ದೊಡ್ಡಗೌಡ್ರ ಕುಟುಂಬದಿಂದ ಒಟ್ಟು ಎಷ್ಟು ಮಂದಿ ಕಣಕ್ಕೆ?

ಸಾಕ್ಷಾತ್ ದೇವೇಗೌಡರೇ ತಮ್ಮ ಮತ್ತೋ ಒಬ್ಬ ಸೊಸೆಯೂ ಚುನಾವಣೆಗೆ ನಿಂತು, ಗೆದ್ದು ಬರಲಿ ಎಂದು ಆಶೀರ್ವದಿಸಿದ್ದರೂ ಅವರ ಕಿರಿಯ ಪುತ್ರ ಮುಂದೆ ಮುಖ್ಯಮಂತ್ರಿಯಾಗಿ ಅಧಿಕಾರ ನಿಭಾಯಿಸಬೇಕಿರುವವನು ನಾನು.
ನೀವು ಹೇಳಿದಂತೆ ನಿಮ್ಮ ಮತ್ತೊಬ್ಬ ಸೊಸೆ ಕಣಕ್ಕಿಳಿದು ಗೆದ್ದುಬಂದರೆ ಮನೆಯಲ್ಲೇ ರಾಜಕೀಯ ಧ್ರುವೀಕರಣ ಉದ್ಭವಿಸುತ್ತದೆ. ಹಾಗಾಗುವುದು ಬೇಡ ಎಂದು ಜೆಡಿಎಸ್ ಶಾಸಕಾಂಗ ನಾಯಕ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ಅವರ ರಾಜಕೀಯ ಆಕಾಂಕ್ಷೆಗೆ ತಣ್ಣಿರು ಎರಚಿದ್ದಾರೆ.
ಆದರೆ ಭವಾನಿ ಮೇಡಂಗೆ ತಮ್ಮ ತವರೂರು ಬೇಲೂರು ಬಿಟ್ಟು ಮಂಡ್ಯ ಜಿಲ್ಲೆಯಲ್ಲಿ (ಕೆಆರ್ ಪೇಟೆ) ಸ್ಪರ್ಧಿಸುವ ಅದಮ್ಯ ಬಯಕೆಯಿತ್ತು ಎಂಬುದು ಗಮನಾರ್ಹ. ಕುತೂಹಲದ ವಿಷಯವೆಂದರೆ ಖುದ್ದು ರೇವಣ್ಣ ಅವರೂ ಇದನ್ನೇ ಬಯಸಿದ್ದರು. ತಮ್ಮ ಪತ್ನಿಯೂ ಶಾಸಕಿಯಾಗಲಿ ಎಂದು ಆಸೆಪಟ್ಟಿದ್ದರು. ಆದರೆ ಕುಮಾರತಮ್ಮ ಅದೆಲ್ಲಾ ನಡೆಯೋಲ್ಲ ಅಂದುಬಿಟ್ಟಿದ್ದಾರೆ.
ಹೀಗಾಗಿ ಭವಾನಿ ಮೇಡಂ ರಾಜಕೀಯ ಪ್ರವೇಶಕ್ಕೆ ಇನ್ನೂ ಸಮಯ ಕೂಡಿ ಬಂದಿಲ್ಲ. ಅತ್ತ ಓರಗಿತ್ತಿ ಅನಿತಾ ಕುಮಾರಸ್ವಾಮಿ ಅವರು ಏ. 15 ರಂದು ನಾಮಪತ್ರ ಸಲ್ಲಿಸುವುದು ನಿಕ್ಕಿಯಾಗಿದೆ. ಆದರೆ ಶ್ರವಣಬೆಳಗೊಳದಲ್ಲಿ ಸಮೀಪ ಸಂಬಂಧಿ ಬಾಲಕೃಷ್ಣ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.
ನಿನ್ನೆ ಶುಕ್ರವಾರ ಪಕ್ಷದ ಕಚೇರಿಯಲ್ಲಿ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ತಾವು, ಅನಿತಾ ಕುಮಾರಸ್ವಾಮಿ ಹಾಗೂ ಎಚ್ಡಿ ರೇವಣ್ಣ ಮಾತ್ರ ಸ್ಪರ್ಧೆ ಮಾಡಲಿದ್ದು ನಮ್ಮ ಕುಟುಂಬದ ಬೇರಾವುದೇ ಸದಸ್ಯರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.
ಎಚ್ಡಿ ರೇವಣ್ಣ ಅವರು ಹೊಳೇನರಸೀಪುರದಿಂದಲೇ ಸ್ಪರ್ಧಿಸಲಿದ್ದಾರೆ. ಅವರು ಕ್ಷೇತ್ರ ಬದಲಾಯಿಸುವುದಿಲ್ಲ. ಯಾರಿಗೂ ಹೆದರಿ ಬೇರೆ ಕಡೆ ಹೋಗುವ ಪ್ರಶ್ನೆಯೂ ಇಲ್ಲ ಎಂದೂ ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications