ಬಿಜೆಪಿ ತೊರೆಯಲು ನಮೋಶಿ, ಬಗಲಿ ಸಜ್ಜು

ಜೆಡಿಎಸ್ ನಿಂದ ಬಿಜೆಪಿಗೆ ಮರಳಿರುವ ದತ್ತಾತ್ರೇಯ ಅವರಿಗೆ ಗುಲ್ಬರ್ಗಾ ದಕ್ಷಿಣ ಕ್ಷೇತ್ರದ ಟಿಕೆಟ್ ನೀಡಿದ್ದರಿಂದ ಶಶೀಲ್ ನಮೋಶಿ ಅಸಮಾಧಾನಗೊಂಡಿದ್ದಾರೆ. ಬೆಂಗಳೂರಿನಗೆ ಆಗಮಿಸಿರುವ ಅವರು ಜೆಡಿಎಸ್ ಅಥವ ಕೆಜೆಪಿ ಸೇರುವ ಬಗ್ಗೆ ಚಿಂತನೆ ನಡೆಸಿದ್ದಾರೆ.
ಎರಡೂ ಪಕ್ಷಗಳ ಟಿಕೆಟ್ ದೊರೆಯದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಲೋಚಿಸಿದ್ದಾರೆ. ನಮೋಶಿ ಬಿಜೆಪಿ ತೊರೆಯುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಗುಲ್ಬರ್ಗಾ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಅವರು ತಯಾರಿ ನಡೆಸಿದ್ದರು.
ಆದರೆ, ಹಾಲಿ ದಕ್ಷಿಣ ಕ್ಷೇತ್ರದ ಜೆಡಿಎಸ್ ಶಾಸಕಿ ಅರುಣಾ ಪಾಟೀಲ್ ಪುತ್ರ ದತ್ತಾತ್ರೇಯ ಪಾಟೀಲ್ ಜೆಡಿಎಸ್ ತೊರೆದು ಬಿಜೆಪಿ ಸೇರಿದರು. ಅವರು ಕ್ಷೇತ್ರದ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿದೆ ಆದ್ದರಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಶಶೀಲ್ ನಮೋಶಿ ಅಸಮಾಧಾನಗೊಂಡಿದ್ದಾರೆ.(ಬಿಜೆಪಿ 2ನೇ ಪಟ್ಟಿ)
ಶೆಟ್ಟರ್ ವಿರುದ್ಧ ಕಿಡಿ : ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿರುದ್ಧ ಶಶೀಲ್ ನಮೋಶಿ ಕೋಪಗೊಂಡಿದ್ದಾರೆ. ನಮೋಶಿ ಅವರನ್ನು ನಾನು ಭೇಟಿ ಮಾಡಿದ್ದೇನೆ. ಯಾವುದೇ ಅಸಮಾಧಾನವಿಲ್ಲ, ಅವರು ಪಕ್ಷ ತೊರೆಯುವುದಿಲ್ಲ ಎಂದು ಶೆಟ್ಟರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.
ಶಶೀಲ್ ನಮೋಶಿ ಅವರು ಹೇಳುವ ಪ್ರಕಾರ ಸಿಎಂ ಅವರನ್ನು ಭೇಟಿ ಮಾಡಿಲ್ಲ. ಮಾಧ್ಯಮಗಳಿಗೆ ಕೇವಲ ಹೇಳಿಕೆ ನೀಡುತ್ತಿದ್ದಾರೆ. ದತ್ತಾತ್ರೇಯ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಜಗದೀಶ್ ಶೆಟ್ಟರ್ ಒತ್ತಡ ಹೇರಿದ್ದರು ಎಂಬುದು ನಮೋಶಿ ಕೋಪಕ್ಕೆ ಕಾರಣವಾಗಿದೆ.
ಟಿಕೆಟ್ ವಂಚಿತ ಬಗಲಿ : ಇಂಡಿ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಡಾ.ಸಾರ್ವಭೌಮ ಬಗಲಿ ಅವರಿಗೆ ಬಿಜೆಪಿಯ ಎರಡನೇ ಪಟ್ಟಿಯಲ್ಲೂ ಟಿಕೆಟ್ ದೊರಕಿಲ್ಲ. ಇದರಿಂದ ಆತಂಕಗೊಂಡಿರುವ ಅವರು ಜೆಡಿಎಸ್ ಕದ ತಟ್ಟುತ್ತಿದ್ದಾರೆ. ಕೆಜೆಪಿ ಅಧ್ಯಕ್ಷ ಯಡಿಯೂರಪ್ಪ ಜೊತೆ ಬಗಲಿ ಗುರುತಿಸಿಕೊಂಡಿದ್ದರು.
ಕೆಜೆಪಿ ಸೇರುವ ಶಾಸಕರ ಪಟ್ಟಿಯಲ್ಲಿ ಡಾ.ಸಾರ್ವಭೌಮ ಬಗಲಿ ಅವರ ಹೆಸರು ಕೇಳಿಬಂದಿತ್ತು. ಆದರೆ, ಅಚ್ಚರಿಯ ಬೆಳವಣಿಯಲ್ಲಿ ಅವರು ಬಿಜೆಪಿಯಲ್ಲೇ ಮುಂದುವರೆದಿದ್ದಾರೆ. ಆದರೆ, ಪಕ್ಷದ ನಾಯಕರು ಅವರಿಗೆ ಟಿಕೆಟ್ ನೀಡಲು ವಿಳಂಬ ಮಾಡುತ್ತಿದ್ದಾರೆ. ಆದ್ದರಿಂದ ಬಗಲಿ ಜೆಡಿಎಸ್ ಸೇರುವ ಆಲೋಚನೆ ನಡೆಸಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications