ರಕ್ಷಿತಾ ಬಿಎಸ್ಆರ್ ಕಾಂಗ್ರೆಸ್ ತೊರೆಯುತ್ತಿರುವುದೇತಕ್ಕೆ?

ಬಿಎಸ್ಆರ್ ಕಾಂಗ್ರೆಸ್ ಟಿಕೆಟ್ನಿಂದ ಚಾಮರಾಜನಗರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಬೇಕಿದ್ದ ರಕ್ಷಿತಾ, ಸಂಪೂರ್ಣ ದಿಕ್ಕನ್ನೇ ಬದಲಾಯಿಸಿದ್ದು ಭಾರತೀಯ ಜನತಾ ಪಕ್ಷದ ಟಿಕೆಟ್ನಿಂದ, ಕಳೆದ ಬಾರಿ ಶೋಭಾ ಕರಂದ್ಲಾಜೆ ಸ್ಪರ್ಧಿಸಿ ಗೆದ್ದಿದ್ದ ಯಶವಂತಪುರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಬಿಎಸ್ಆರ್ ಕಾಂಗ್ರೆಸ್ನ ಸ್ಟಾರ್ ಪ್ರಚಾರಕಿಯಾಗಿದ್ದ ರಕ್ಷಿತಾ ಅವರು ಪಕ್ಷದಿಂದ ಹೊರಬೀಳುವುದು ಹೆಚ್ಚೂಕಡಿಮೆ ಖಚಿತವಾಗಿರುವುದರಿಂದ, ಕೆಲ ದಿನಗಳ ಹಿಂದೆ ಪೂಜಾಗಾಂಧಿ ಮತ್ತು ಬಿಗ್ ಬಾಸ್ನಿಂದ ಓಡಿಸಲ್ಪಟ್ಟಿರುವ ಜಯಲಕ್ಷ್ಮೀ ಅವರನ್ನು ಸೇರಿಸಿಕೊಂಡಿರುವ ಬಿಎಸ್ಆರ್ ಕಾಂಗ್ರೆಸ್ ಒಂದು ಮಟ್ಟಿನ 'ತೂಕ' ಕಳೆದುಕೊಳ್ಳುವುದಂತೂ ಖಚಿತ.
ಜನಪ್ರಿಯ ನಟಿಯಾಗಿದ್ದ ರಕ್ಷಿತಾರನ್ನು ಸೆಳೆಯಲು ಅನ್ಯ ಪಕ್ಷಗಳು ಯತ್ನಿಸುತ್ತಿದ್ದುದು ಇದು ಮೊದಲೇನಲ್ಲ. ಕೆಲ ತಿಂಗಳುಗಳಿಂದ ಈ ಪ್ರಕ್ರಿಯೆ ಜಾರಿಯಲ್ಲಿತ್ತು. ಈಗ ರಕ್ಷಿತಾ ಅವರು ಉಪ ಮುಖ್ಯಮಂತ್ರಿ ಆರ್ ಅಶೋಕ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿರುವುದು ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ.
ಬಿಎಸ್ಆರ್ ಕಾಂಗ್ರೆಸ್ ತೊರೆಯಲು ಪ್ರಮುಖ ಕಾರಣವೆಂದರೆ, ಚಾಮರಾಜನಗರದಿಂದ ಸ್ಪರ್ಧಿಸಬೇಕಿದ್ದರೆ 'ಫಂಡ್' ಒದಗಿಸಬೇಕು ಎಂದು ರಕ್ಷಿತಾ ಇಟ್ಟಿದ್ದ ಬೇಡಿಕೆಯನ್ನು ಪಕ್ಷದ ಹಿರಿಯ ನಾಯಕರು ನಿರಾಕರಿಸಿದ್ದರು. ಬೇಕಿದ್ದರೆ ಉಳಿದ ಪ್ರದೇಶಗಳಲ್ಲಿ ನಡೆಸುವ ಪ್ರಚಾರಕ್ಕೆ ಹಣ ಒದಗಿಸುವ ವಾಗ್ದಾನ ನೀಡಲಾಗಿತ್ತು. ರಕ್ಷಿತಾ ಮುನಿಸಿಕೊಳ್ಳಲು ಇಷ್ಟು ಸಾಕಾಗಿತ್ತು.
ಇದೇ ಸಂದರ್ಭದಲ್ಲಿ ರಕ್ಷಿತಾ ಜೊತೆ ಬಿಜೆಪಿಯ ಅಶೋಕ್ ಅವರ ಮಾತುಕತೆಗಳು ನಡೆದಿವೆ. ಯಶವಂತಪುರದಲ್ಲಿ ಸ್ಪರ್ಧಿಸುವುದಾದರೆ ಪ್ರಚಾರದ ಸಂಪೂರ್ಣ ಖರ್ಚುವೆಚ್ಚವನ್ನು ಬಿಜೆಪಿ ನಾಯಕರೇ ಭರಿಸುವುದಾಗಿ ಮಾತು ಕೊಟ್ಟಿದ್ದರಿಂದ ರಕ್ಷಿತಾ ಪಕ್ಷಾಂತರ ಮಾಡಲು ನಿರ್ಧರಿಸಿದ್ದಾರೆ. ವೈದ್ಯರು ಹೇಳಿದ್ದು ಹಾಲು ಅನ್ನ, ರೋಗಿ ಬಯಸಿದ್ದು ಹಾಲು ಅನ್ನ!
ಶೋಭಾ ಕರಂದ್ಲಾಜೆಯವರ ಪಕ್ಷಾಂತರದಿಂದ ತೆರವಾಗಿದ್ದ ಯಶವಂತಪುರ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ನಿಲ್ಲಿಸಬೇಕೆಂಬ ಜಿಜ್ಞಾಸೆಯಲ್ಲಿ ಬಿಜೆಪಿ ತೊಡಗಿತ್ತು. ಅದಕ್ಕೆ ಉತ್ತರ ರಕ್ಷಿತಾ ರೂಪದಲ್ಲಿ ಸಿಕ್ಕಂತಾಗಿದೆ. ಯಶವಂತಪುರದಲ್ಲಿ ಗೌಡರ ದರ್ಬಾರು ಜೋರಾಗಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ, ಕಳೆದ ಬಾರಿ ಕೇವಲ 1 ಸಾವಿರ ಮತಗಳಿಂದ ಸೋತಿದ್ದ ಸೋಮಶೇಖರ ಗೌಡ ಸ್ಪರ್ಧಿಸುತ್ತಿದ್ದರೆ, ಬಿಎಸ್ಆರ್ ಕಾಂಗ್ರೆಸ್ನಿಂದ ಲೋಕೇಶ್ ಗೌಡ ಮತ್ತು ಜವರಾಯ ಗೌಡ ಜೆಡಿಎಸ್ನಿಂದ ಕಣಕ್ಕಿಳಿದಿದ್ದಾರೆ.
ಬಿಜೆಪಿಯ ಆಫರನ್ನು ರಕ್ಷಿತಾ ಖಂಡಿತ ತಿರಸ್ಕರಿಸುವುದಿಲ್ಲ ಎಂಬುದು ರಾಜಕೀಯ ಪಂಡಿತರು ಹೇಳುತ್ತಿರುವ ಖಚಿತ ಮಾತು. ಅಷ್ಟಕ್ಕೂ ರಕ್ಷಿತಾ ಬಿಎಸ್ಆರ್ ಕಾಂಗ್ರೆಸ್ನಲ್ಲಿ ಆಸಕ್ತಿ ಕಳೆದುಕೊಂಡಿದ್ದಾರೆ ಎಂಬ ಮಾತು ಕೂಡ ಕೇಳಿಬಂದಿತ್ತು. ರಾಯಚೂರಿನಿಂದ ಸ್ಪರ್ಧಿಸುತ್ತಿರುವ ಪೂಜಾಗಾಂಧಿ ಅವರು ಬಳ್ಳಾರಿಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷ ಸೇರಿದಾಗ ರಕ್ಷಿತಾ ಅಸುರಕ್ಷಿತರಂತೆ ಕಂಡುಬಂದಿದ್ದರು, ಅವರು ಬಳ್ಳಾರಿ ಬಿಸಿಲಿಗೆ ಬಾಡಿಹೋದವರಂತೆ ಕಾಣುತ್ತಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications