ಅಮಾವಾಸ್ಯೆ ದಿನ ನಾಮಪತ್ರ ಸಲ್ಲಿಸಿದ ವರ್ತೂರ್ ಪ್ರಕಾಶ್

ಯಾವುದೇ ಪಕ್ಷದ ಬೆಂಬಲ ನನಗೆ ಬೇಕಿಲ್ಲ. ಟಿಕೆಟ್ ಗಾಗಿ ನಾನು ಯಾರ ಬಳಿಯೂ ಕೈ ಚಾಚಿಲ್ಲ, ಚಾಚುವುದೂ ಇಲ್ಲ. ಜನತೆಯ ಬೆಂಬಲ ನನಗಿದೆ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದೇನೆ ಎಂದು ನಾಮಪತ್ರ ಸಲ್ಲಿಸಿ ಅಧಿಕೃತವಾಗಿ ಚುನಾವಣಾ ಅಖಾಡಕ್ಕಿಳಿದಿದ್ದಾರೆ.
ರಾಜಕೀಯ ಪಕ್ಷಗಳು ಇನ್ನು ಪಟ್ಟಿ ಪ್ರಕಟಿಸುವ ಗೊಂದಲದಲ್ಲಿ ಮುಳುಗಿವೆ. ಆದರೆ ಪಕ್ಷೇತರ ಅಭ್ಯರ್ಥಿಯಾಗಿ ವರ್ತೂರ್ ಪ್ರಕಾಶ್ ಅವರು ಅಧಿಸೂಚನೆ ಹೊರಬಿದ್ದ ಮೊದಲ ದಿನವೇ ತಮ್ಮ ನಾಮಪತ್ರ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ. ವರ್ತೂರ್ ಪ್ರಕಾಶ್ ಅವರು ತಮ್ಮ ಬೆಂಬಲಿಗರೊಂದಿಗೆ ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ, ನಾಮಪತ್ರ ಸಲ್ಲಿಸಿದರು.
ನಾಳೆಯಿಂದ ರಣೋತ್ಸಾಹ: ಇಂದು ಅಮಾವಾಸ್ಯೆಯಾಗಿರುವುದರಿಂದ ನಾಮಪತ್ರ ಸಲ್ಲಿಕೆಗೆ ಅಂತಹ ಉತ್ಸಾಹ ಕಂಡುಬರಲಿಲ್ಲ. ನಾಳೆ ಯುಗಾದಿ ಹಬ್ಬದ ಸಲುವಾಗಿ ರಜೆ ಇದೆ. ಹೀಗಾಗಿ ನಾಮಪತ್ರ ಸಲ್ಲಿಕೆಯ ಭರಾಟೆಗಳು ಏ.12ರ ನಂತರವೇ ಹೆಚ್ಚಾಗುವ ನಿರೀಕ್ಷೆ ಇದೆ. ಹೆಚ್ಚಿನ ವಿವರಗಳಿಗೆ ಈ ಸುದ್ದಿ ಓದಿ
ವರ್ತೂರು ಪ್ರಕಾಶ್ ಅಲ್ಲದೆ ಮೈಸೂರಿನ ಚಾಮರಾಜ ಕ್ಷೇತ್ರದಿಂದ ಎಸ್ಯುಸಿಐನ ಪಕ್ಷೇತರ ಅಭ್ಯರ್ಥಿ ಉಮಾದೇವಿ ಯವರು ನಾಮಪತ್ರ ಸಲ್ಲಿಸಿದ್ದಾರೆ.
ನಾಳೆ ಯುಗಾದಿ ಸಂಭ್ರಮ, ಶುಕ್ರವಾರ ವರ್ಷದ ತಡಕು ಇರುವುದರಿಂದ ರಾಜಕಾರಣಿಗಳು ನಾಮಪತ್ರ ಸಲ್ಲಿಕೆ ಶುಭದಿನ ಹುಡುಕುತ್ತಿದ್ದಾರೆ. ಬಹಳಷ್ಟು ಮಂದಿ ಅಭ್ಯರ್ಥಿಗಳು ಜ್ಯೋತಿಷಿಗಳ ಮೊರೆ ಹೋಗಿದ್ದಾರೆ. ರಾಜಕೀಯ ಪಕ್ಷಗಳು ಕೂಡ ಹಂತ ಹಂತವಾಗಿ ಅಧಿಕೃತ ಅಭ್ಯರ್ಥಿಗಳನ್ನು ಪ್ರಕಟಿಸುತ್ತಲೇ ಇವೆ.
ಯಾವ ಪಕ್ಷಗಳು 224 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ. ಕಾಂಗ್ರೆಸ್ 177 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದರೆ, ಆಡಳಿತರೂಢ ಬಿಜೆಪಿ 175 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದೆ. ಜೆಡಿಎಸ್ 172, ಕೆಜೆಪಿ 184, ಬಿಎಸ್ಆರ್ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಖೈರುಗೊಳಿಸಿವೆ.
ಏ.10 ರಿಂದ ಆರಂಭವಾಗಿರುವ ನಾಮಪತ್ರ ಸಲ್ಲಿಕೆ ಏ.17ರವರೆಗೂ ನಡೆಯಲಿದೆ. ಏ.18 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ವಾಪಸ್ ಪಡೆಯಲು ಏ.20 ನಿಗದಿಯಾಗಿದೆ.
ಮೇ.5 ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಚುನಾವಣೆ ನಡೆಯಲಿದ್ದು ಮೇ.8 ರಂದು ಮತ ಎಣಿಕೆ, ಫಲಿತಾಂಶ ಹೊರಬೀಳಲಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications