ಗುಜರಾತ್ ಫಲಿತಾಂಶ ರಾಜ್ಯದಲ್ಲಿ ಪುನಾರಾವರ್ತನೆ

ಬಿಜೆಪಿಯ ಸುಳ್ಯ ಮಂಡಲ ಸಮಿತಿ ವತಿಯಿಂದ ಮಂಗಳವಾರ ಸುಳ್ಯದ ಕೇರ್ಪಳ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ವಿಧಾನಸಭಾ ಕ್ಷೇತ್ರದ ಚುನಾ ವಣೆಯ ಪೂರ್ವ ತಯಾರಿಗಾಗಿ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.
ಮೋದಿ ಪ್ರಧಾನಿ : ಈ ಚುನಾವಣೆ ಭವಿಷ್ಯದ ದೃಷ್ಟಿಯಿಂದ ದೇಶ ರಕ್ಷಣೆಯ ಚುನಾವಣೆಯೂ ಆಗಿದೆ. ಇಲ್ಲಿ ಬಿಜೆಪಿ ಗೆಲ್ಲುತ್ತದೆ, ಮುಂದೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗುತ್ತಾರೆ ಎಂದು ಹೇಳಿದ ಡಿವಿಎಸ್, ಮೋದಿ ನಡೆದ ದಾರಿಯಲ್ಲೇ ಅಂಗಾರರೂ ನಡೆದು ಮಾದರಿ ಹಾಕಿಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.
ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುಲೋಚನಾ ಜಿ.ಭಟ್, ಸಾಧನೆಗಳ ಮೂಲಕ ಚುನಾವಣೆಯನ್ನು ಗೆಲ್ಲುವ ತಾಕತ್ತಿಲ್ಲದ ಕಾಂಗ್ರೆಸ್, ಅಪಪ್ರಚಾರದ ಮೂಲಕ ಚುನಾವಣೆ ಗೆಲ್ಲಲು ಹೊರಟಿದೆ.
ಆದರೆ ಕಾಂಗ್ರೆಸ್ ಮಾಡುತ್ತಿರುವ ಹಗರಣಗಳನ್ನು, ಬಿಜೆಪಿಯ ಅಭಿವೃದ್ಧಿ ಕಾರ್ಯ ಗಳನ್ನು ಜನ ನೋಡುತ್ತಿದ್ದಾರೆ. ಟಿಕೆಟ್ ಗಾಗಿ ಕಿತ್ತಾಡುತ್ತಿರುವ ಕಾಂಗ್ರೆಸಿಗರನ್ನು ನೋಡಿದರೆ ಅವರ ಅಧಿಕಾರ ದಾಹ ಅರ್ಥವಾಗುತ್ತದೆ. ನಮ್ಮ ಪಕ್ಷದಲ್ಲಿ ಗೊಂದಲ ಇದ್ದಿರಬಹುದು, ಆದರೆ ಅಭಿವೃದ್ಧಿಯಲ್ಲಿ ಕೊರತೆ ಇರಲಿಲ್ಲ. ಹೀಗಾಗಿ ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿಯೇ ಗೆಲುವು ಸಾಧಿಸುತ್ತದೆ ಎಂದರು.
ಕುದುರೆ ಕಟ್ಟಿ ನೋಡಲಿ: ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಬಿಜೆಪಿ ಬಿಟ್ಟ ಅಶ್ವ ಮೇಧದ ಕುದುರೆಯನ್ನು ಕಟ್ಟಿ ಹಾಕುವುದಾಗಿ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಆದರೆ ಅವರು ಕಟ್ಟಿದ ಕುದುರೆಯನ್ನು ಅವರ ಹೆಡೆಮುರಿ ಕಟ್ಟಿ ಬಿಡಿಸಿಕೊಂಡು ಬರಲು ಬಿಜೆಪಿ ಕಾರ್ಯಕರ್ತರಿಗೆ ಶಕ್ತಿಯಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಶಾಸಕ ಹಾಗೂ ಅಭ್ಯರ್ಥಿ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಎ.ವಿ.ತೀರ್ಥರಾಮ, ಪ್ರಚಾರ ಸಮಿತಿ ಅಧ್ಯಕ್ಷ ಎನ್.ಎ. ರಾಮಚಂದ್ರ ಮೊದಲಾದವರು ಮಾತನಾಡಿದರು. ನ.ಸೀತಾರಾಮ ರಾಷ್ಟ್ರೀಯ ಆಂದೋಲನದ ಮಾಹಿತಿ ನೀಡಿದರು
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications