ಸ್ವರಯೋಗಿ ಪಿ.ಬಿ.ಶ್ರೀನಿವಾಸ್ ವಿಧಿವಶ

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಿ.ಬಿ.ಶ್ರೀನಿವಾಸ್ (83) ಚೆನ್ನೈನ ನಿವಾಸದಲ್ಲಿ ಭಾನುವಾರ ವಿಧಿವಶರಾದರು. ಆಂಧ್ರದ ಕಾಕಿನಾಡದಲ್ಲಿ 1930ರಲ್ಲಿ ಅವರು ಜನಿಸಿದ್ದರು. ಕನ್ನಡ, ತಮಿಳು, ತೆಲುಗು, ಮಲೆಯಾಳಂ ಸೇರಿಂದಂತೆ ಸುಮಾರು 9 ಭಾಷೆಗಳಲ್ಲಿ 3 ಸಾವಿರಕ್ಕೂ ಅಧಿಕ ಹಾಡುಗಳಿಗೆ ತಮ್ಮ ಅದ್ಭುತ ಕಂಠದಾನ ಮಾಡಿದ್ದರು ಪಿ.ಬಿ.ಶ್ರೀನಿವಾಸ್.
ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಕಳೆದವಾರವಷ್ಟೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಚೆನ್ನೈನ ಸಿಐಟಿ ನಗರದಲ್ಲಿರುವ ಸ್ವಗೃಹಕ್ಕೆ ಕರೆತರಲಾಗಿತ್ತು. ಇಂದು ಮಧ್ಯಾಹ್ನ 1 ಗಂಟೆಗೆ ಚೆನ್ನೈನ ಮನೆಯಲ್ಲಿ ಸ್ನಾನ ಮುಗಿಸಿ, ಹೊರ ಬಂದ ಶ್ರೀನಿವಾಸ್ ಅವರು ಇದ್ದಕ್ಕಿದ್ದ ಹಾಗೆ ಕುಸಿದು ಬಿದ್ದರು. ನಂತರ ಅವರನ್ನು ಪರೀಕ್ಷಿಸಿದಾಗ ಅವರ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀನಿವಾಸ್ ಅವರ ಪುತ್ರ ನಂದ ಕಿಶೋರ್ ತಂದೆ ಅವರ ಪಾರ್ಥೀವ ಶರೀರವನ್ನು ಇಂದು ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗುತ್ತದೆ. ನಾಳೆ ಚೆನ್ನೈನಲ್ಲಿಯೇ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಪಿ.ಬಿ.ಶ್ರೀನಿವಾಸ್ ಅವರ ಪೂರ್ಣ ಹೆಸರು ಪ್ರತಿವಾದಿ ಭಯಂಕರ ಶ್ರೀನಿವಾಸ್. ಇದು ಅವರ ಮನೆತನದ ಹೆಸರಾಗಿತ್ತು. ಪಿ.ಬಿ.ಶ್ರೀನಿವಾಸ್ ಎಂದರೆ ಡಾ.ರಾಜ್ ಕುಮಾರ್ ಅವರ ಧ್ವನಿ ಎಂದೇ ಖ್ಯಾತಿ ಗಳಿಸಿದ್ದರು. ಗಂಧದ ಗುಡಿ ಚಿತ್ರದ ನಾವಾಡುವ ನುಡಿಯೇ ಕನ್ನಡನುಡಿ, ಕಸ್ತೂರಿ ನಿವಾಸ ಚಿತ್ರದ ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು, ಬಂಗಾರದ ಮನುಷ್ಯ ಚಿತ್ರದ ನಗು ನಗುತ ನಲಿ ನಲಿ ಮುಂತಾದ ಗೀತೆಗಳು ಕನ್ನಡದ ಮಟ್ಟಿಗೆ ಇಂದಿಗೂ ಪ್ರಸ್ತುತವಾಗಿರಲು ಶ್ರೀನಿವಾಸ್ ಅವರ ಮಧುರ ಕಂಠವೇ ಕಾರಣ.
ಕನ್ನಡದ ಜಾತಕಫಲ ಚಿತ್ರದ ಗೀತೆಯನ್ನು ಹಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಪಾದರ್ಪಣೆ ಮಾಡಿದ್ದರು. ಸರಳ, ಸಜ್ಜನ ವ್ಯಕ್ತಿತ್ವದ ಪಿ.ಬಿ.ಶ್ರೀನಿವಾಸ್ ಸದಾ ಪೇಟ ಧರಿಸಿರುತ್ತಿದ್ದರು. ಅವರ ಜೇಬಿನಲ್ಲಿ ಹತ್ತಕ್ಕಿಂತ ಹೆಚ್ಚು ಪೆನ್ನುಗಳನ್ನು ಇಟ್ಟುಕೊಂಡಿರುತ್ತಿದ್ದರು. ವೇದಿಕೆಯ ಸಮಾರಂಭದಲ್ಲಿ ಹಾಡನ್ನು ರಚಿಸಿ, ಹಾಡುವಷ್ಟು ಪ್ರತಿಭಾವಂತರಾಗಿದ್ದರು.
ಕನ್ನಡದ ವರನಟ ಡಾ.ರಾಜ್ ಅವರಿಗೆ ಪಿ.ಬಿ. ಶ್ರೀನಿವಾಸ್ ಅವರ ಕಂಠ ಬಹಳ ಸೂಕ್ತವಾಗಿ ಹೊಂದುತ್ತಿತ್ತು. ಡಾ.ರಾಜಕುಮಾರ್ ಸ್ವತ: ಹಾಡಲು ಪ್ರಾರಂಭಿಸುವವರೆಗೆ , ಅವರ ಎಲ್ಲಾ ಚಿತ್ರಗಳಿಗೂ ಪಿ.ಬಿ.ಶ್ರೀನಿವಾಸ್ ಧ್ವನಿ ನೀಡಿದ್ದರು. ರಾಜ್ ಕುಮಾರ್ ಅವರಿಗೆ ಹಿನ್ನೆಲೆ ಗಾಯಕರಾಗಿ ಇನ್ನೂರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ ಕೀರ್ತಿ ಪಿ.ಬಿ.ಶ್ರೀನಿವಾಸ್ ಅವರಿಗೆ ಸಲ್ಲುತ್ತದೆ.
ಗಣ್ಯರ ಕಂಬನಿ : ಹಿನ್ನಲೆ ಗಾಯಕ ಪಿ.ಬಿ. ಶ್ರೀನಿವಾಸ್ ಅವರ ಹಠಾತ್ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ನಿರ್ಮಾಪಕ, ನಟ, ದ್ವಾರಕೀಶ್, ಹಿರಿಯ ನಟ ಶಿವರಾಂ, ಶ್ರೀನಾಥ್, ಹಿರಿಯ ನಟಿ ಲೀಲಾವತಿ ಮುಂತಾವರು ಕಂಬನಿ ಮಿಡಿದಿದ್ದು, ಪಿಬಿಎಸ್ ಅವರು ಆತ್ಮಕ್ಕೆ ಶಾಂತಿ ಕೋರಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications