ಮೈತ್ರಿ ಮಾತುಕತೆ : ಸಿಎಂ ಜೊತೆ ಶ್ರೀರಾಮುಲು

ಶನಿವಾರ ರಾತ್ರಿ ಸಿಎಂ ಗೃಹ ಕಚೇರಿಗೆ ಭೇಟಿ ನೀಡಿದ ಶ್ರೀರಾಮುಲು ಜಗದೀಶ್ ಶೆಟ್ಟರ್ ಜೊತೆ ಮಾತುಕತೆ ನಡೆಸಿರು. ಇಬ್ಬರು ನಾಯಕರು ಮೈತ್ರಿ ಇಲ್ಲವೇ ವಿಲೀನ ಕುರಿತು ಮಾತುಕತೆ ನಡೆಸಿದ್ದಾರೆ ಎಂದ ಸಿಎಂ ಆಪ್ತ ಮೂಲಗಳು ತಿಳಿಸಿವೆ. ಆದರೆ, ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿದುಬಂದಿದೆ.
ಏಕೆ ವಿಲೀನ : ಶ್ರೀರಾಮುಲು ಸದ್ಯ ಒಬ್ಬಂಟಿಯಾಗಿದ್ದಾರೆ. ಅವರ ಬೆನ್ನೆಲುಬಾಗಿ ನಿಲ್ಲಬೇಕಾಗಿದ್ದ ಬಳ್ಳಾರಿ ಜಿಲ್ಲೆಯ ಶಾಸಕರಾದ ಸೋಮಶೇಖರ ರೆಡ್ಡಿ ಹಾಗೂ ಬಿ.ನಾಗೇಂದ್ರ ಬಿಎಸ್ಆರ್ ಕಾಂಗ್ರೆಸ್ ಸೇರುವುದೇ ಅನುಮಾನ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ಪಕ್ಷ ಹಲವು ಆಂತರಿಕ ಸಮಸ್ಯೆಗಳನ್ನು ಎದುರಿಸುತ್ತಿರುವಾಗ ಬೇರೆ ಪಕ್ಷದೊಂದಿಗೆ ವಿಲೀನ ಅನಿವಾರ್ಯ ಎಂದು ಶ್ರೀರಾಮುಲು ಚಿಂತಿಸಿದ್ದಾರೆ. ಬಳ್ಳಾರಿಯ ಕೆಲ ಮುಖಂಡರು ಶ್ರೀ ರಾಮುಲು ಅವರಿಗೆ ವಿಲೀನದ ಬಗ್ಗೆ ಚಿಂತನೆ ನಡೆಸಲು ಸಲಹೆ ನೀಡಿದ್ದರು ಎಂದು ಹೇಳಲಾಗುತ್ತಿದೆ.
ಉನ್ನತ ಮೂಲಗಳ ಪ್ರಕಾರ, ಬಳ್ಳಾರಿ, ರಾಯಚೂರು, ಗದಗ ಜಿಲ್ಲೆಗಳ ಕೆಲವು ಕ್ಷೇತ್ರಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ರಾಮುಲು ಚರ್ಚೆ ನಡೆಸಿದ್ದಾರೆ. ಆದರೆ, ಬಿಜೆಪಿಯಿಂದ ಅಂತಿಮ ತೀರ್ಮಾನ ಪ್ರಕಟವಾಗಿಲ್ಲ.
ಅಲ್ಲದೇ ಬಿಎಸ್ಆರ್ ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ಹೊಂದಾಣಿಕೆ ಬೇಡ ಎಂದು ಬಿಜೆಪಿಯ ರಾಜ್ಯದ ಹಿರಿಯ ಮುಖಂಡರು ಅಭಿಪ್ರಾಯಪಟ್ಟಿದ್ದು, ಒಪ್ಪಂದ ಅಥವ ವಿಲೀನ ಮುರಿದು ಬೀಳುಸ ಸಂಭವವಿದೆ.
ಕೆಲವು ದಿನಗಳ ಹಿಂದೆ ಜೆಡಿಎಸ್ ನೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲು ಬಿಎಸ್ಆರ್ ಕಾಂಗ್ರೆಸ್ ಪ್ರಯತ್ನಿಸಿತ್ತು. ಆದರೆ, ದೊಡ್ಡ ಗೌಡರು ಅದಕ್ಕೆ ಫುಲ್ ಸ್ಟಾಪ್ ಹಾಕಿ, ಶ್ರೀರಾಮುಲು ಆಸೆಗೆ ತಣ್ಣೀರು ಸುರಿದ್ದಿದ್ದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications