳು ತಡೆದುಕೊಳ್ಳಲಾಗಿರಲಿಲ್ಲ. ಜನರ ಅನುಕಂಪ, ನಂಬಿಕೆ ಇವರ ಮೇಲೆ ಸಹಜವಾಗಿ ಇದೆ.
ಆದರೆ, ಬಿದರಿ ಅವರು ಇನ್ನೂ ಸ್ಪರ್ಧೆ ಬಗ್ಗೆ ಸ್ಪಷ್ಟವಾಗಿ ಹೇಳಿಲ್ಲ. ತೇರದಾಳ ಟಿಕೆಟ್ ಕೈ ತಪ್ಪಿರುವುದರಿಂದ ಈ ಬಾರಿ ಅಸೆಂಬ್ಲಿ ಸಹವಾಸವೇ ಬೇಡ ಎಂದು ಹೇಳಿ ಮುಂದಿನ ಲೋಕಸಭೆಗೆ ಬಾಗಲಕೋಟೆ ಟಿಕೆಟ್ ಕೇಳಿದರೂ ಅಚ್ಚರಿ ಏನಿಲ್ಲ. ಆದರೆ, ಈ ಬಾರಿ ಸ್ಪರ್ಧಿಸಿ ಚುನಾವಣೆ ಅನುಭವ ಪಡೆದುಕೊಳ್ಳಿ. ಸೋತರೂ ಚಿಂತೆಯಿಲ್ಲ. ಲೋಕಸಭೆ ಟಿಕೆಟ್ ನೀಡುತ್ತೇವೆ ಎಂದು ಕೆಪಿಸಿಸಿ ಭರವಸೆ ನೀಡಿದೆಯಂತೆ.
ಬಿದರಿಗೆ ಟಿಕೆಟ್ ಸಿಕ್ಕಿದ್ದೇ ಆದಲ್ಲಿ ಶೆಟ್ಟರ್ ಅವರ ವಿರುದ್ಧ ಪ್ರಬಲ ಸ್ಪರ್ಧಿ ಇಳಿಸಿದಂತಾಗುತ್ತದೆ. ಹಾಗೂ ವೀರಶೈವ ಸಮುದಾಯದ ನಾಯಕ ಅದರಲ್ಲೂ ಉತ್ತರ ಕರ್ನಾಟಕ ಮೂಲದವರಿಗೆ ನ್ಯಾಯ ದೊರಕಿಸಿಕೊಟ್ಟೆವು ಎಂದು ಕೈ ಪಡೆ ಎಲ್ಲೆಡೆ ಘೋಷಿಸಿಕೊಳ್ಳಬಹುದು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications