ಬಿಜೆಪಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ ಕೃಷ್ಣಯ್ಯ ಶೆಟ್ಟಿ

ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದರು. ಏ.15ರಂದು ನಾಮಪತ್ರ ಸಲ್ಲಿಸುವುದಾಗಿಯೂ ತಿಳಿಸಿದರು.
ಬಿಜೆಪಿ ಮೊದಲನೇ ಪಟ್ಟಿಯಲ್ಲಿ ಟಿಕೆಟ್ ದೊರೆಯಲಿಲ್ಲ ಎಂದು ನಿವೃತ್ತಿ ಮಾತನಾಡಿದ್ದ ಶೆಟ್ಟರು ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ನಿರ್ಧಾರ ಹಿಂಪಡೆದಿದ್ದರು. ಬಿಜೆಪಿ ಎರಡನೇ ಪಟ್ಟಿಯಲ್ಲಿ ಟಿಕೆಟ್ ದೊರೆಯಲಿಲ್ಲ ಎಂದು ಬಿಜೆಪಿ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ. (ಶೆಟ್ಟಿಗೆ ಲಾಡು ಕೊಟ್ಟ ಬಿಜೆಪಿ )
ಕಾಂಗ್ರೆಸ್ ನಲ್ಲೂ ಬಂಡಾಯ : ಕಾಂಗ್ರೆಸ್ ಟಿಕೆಟ್ ಹಂಚಿಕೆ ಗೊಂದಲಗಳು ಬಗೆಹರಿದಿಲ್ಲ. ಟಿಕೆಟ್ ಸಿಗದ ಅಭ್ಯರ್ಥಿಗಳು ಬಂಡಾಯದ ಕಹಳೆ ಊದಿದ್ದಾರೆ. ಬಳ್ಳಾರಿ, ಶ್ರವಣಬೆಳಗೊಳ ಕ್ಷೇತ್ರಗಳ ಟಿಕೆಟ್ ಗಳಿಗೆ ಭಾರೀ ಬೇಡಿಕೆ ಉಂಟಾಗಿದೆ.
ಶ್ರವಣಬೆಳಗೊಳದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಗೋಪಾಲಸ್ವಾಮಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವ ಸಿ.ಎಸ್.ಪುಟ್ಟೇಗೌಡ ಅವರಿಗೆ ಟಿಕೆಟ್ ನೀಡಿದ್ದರಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಹೇಳಿದ್ದಾರೆ.(ಕಾಂಗ್ರೆಸ್ ಪಟ್ಟಿ)
ಜೆಡಿಎಸ್ ಅಪ್ಪಿದ ಅಪ್ಪೊಗೋಳ : ಚಲನಚಿತ್ರ ನಿರ್ಮಾಪಕ ಹಾಗೂ ಕಿತ್ತೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆನಂದ್ ಅಪ್ಪುಗೋಳ ಟಿಕೆಟ್ ಕೈತಪ್ಪಿದ ಕಾರಣ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.
ವರ್ತೂರು ನಂ.1 : ಜವಳಿ ಸಚಿವ ವರ್ತೂರು ಪ್ರಕಾಶ್ ಚುನಾವಣಾ ಅಧಿಸೂಚನೆ ಪ್ರಕಟಗೊಂಡ ದಿನವೇ ನಾಮಪತ್ರ ಸಲ್ಲಿಸಿದ ಮೊದಲ ರಾಜಕಾರಣಿಯಾಗಿದ್ದಾರೆ. ಇಂದು ವರ್ತೂರು ಪ್ರಕಾಶ್ ನಾಮಪತ್ರ ಸಲ್ಲಿಸಿದರು. (ಇಂದು ಅಮಮಾಸ್ಯೆ ಅಲ್ವಾ)
ಈಶ್ವರಪ್ಪ ಮೇಲೆ ದೂರು : ಕಳೆದಬಾರಿ ಚುನಾವಣೆ ಪ್ರಚಾರದಲ್ಲಿ ಕೈ ಕಡಿಯಿರಿ, ನಾಲಿಗೆ ಸೀಳಿ ಎಂದು ಹೇಳಿಕೆ ನೀಡಿ ವಿವಾದ ಮಾಡಿಕೊಂಡಿದ್ದ ಈಶ್ವರಪ್ಪ, ಈ ಬಾರಿ ಮುಸ್ಲಿಂ ಸಮುದಾಯದ ವಿರುದ್ಧ ಲವ್ ಜಿಹಾದ್ ಹೇಳಿಕೆ ನೀಡಿ ಕೇಸು ಹಾಕಿಸಿಕೊಂಡಿದ್ದಾರೆ. (ಈಶ್ವರಪ್ಪ ಹೇಳಿಕೆ ಏನು )
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications