ಸ್ವರಯೋಗಿ ಪಿ.ಬಿ.ಶ್ರೀನಿವಾಸ್ ವಿಧಿವಶ

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಿ.ಬಿ.ಶ್ರೀನಿವಾಸ್ (83) ಚೆನ್ನೈನ ನಿವಾಸದಲ್ಲಿ ಭಾನುವಾರ ವಿಧಿವಶರಾದರು. ಆಂಧ್ರದ ಕಾಕಿನಾಡದಲ್ಲಿ 1930ರಲ್ಲಿ ಅವರು ಜನಿಸಿದ್ದರು. ಕನ್ನಡ, ತಮಿಳು, ತೆಲುಗು, ಮಲೆಯಾಳಂ ಸೇರಿಂದಂತೆ ಸುಮಾರು 9 ಭಾಷೆಗಳಲ್ಲಿ 3 ಸಾವಿರಕ್ಕೂ ಅಧಿಕ ಹಾಡುಗಳಿಗೆ ತಮ್ಮ ಅದ್ಭುತ ಕಂಠದಾನ ಮಾಡಿದ್ದರು ಪಿ.ಬಿ.ಶ್ರೀನಿವಾಸ್.
ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಕಳೆದವಾರವಷ್ಟೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಚೆನ್ನೈನ ಸಿಐಟಿ ನಗರದಲ್ಲಿರುವ ಸ್ವಗೃಹಕ್ಕೆ ಕರೆತರಲಾಗಿತ್ತು. ಇಂದು ಮಧ್ಯಾಹ್ನ 1 ಗಂಟೆಗೆ ಚೆನ್ನೈನ ಮನೆಯಲ್ಲಿ ಸ್ನಾನ ಮುಗಿಸಿ, ಹೊರ ಬಂದ ಶ್ರೀನಿವಾಸ್ ಅವರು ಇದ್ದಕ್ಕಿದ್ದ ಹಾಗೆ ಕುಸಿದು ಬಿದ್ದರು. ನಂತರ ಅವರನ್ನು ಪರೀಕ್ಷಿಸಿದಾಗ ಅವರ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀನಿವಾಸ್ ಅವರ ಪುತ್ರ ನಂದ ಕಿಶೋರ್ ತಂದೆ ಅವರ ಪಾರ್ಥೀವ ಶರೀರವನ್ನು ಇಂದು ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗುತ್ತದೆ. ನಾಳೆ ಚೆನ್ನೈನಲ್ಲಿಯೇ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಪಿ.ಬಿ.ಶ್ರೀನಿವಾಸ್ ಅವರ ಪೂರ್ಣ ಹೆಸರು ಪ್ರತಿವಾದಿ ಭಯಂಕರ ಶ್ರೀನಿವಾಸ್. ಇದು ಅವರ ಮನೆತನದ ಹೆಸರಾಗಿತ್ತು. ಪಿ.ಬಿ.ಶ್ರೀನಿವಾಸ್ ಎಂದರೆ ಡಾ.ರಾಜ್ ಕುಮಾರ್ ಅವರ ಧ್ವನಿ ಎಂದೇ ಖ್ಯಾತಿ ಗಳಿಸಿದ್ದರು. ಗಂಧದ ಗುಡಿ ಚಿತ್ರದ ನಾವಾಡುವ ನುಡಿಯೇ ಕನ್ನಡನುಡಿ, ಕಸ್ತೂರಿ ನಿವಾಸ ಚಿತ್ರದ ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು, ಬಂಗಾರದ ಮನುಷ್ಯ ಚಿತ್ರದ ನಗು ನಗುತ ನಲಿ ನಲಿ ಮುಂತಾದ ಗೀತೆಗಳು ಕನ್ನಡದ ಮಟ್ಟಿಗೆ ಇಂದಿಗೂ ಪ್ರಸ್ತುತವಾಗಿರಲು ಶ್ರೀನಿವಾಸ್ ಅವರ ಮಧುರ ಕಂಠವೇ ಕಾರಣ.
ಕನ್ನಡದ ಜಾತಕಫಲ ಚಿತ್ರದ ಗೀತೆಯನ್ನು ಹಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಪಾದರ್ಪಣೆ ಮಾಡಿದ್ದರು. ಸರಳ, ಸಜ್ಜನ ವ್ಯಕ್ತಿತ್ವದ ಪಿ.ಬಿ.ಶ್ರೀನಿವಾಸ್ ಸದಾ ಪೇಟ ಧರಿಸಿರುತ್ತಿದ್ದರು. ಅವರ ಜೇಬಿನಲ್ಲಿ ಹತ್ತಕ್ಕಿಂತ ಹೆಚ್ಚು ಪೆನ್ನುಗಳನ್ನು ಇಟ್ಟುಕೊಂಡಿರುತ್ತಿದ್ದರು. ವೇದಿಕೆಯ ಸಮಾರಂಭದಲ್ಲಿ ಹಾಡನ್ನು ರಚಿಸಿ, ಹಾಡುವಷ್ಟು ಪ್ರತಿಭಾವಂತರಾಗಿದ್ದರು.
ಕನ್ನಡದ ವರನಟ ಡಾ.ರಾಜ್ ಅವರಿಗೆ ಪಿ.ಬಿ. ಶ್ರೀನಿವಾಸ್ ಅವರ ಕಂಠ ಬಹಳ ಸೂಕ್ತವಾಗಿ ಹೊಂದುತ್ತಿತ್ತು. ಡಾ.ರಾಜಕುಮಾರ್ ಸ್ವತ: ಹಾಡಲು ಪ್ರಾರಂಭಿಸುವವರೆಗೆ , ಅವರ ಎಲ್ಲಾ ಚಿತ್ರಗಳಿಗೂ ಪಿ.ಬಿ.ಶ್ರೀನಿವಾಸ್ ಧ್ವನಿ ನೀಡಿದ್ದರು. ರಾಜ್ ಕುಮಾರ್ ಅವರಿಗೆ ಹಿನ್ನೆಲೆ ಗಾಯಕರಾಗಿ ಇನ್ನೂರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ ಕೀರ್ತಿ ಪಿ.ಬಿ.ಶ್ರೀನಿವಾಸ್ ಅವರಿಗೆ ಸಲ್ಲುತ್ತದೆ.
ಗಣ್ಯರ ಕಂಬನಿ : ಹಿನ್ನಲೆ ಗಾಯಕ ಪಿ.ಬಿ. ಶ್ರೀನಿವಾಸ್ ಅವರ ಹಠಾತ್ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ನಿರ್ಮಾಪಕ, ನಟ, ದ್ವಾರಕೀಶ್, ಹಿರಿಯ ನಟ ಶಿವರಾಂ, ಶ್ರೀನಾಥ್, ಹಿರಿಯ ನಟಿ ಲೀಲಾವತಿ ಮುಂತಾವರು ಕಂಬನಿ ಮಿಡಿದಿದ್ದು, ಪಿಬಿಎಸ್ ಅವರು ಆತ್ಮಕ್ಕೆ ಶಾಂತಿ ಕೋರಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications