ರಕ್ಷಿತಾ ಬಿಎಸ್ಆರ್ ಕಾಂಗ್ರೆಸ್ ತೊರೆಯುತ್ತಿರುವುದೇತಕ್ಕೆ?

ಬಿಎಸ್ಆರ್ ಕಾಂಗ್ರೆಸ್ ಟಿಕೆಟ್ನಿಂದ ಚಾಮರಾಜನಗರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಬೇಕಿದ್ದ ರಕ್ಷಿತಾ, ಸಂಪೂರ್ಣ ದಿಕ್ಕನ್ನೇ ಬದಲಾಯಿಸಿದ್ದು ಭಾರತೀಯ ಜನತಾ ಪಕ್ಷದ ಟಿಕೆಟ್ನಿಂದ, ಕಳೆದ ಬಾರಿ ಶೋಭಾ ಕರಂದ್ಲಾಜೆ ಸ್ಪರ್ಧಿಸಿ ಗೆದ್ದಿದ್ದ ಯಶವಂತಪುರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಬಿಎಸ್ಆರ್ ಕಾಂಗ್ರೆಸ್ನ ಸ್ಟಾರ್ ಪ್ರಚಾರಕಿಯಾಗಿದ್ದ ರಕ್ಷಿತಾ ಅವರು ಪಕ್ಷದಿಂದ ಹೊರಬೀಳುವುದು ಹೆಚ್ಚೂಕಡಿಮೆ ಖಚಿತವಾಗಿರುವುದರಿಂದ, ಕೆಲ ದಿನಗಳ ಹಿಂದೆ ಪೂಜಾಗಾಂಧಿ ಮತ್ತು ಬಿಗ್ ಬಾಸ್ನಿಂದ ಓಡಿಸಲ್ಪಟ್ಟಿರುವ ಜಯಲಕ್ಷ್ಮೀ ಅವರನ್ನು ಸೇರಿಸಿಕೊಂಡಿರುವ ಬಿಎಸ್ಆರ್ ಕಾಂಗ್ರೆಸ್ ಒಂದು ಮಟ್ಟಿನ 'ತೂಕ' ಕಳೆದುಕೊಳ್ಳುವುದಂತೂ ಖಚಿತ.
ಜನಪ್ರಿಯ ನಟಿಯಾಗಿದ್ದ ರಕ್ಷಿತಾರನ್ನು ಸೆಳೆಯಲು ಅನ್ಯ ಪಕ್ಷಗಳು ಯತ್ನಿಸುತ್ತಿದ್ದುದು ಇದು ಮೊದಲೇನಲ್ಲ. ಕೆಲ ತಿಂಗಳುಗಳಿಂದ ಈ ಪ್ರಕ್ರಿಯೆ ಜಾರಿಯಲ್ಲಿತ್ತು. ಈಗ ರಕ್ಷಿತಾ ಅವರು ಉಪ ಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿರುವುದು ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ.
ಬಿಎಸ್ಆರ್ ಕಾಂಗ್ರೆಸ್ ತೊರೆಯಲು ಪ್ರಮುಖ ಕಾರಣವೆಂದರೆ, ಚಾಮರಾಜನಗರದಿಂದ ಸ್ಪರ್ಧಿಸಬೇಕಿದ್ದರೆ 'ಫಂಡ್' ಒದಗಿಸಬೇಕು ಎಂದು ರಕ್ಷಿತಾ ಇಟ್ಟಿದ್ದ ಬೇಡಿಕೆಯನ್ನು ಪಕ್ಷದ ಹಿರಿಯ ನಾಯಕರು ನಿರಾಕರಿಸಿದ್ದರು. ಬೇಕಿದ್ದರೆ ಉಳಿದ ಪ್ರದೇಶಗಳಲ್ಲಿ ನಡೆಸುವ ಪ್ರಚಾರಕ್ಕೆ ಹಣ ಒದಗಿಸುವ ವಾಗ್ದಾನ ನೀಡಲಾಗಿತ್ತು. ರಕ್ಷಿತಾ ಮುನಿಸಿಕೊಳ್ಳಲು ಇಷ್ಟು ಸಾಕಾಗಿತ್ತು.
