ಪ್ರಹ್ಲಾದ್ ಜೋಶಿ ಸಾಫ್ಟ್ವೇರ್ ಹ್ಯಾಕ್ ಮಾಡಿದ್ದಾರಂತೆ!
ಸಾಫ್ಟ್ವೇರ್ ಇಂಜಿನಿಯರ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮಂಗಳವಾರ ಲೋಕಾಯುಕ್ತರಿಗೆ ದೂರು ನೀಡಿದ ಶಶಿಧರ್ ಎಂಬ ಸಾಫ್ಟ್ವೇರ್ ಇಂಜಿನಿಯರ್ ತನಗೆ ಪ್ರಹ್ಲಾದ್ ಜೋಶಿ ಅವರ ಬೆಂಬಲಿಗರಿಂದ ಕೊಲೆ ಬೆದರಿಕಗೆ ಇದೆ. ಆದ್ದರಿಂದ ರಕ್ಷಣೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಮನವಿ ಪುರಸ್ಕರಿಸಿದ ನ್ಯಾಯಮೂರ್ತಿ ಸುಧೀಂದ್ರರಾವ್ ದೂರುದಾರನಿಗೆ ರಕ್ಷಣೆ ನೀಡುವಂತೆ ಆದೇಶ ನೀಡಿದ್ದಾರೆ.
ಏನಿದು ಪ್ರಕರಣ : ಶಶಿಧರ್ ಎಂಬ ಸಾಫ್ಟ್ವೇರ್ ಇಂಜಿನಿಯರ್ ದೇಶದ ಯಾವ ಮೂಲೆಯಲ್ಲಿನ ವ್ಯಕ್ತಿಯೊಂದಿಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಬಹುದಾದ ಆಧುನಿಕ ತಂತ್ರಜ್ಞಾನವನ್ನು ರೂಪಿಸಿದ್ದಾರೆ.
ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಮಾಲೀಕತ್ವದ ಏಬಲ್ ಡಿಸೈನ್ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ಕಂಪನಿ ಈ ತಂತ್ರಜ್ಞಾನವನ್ನು ಹ್ಯಾಕ್ ಮಾಡಿದೆ. ಅಲ್ಲದೆ ಟಿಸಿಎಸ್, ಇನ್ಫೋಸಿಸ್ ಮುಂತಾದ ಪ್ರತಿಷ್ಠತ ಕಂಪನಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂದು ಶಶಧರ್ ಆರೋಪಿಸಿದ್ದಾರೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ಸಹ ಈ ಕಾರ್ಯಕ್ಕೆ ಸಹಕಾರ ನೀಡುತ್ತಿದ್ದಾರೆ ಎಂದು ಅವರ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರು ದಾಖಲಿಸಿದ ನಂತರ ಜೋಶಿ ಬೆಂಬಲಿಗರು ತನಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಆದ್ದರಿಂದ ರಕ್ಷಣೆ ನೀಡುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದ್ದಾರೆ.
ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಧೀಂದ್ರರಾವ್, ಸಂಪಿಗೆಹಳ್ಳಿ ಉಪ ವಿಭಾಗದ ಎಸಿಪಿ ಅವರಿಗೆ ದೂರು ದಾರರಿಗೆ ಭದ್ರತೆ ನೀಡುವಂತೆ ಆದೇಶಿಸಿದ್ದಾರೆ. ಪ್ರಕರಣದ ವಿಚಾರಣೆಯನ್ನು ಲೋಕಾಯುಕ್ತ ಪೊಲೀಸರು ಮುಂದುವರೆಸಿದ್ದಾರೆ.
ಚುಣಾವಣಾ ಕಾರ್ಯದಲ್ಲಿ ತೊಡಗಿಕೊಂಡಿರುವ ನಾಯಕರಿಗೆ ಲೋಕಾಯುಕ್ತದಲ್ಲಿ ದಾಖಲಾದ ದೂರಿನ ಬಗ್ಗೆ ತಿಳಿದಿದೆಯೋ ಇಲ್ಲವೋ, ಆದರೆ, ಒಬ್ಬ ಸಾಫ್ಟ್ವೇರ್ ಇಂಜಿನಿಯರ್ ರೂಪಿಸಿದ ತಂತ್ರಜ್ಞಾನ ಹ್ಯಾಕ್ ಮಾಡುವ ಕಾರ್ಯಕ್ಕೆ ಈ ನಾಯಕರ ಸಂಸ್ಥೆಗಳು ಯಾಕೆ ಇಳಿದವು ಎಂಬುದು ತನಿಖೆಯಿಂದ ತಿಳಿಯಲಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