ದ್ವೇಷದ ಕೆನ್ನಾಲಿಗೆ: 5 ಮಂದಿ ಸಜೀವ ದಹನ

mysore-gas-cylinder-explosion-5-dead
ಮೈಸೂರು, ಏ.12: ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐದು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಘಟನೆ ಬಗ್ಗೆ ಹಲವು ಸಂಶಯಗಳು ವ್ಯಕ್ತವಾಗಿದ್ದು, ದುಷ್ಕರ್ಮಿಗಳ ಅಟ್ಟಹಾಸ ಇದಾಗಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಇಂದು ಬೆಳಗಿನ ಜಾವ ಮೈಸೂರಿನ ಅಜೀಜ್ ಸೇಠ್ ನಗರದ ಬಿಡಿ ಮೊಹಲ್ಲಾದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇನ್ನೂ ಮೂವರಿಗೆ ತೀವ್ರ ಗಾಯಗಳಾಗಿದ್ದು, ಸಮೀಪದ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯ ಹೊರಗಿನಿಂದ ಚಿಲಕ ಹಾಕಿ ಬೆಳಗಿನ ಜಾವ 3.30ರಲ್ಲಿ ಮನೆಗೆ ಬೆಂಕಿ ಹಚ್ಚಲಾಗಿದೆ. ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಧಾವಿಸಿದ ನಂತರವೇ ಗ್ಯಾಸ್ ಸಿಲಿಂಡರ್ ಸ್ಫೋಟಿಸಿದೆ ಎಂದು ತಿಳಿದುಬಂದಿದೆ.

ಉದಯಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೆಯ ಯಜಮಾನ ಹಣದ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಅಮೀರ್ ಜಾನ್(80), ಫರ್ವೀನ್(30), ರಿಜ್ವಾನ್(45) ಅರ್ಬಿನಾ(10) ಹಾಗೂ ಎರಡು ವರ್ಷದ ಅರಾನ್ ಮೃತಪಟ್ಟಿದ್ದಾರೆ. ರೇಷ್ಮಾ ಬಾನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಬ್ದುಲ್ ಶರೀಫ್ ಎಂಬಾತ ಹಣದ ವೈಷಮ್ಯದ ಹಿನ್ನೆಲೆಯಲ್ಲಿ ಮನೆಗೆ ಪೆಟ್ರೋಲ್ ಸರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+