ಇದೇ ಸಂದರ್ಭದಲ್ಲಿ ರಕ್ಷಿತಾ ಜೊತೆ ಬಿಜೆಪಿಯ ಅಶೋಕ್ ಅವರ ಮಾತುಕತೆಗಳು ನಡೆದಿವೆ. ಯಶವಂತಪುರದಲ್ಲಿ ಸ್ಪರ್ಧಿಸುವುದಾದರೆ ಪ್ರಚಾರದ ಸಂಪೂರ್ಣ ಖರ್ಚುವೆಚ್ಚವನ್ನು ಬಿಜೆಪಿ ನಾಯಕರೇ ಭರಿಸುವುದಾಗಿ ಮಾತು ಕೊಟ್ಟಿದ್ದರಿಂದ ರಕ್ಷಿತಾ ಪಕ್ಷಾಂತರ ಮಾಡಲು ನಿರ್ಧರಿಸಿದ್ದಾರೆ. ವೈದ್ಯರು ಹೇಳಿದ್ದು ಹಾಲು ಅನ್ನ, ರೋಗಿ ಬಯಸಿದ್ದು ಹಾಲು ಅನ್ನ!
ಶೋಭಾ ಕರಂದ್ಲಾಜೆಯವರ ಪಕ್ಷಾಂತರದಿಂದ ತೆರವಾಗಿದ್ದ ಯಶವಂತಪುರ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ನಿಲ್ಲಿಸಬೇಕೆಂಬ ಜಿಜ್ಞಾಸೆಯಲ್ಲಿ ಬಿಜೆಪಿ ತೊಡಗಿತ್ತು. ಅದಕ್ಕೆ ಉತ್ತರ ರಕ್ಷಿತಾ ರೂಪದಲ್ಲಿ ಸಿಕ್ಕಂತಾಗಿದೆ. ಯಶವಂತಪುರದಲ್ಲಿ ಗೌಡರ ದರ್ಬಾರು ಜೋರಾಗಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ, ಕಳೆದ ಬಾರಿ ಕೇವಲ 1 ಸಾವಿರ ಮತಗಳಿಂದ ಸೋತಿದ್ದ ಸೋಮಶೇಖರ ಗೌಡ ಸ್ಪರ್ಧಿಸುತ್ತಿದ್ದರೆ, ಬಿಎಸ್ಆರ್ ಕಾಂಗ್ರೆಸ್ನಿಂದ ಲೋಕೇಶ್ ಗೌಡ ಮತ್ತು ಜವರಾಯ ಗೌಡ ಜೆಡಿಎಸ್ನಿಂದ ಕಣಕ್ಕಿಳಿದಿದ್ದಾರೆ.
ಬಿಜೆಪಿಯ ಆಫರನ್ನು ರಕ್ಷಿತಾ ಖಂಡಿತ ತಿರಸ್ಕರಿಸುವುದಿಲ್ಲ ಎಂಬುದು ರಾಜಕೀಯ ಪಂಡಿತರು ಹೇಳುತ್ತಿರುವ ಖಚಿತ ಮಾತು. ಅಷ್ಟಕ್ಕೂ ರಕ್ಷಿತಾ ಬಿಎಸ್ಆರ್ ಕಾಂಗ್ರೆಸ್ನಲ್ಲಿ ಆಸಕ್ತಿ ಕಳೆದುಕೊಂಡಿದ್ದಾರೆ ಎಂಬ ಮಾತು ಕೂಡ ಕೇಳಿಬಂದಿತ್ತು. ರಾಯಚೂರಿನಿಂದ ಸ್ಪರ್ಧಿಸುತ್ತಿರುವ ಪೂಜಾಗಾಂಧಿ ಅವರು ಬಳ್ಳಾರಿಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷ ಸೇರಿದಾಗ ರಕ್ಷಿತಾ ಅಸುರಕ್ಷಿತರಂತೆ ಕಂಡುಬಂದಿದ್ದರು, ಅವರು ಬಳ್ಳಾರಿ ಬಿಸಿಲಿಗೆ ಬಾಡಿಹೋದವರಂತೆ ಕಾಣುತ್ತಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications